ರೇಣುಕಾಸ್ವಾಮಿ ಕೊಲೆ ಕೇಸ್ ನ ಎ1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಕೇಸ್ ನ ಎ1 ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 64ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ತಾಂತ್ರಿಕ ಅಂಶಗಳ ಆಧಾರದ ಮೇಲೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು.

author-image
Chandramohan
pavithra gowda jail photos

ಪವಿತ್ರಾಗೌಡ ಜಾಮೀನು ಅರ್ಜಿ ಕೋರ್ಟ್ ನಲ್ಲಿ ವಜಾ

Advertisment

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎ1 ಆರೋಪಿ ಪವಿತ್ರಾಗೌಡ ಜಾಮೀನು ಕೋರಿ 64ನೇ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕಳೆದ ವಾರ ಈ ಅರ್ಜಿಯ ಬಗ್ಗೆ ಹಿರಿಯ ವಕೀಲ ಬಾಲನ್ ಅವರು ಪವಿತ್ರಾಗೌಡ ಪರವಾಗಿ ವಾದ ಮಂಡಿಸಿದ್ದರು. ತಾಂತ್ರಿಕ ಅಂಶಗಳ  ಆಧಾರದ ಮೇಲೆ ಜಾಮೀನು ನೀಡಬೇಕೆಂದು ಕೋರ್ಟ್ ಗೆ ಮನವಿ ಮಾಡಿದ್ದರು. ಈ ಅರ್ಜಿಗೆ ಪ್ರಾಸಿಕ್ಯೂಷನ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದರು. ಕಾಯ್ದಿರಿಸಿದ್ದ ಆದೇಶವನ್ನು 64ನೇ ಸೆಷನ್ಸ್ ಕೋರ್ಟ್ ಇಂದು ಪ್ರಕಟಿಸಿದೆ. ಎ1 ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 64ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ನಟಿ, ಕಲಾವಿದೆ, ಕೊಲೆ ಕೇಸ್ ನ ಎ1 ಆರೋಪಿ ಪವಿತ್ರಾಗೌಡಗೆ ನಿರಾಶೆಯಾಗಿದೆ. ನಟಿ ಪವಿತ್ರಾಗೌಡ ಜೈಲು ವಾಸ ಮುಂದುವರಿಯಲಿದೆ.

bangalore central jail

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Pavitra Gowda
Advertisment