Advertisment

ರಾಜ್ಯದಲ್ಲಿ ಮತ್ತೊಂದು ಹುಲಿ ಹತ್ಯೆ: ಹನೂರು ಬಳಿ ಹುಲಿಯ ಅರ್ಧ ಕಳೆಬರ ಪತ್ತೆ, ಕೊಂದವರಾರು?

ಕೆಲ ತಿಂಗಳ ಹಿಂದೆ ಚಾಮರಾಜನಗರ ಜಿಲ್ಲೆಯಲ್ಲಿ ಹಸುವನ್ನು ಕೊಂದ ಹುಲಿಗಳಿಗೆ ವಿಷ ಹಾಕಿದ್ದರು. ಆ ಕೇಸ್‌ನ ಆರೋಪಿಗಳನ್ನು ಬಂಧಿಸಲಾಗಿದೆ. ಈಗ ಮಲೆ ಮಹದೇಶ್ವರ ಬೆಟ್ಟದ ಬಳಿಯ ಹನೂರು ಗಸ್ತಿಯಲ್ಲಿ ಮತ್ತೊಂದು ಹುಲಿ ಕೊಲ್ಲಲಾಗಿದೆ. ಹುಲಿಯ ಅರ್ಧ ಕಳೇಬರ ಪತ್ತೆಯಾಗಿದೆ. ಕೊಂದವರಾರು?

author-image
Chandramohan
TIGER KILLED IN MM HILLS
Advertisment
  • ಮಲೆಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ ಬೆಳಕಿಗೆ
  • ಹುಲಿಯ ಅರ್ಧ ಕಳೇಬರ ಮಾತ್ರವೇ ಪತ್ತೆ
  • ಹುಲಿಯನ್ನು ಕೊಂದವರಾರು ಎಂಬ ಬಗ್ಗೆ ಅರಣ್ಯ ಇಲಾಖೆಯ ತನಿಖೆ

ಚಾಮರಾಜನಗರ ಜಿಲ್ಲೆಯ  ಮಲೆಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆಯ  ಘಟನೆ ನಡೆದಿದೆ. ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿದೆ. ಹುಲಿ ಹತ್ಯೆಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಈ ಸಂಬಂಧ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.  ಪಿಸಿಸಿಎಫ್ ಸ್ಮಿತಾ ಬಿಜ್ಜೂರು ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದ್ದು,  ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸಿದ್ದಾರೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳು ಹಾಗೂ ಕಳ್ಳಬೇಟೆಗಾರರ ವಿರುದ್ಧ  ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದಾರೆ. 
ಎಂಟು ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆ ಮಾಡಿ ಕಾನೂನು ರೀತ್ಯ ದಂಡನೆ ಕೊಡಿಸಲು ಕ್ರಮವಹಿಸಲು ಆದೇಶ ನೀಡಿದ್ದಾರೆ. 

Advertisment


ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

TIGER KILED IN MM HILLS
Advertisment
Advertisment
Advertisment