/newsfirstlive-kannada/media/media_files/2025/08/01/dharmasthala-case16-2025-08-01-16-18-31.jpg)
ಧರ್ಮಸ್ಥಳದ ನೇತ್ರಾವತಿ ನದಿ ದಂಡೆಯಲ್ಲಿ ಎಸ್ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ದೂರುದಾರನ ಸಮ್ಮುಖದಲ್ಲಿ ಶವಗಳ ಅವಷೇಶ ಪತ್ತೆಗೆ ಕಾರ್ಯಾಚರಣೆ ತೀವ್ರಗೊಂಡಿದೆ. ಈ ನಡುವೆ ಪಾಯಿಂಟ್-7ರಲ್ಲಿ ಕರ್ಚಿಫ್ ಪತ್ತೆಯಾಗಿದೆ.
ಇದನ್ನೂ ಓದಿ:ಧರ್ಮಸ್ಥಳ ಪ್ರಕರಣದ ತನಿಖೆಗೆ ಮೇಜರ್ ಟ್ವಿಸ್ಟ್.. ಪಾಯಿಂಟ್ 1ರಲ್ಲಿ ಸಿಕ್ಕ ಡೆಬಿಟ್ ಕಾರ್ಡ್ ರಹಸ್ಯ ಬಯಲು..!
ಹೌದು, ಎಸ್ಐಟಿ ಅಧಿಕಾರಿಗಳ ತಂಡವು ಪಾಯಿಂಟ್-7ರಲ್ಲಿ ಮಣ್ಣು ಅಗೆಯುವ ವೇಳೆ ಕರ್ಚಿಫ್ ಪತ್ತೆಯಾಗಿದೆ. ಎಸ್ಐಟಿ ಟೀಂ ಗುಂಡಿ ಅಗೆಯುವ ವೇಳೆ ಸಿಕ್ಕಿರುವ ಒಂದು ಕರವಸ್ತ್ರ ಅನ್ನು FSL ತಜ್ಞರಿಗೆ ಹಸ್ತಾಂತರಿಸಲಾಗಿದೆ.
/filters:format(webp)/newsfirstlive-kannada/media/media_files/2025/08/01/dharamasthala-case-2025-08-01-06-52-04.jpg)
ಇನ್ನು, ಪಾಯಿಂಟ್-6ರಲ್ಲಿ ತನಿಖೆಗೆ ಟರ್ನಿಂಗ್ ಪಾಯಿಂಟ್ ಸಿಕ್ಕಿದ್ದು, ದೂರುದಾರ ಮಾರ್ಕ್ ಮಾಡಿದ್ದ ಸ್ಥಳದಲ್ಲಿ ಮಾನವ ದೇಹದ ಮೂಳೆಗಳು ಸಿಕ್ಕಿವೆ. ಸದ್ಯ ಅವಶೇಷಗಳು ಸಿಕ್ಕ ಸ್ಥಳಕ್ಕೆ SIT ಹೆಚ್ಚಿನ ಭದ್ರತೆ ಕ್ರಮ ಕೈಗೊಂಡಿತ್ತು. 4 ದಿಕ್ಕಿನಲ್ಲಿ ಶೀಟ್ ಹಾಕಿ ಸಾಕ್ಷಿ ನಾಶ ಆಗದಂತೆ ಕಟ್ಟೆಚ್ಚರ ವಹಿಸಲಾಗಿತ್ತು.
ಪಾಯಿಂಟ್-6 ಟ್ವಿಸ್ಟ್
- ಮಾನವ ದೇಹದ ತಲೆಬುರುಡೆಯ ಎರಡು ತುಂಡುಗಳು
- ಕಾಲಿನ 2 ಮೂಳೆ, ಬೆನ್ನು ಮೂಳೆಗಳ, ಸಣ್ಣ ಮೂಳೆಗಳು
- ತಲೆ ಬುರುಡೆಯ ಎರಡು ಚೂರುಗಳು ಸಹ ಪತ್ತೆ ಆಗಿವೆ
- ತುಂಡಾದ ಎಲೆಸ್ಟಿಕ್ ಒಳ ಉಡುಪಿನ ತುಂಡು ಸಹ ಪತ್ತೆ
- ಪಾಯಿಂಟ್-6ರಲ್ಲಿ 12 ಅಸ್ಥಿಪಂಜರ ಮೂಳೆಗಳು ಲಭ್ಯ
- ಅವಶೇಷ ಸಿಕ್ಕ ಸ್ಥಳದಲ್ಲಿ ಹೆಚ್ಚಿನ ಭದ್ರತೆಗೆ SIT ಕ್ರಮ
- 4 ದಿಕ್ಕಿನಲ್ಲಿ ಶೀಟ್ ಹಾಕಿ ಸಾಕ್ಷಿ ನಾಶ ಆಗದಂತೆ ಕಟ್ಟೆಚ್ಚರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ