Advertisment

ಬರೀ 150 ರೂಪಾಯಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪೂಜೆ ಮಾಡಕ್ಕಾಗುತ್ತಾ? ಆಯುಧ ಪೂಜೆಗೆ ಈ ವರ್ಷವೂ ಸರಿಯಾಗಿ ಹಣ ನೀಡದ ಸಾರಿಗೆ ಇಲಾಖೆ

ಇನ್ನೇನೂ ಸದ್ಯದಲ್ಲೇ ಆಯುಧ ಪೂಜೆ ಬಂದಿದೆ. ಎಲ್ಲರೂ ತಮ್ಮ ವಾಹನಗಳಿಗೆ ಆಯುಧ ಪೂಜೆಯಂದು ಪೂಜೆ ಸಲ್ಲಿಸುತ್ತಾರೆ. ಸಾರಿಗೆ ಇಲಾಖೆಯು ಕೆಎಸ್‌ಆರ್‌ಟಿಸಿ ಬಸ್ ಗಳ ಪೂಜೆಗೆೆಂದು ಬರೀ 150 ರೂಪಾಯಿ ಹಣವನ್ನು ನೀಡಿದೆ. ಬಸ್ ಪೂಜೆಗೆ ಹಣ ನೀಡಲಾಗದಷ್ಟು ಮಟ್ಟಿಗೆ ಸಾರಿಗೆ ಇಲಾಖೆ ಬಡವಾಗಿದೆಯೇ ಎಂದು ಪ್ರಶ್ನಿಸುತ್ತಿದ್ದಾರೆ.

author-image
Chandramohan
KSRTC BUS POOJE CHAREGE

ಆಯುಧ ಪೂಜೆಯಂದು ಬಸ್ ಪೂಜೆಗೆ 150 ರೂ. ಬಿಡುಗಡೆ!

Advertisment
  • ಆಯುಧ ಪೂಜೆಯಂದು ಬಸ್ ಪೂಜೆಗೆ 150 ರೂ. ಬಿಡುಗಡೆ!
  • ಸಾರಿಗೆ ನಿಗಮಗಳ ಬಸ್‌ ಪೂಜೆಗೆ 150 ರೂ. ಸಾಕಾಗಲ್ಲ ಎಂದ ಚಾಲಕರು
  • ಪ್ರತಿ ವರ್ಷವೂ ಹೀಗೆ 100, 150 ರೂ. ನೀಡುವ ಇಲಾಖೆ
  • ತಮ್ಮ ಸ್ವಂತ ಖರ್ಚಿನಲ್ಲಿ ಬಸ್ ಪೂಜೆ ಮಾಡುವ ಚಾಲಕ, ನಿರ್ವಾಹಕರು

ರಾಜ್ಯದಲ್ಲಿ ಆಯುಧ ಪೂಜೆ ಹತ್ತಿರ ಬಂದಿದೆ. ಎಲ್ಲರೂ ತಮ್ಮ ಆಯುಧಗಳು, ವಾಹನಗಳಿಗೆ ಆಯುಧ ಪೂಜೆಯ ದಿನ ಪೂಜೆ ನೆರವೇರಿಸುತ್ತಾರೆ. ರಾಜ್ಯದಲ್ಲಿರುವ ಸಾರಿಗೆ ಇಲಾಖೆಯು ಕೆಎಸ್‌ಆರ್‌ಟಿಸಿ ಬಸ್ ಗಳ ಪೂಜೆಗೆ ಡ್ರೈವರ್, ಕಂಡಕ್ಟರ್ ಗಳಿಗೆ ಪ್ರತಿ ವರ್ಷ ಆಯುಧ ಪೂಜೆಯಂದು ಬಸ್ ಗಳ ಪೂಜೆಗಾಗಿ  ಹಣ ನೀಡುತ್ತೆ.  ಆದರೇ, ಈ ವರ್ಷವೂ ಬಸ್ ಗಳ ಪೂಜೆಗಾಗಿ ಜುಜುಬಿ ಹಣ ನೀಡಿದೆ. ಸಾರಿಗೆ ಇಲಾಖೆಯು ನೀಡಿರುವ ಹಣದಲ್ಲಿ ಬಸ್ ಗಳ ಪೂಜೆ ಮಾಡಲು ಸಾಧ್ಯವಿಲ್ಲ ಎಂಬುದು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಇಲಾಖೆಯ ಬಸ್ ಚಾಲಕರು, ನಿರ್ವಾಹಕರ ನೋವು. ಈ ಬಗ್ಗೆ ಆಯುಧ ಪೂಜೆಯಂದು ಕೆಎಸ್‌ಆರ್‌ಟಿಸಿ ಬಸ್ ಪೂಜೆಗಾಗಿ ಸರ್ಕಾರವು  ಪ್ರತಿ ಬಸ್‌ಗೆ 150 ರೂಪಾಯಿ ನೀಡಿದೆ.  ಈ 150 ರೂಪಾಯಿ ಹಣದಲ್ಲಿ ಬಸ್‌ಗೆ ಹೂವಿನ ಹಾರ ಹಾಕಿ, ಪೂಜೆ ಮಾಡುವುದು ಹೇಗೆ ಎಂಬ ಪ್ರಶ್ನೆ ಬಸ್ ಚಾಲಕರು ಮತ್ತು ನಿರ್ವಾಹಕರದ್ದು. ಒಂದು ಮಾರು ಸೇವಂತಿಗೆ ಹೂವಿನ ರೇಟ್‌ 150 ರೂಪಾಯಿ ದಾಟಿರುತ್ತೆ. ಆಯುಧ ಪೂಜೆ ಹಬ್ಬದ ದಿನ ಒಂದು ಮಾರು ಸೇವಂತಿಗೆ ಹೂವಿನ ರೇಟ್‌ 200 ರೂಪಾಯಿಯಿಂದ 300 ರೂಪಾಯಿ ಇರುತ್ತೆ.  ಇಂಥ ಸ್ಥಿತಿಯಲ್ಲಿ ಬರೀ 150 ರೂಪಾಯಿಯಲ್ಲಿ ಒಂದು ಬಸ್ ಪೂಜೆಯನ್ನು ಹೇಗೆ ಮಾಡೋದು ಎಂಬ ಪ್ರಶ್ನೆ ಕೆಎಸ್‌ಆರ್‌ಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರದ್ದಾಗಿದೆ. 
ಆಯುಧ ಪೂಜೆಗೆ ಹಣ ನೀಡದೇ ಇರುವಷ್ಟು ಸಾರಿಗೆ ಇಲಾಖೆ ಬಡವಾಗಿದೆ. ಸಾರಿಗೆ ಸಚಿವರನ್ನ ನಾಲ್ಕು ಸಾರಿಗೆ ನಿಗಮಗಳ ನೌಕರರು ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. 

Advertisment

KSRTC BUS POOJE CHAREGE02



ವಿಭಾಗೀಯ ಕಾರ್ಯಾಗಾರಕ್ಕೆ ಸಾರಿಗೆ ಇಲಾಖೆಯು  2000 ರೂ ಬಿಡುಗಡೆ ಮಾಡಿದೆ. ಪ್ರಾದೇಶಿಕ ಕಾರ್ಯಾಗಾರಕ್ಕೆ 4000 ರೂಪಾಯಿ ಬಿಡುಗಡೆ ಮಾಡಿದೆ.  ದುಬಾರಿ ದುನಿಯಾದಲ್ಲಿ ಇಷ್ಟು ಕಂಜೂಸು ಯಾಕೆ ಅಂತ ಪ್ರಶ್ನೆ ಸಾರಿಗೆ ಇಲಾಖೆಯ ನೌಕರರದ್ದಾಗಿದೆ. ಶಕ್ತಿ ಯೋಜನೆ ಬಂದ ಮೇಲೆ ಸಾರಿಗೆ ನಿಗಮ ಸಂಸ್ಥೆಗಳಿಗೆ ಸಾಕಷ್ಟು ಆದಾಯ ಬರುತ್ತಿದೆ.  ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿದೆ. ಹೆಚ್ಚಿನ ಜನರು ಓಡಾಟ ಮಾಡ್ತಿದ್ದಾರೆ. ಆದರೂ  150 ರೂಪಾಯಿಯನ್ನು ಆಯುಧ ಪೂಜೆ ಮತ್ತು  ದಸರಾ ಹಬ್ಬಕ್ಕೆ ಹಣ ಬಿಡುಗಡೆ ಮಾಡಿದೆ.  ಸಿಬ್ಬಂದಿನೇ ತಮ್ಮ ಕೈಯಿಂದ  ಹಣ ಹಾಕಿ ಆಯುಧ ಪೂಜೆ  ಹಬ್ಬ ಮಾಡುವ ಸ್ಥಿತಿ ನಿರ್ಮಾಣವಾಗಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

AYUDHA POOJE KSRTC BUS POOJE
Advertisment
Advertisment
Advertisment