ಮಹೇಶ್ ಶೆಟ್ಟಿ ತಿಮ್ಮರೋಡಿ ಗಡೀಪಾರಿಗೆ ಅಕ್ಟೋಬರ್ 8ರವರೆಗೆ ಮಧ್ಯಂತರ ತಡೆಯಾಜ್ಞೆ: ಹೈಕೋರ್ಟ್ ನಿಂದ ತಾತ್ಕಾಲಿಕ ರೀಲೀಫ್‌

ಧರ್ಮಸ್ಥಳದ ಬುರುಡೆ ಗ್ಯಾಂಗ್ ಹಾಗೂ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಕ್ಟೋಬರ್ 8ರವರೆಗೆ ಗಡೀಪಾರು ಆದೇಶ ಜಾರಿಗೊಳಿಸದಂತೆ ಆದೇಶಿಸಿದೆ.

author-image
Chandramohan
MAHESH SHETTY THIMMAROODI

ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮ್ಮರೋಡಿ ಗಡೀಪಾರಿಗೆ ಹೈಕೋರ್ಟ್ ತಡೆ

Advertisment
  • ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮ್ಮರೋಡಿ ಗಡೀಪಾರಿಗೆ ಹೈಕೋರ್ಟ್ ತಡೆ
  • ಅಕ್ಟೋಬರ್ 8ರವರೆಗೆ ಗಡೀಪಾರಿಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್
  • ಹೈಕೋರ್ಟ್ ನಿಂದ ಮಹೇಶ್ ಶೆಟ್ಟಿ ತಿಮ್ಮರೋಡಿಗೆ ತಾತ್ಕಾಲಿಕ ರೀಲೀಫ್‌


ದಕ್ಷಿಣ ಕನ್ನಡ  ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಸೌಜನ್ಯ ಪರ  ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮ್ಮರೋಡಿರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮೌನ್ವಿ ತಾಲ್ಲೂಕಿಗೆ ಗಡೀಪಾರು ಮಾಡಿ  ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮ್ಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು.  ಮಹೇಶ್ ಶೆಟ್ಟಿ ತಿಮ್ಮರೋಡಿ ಅಕ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,  ಅಕ್ಟೋಬರ್ 8 ರವರೆಗೆ ಗಡೀಪಾರು ಮಾಡಿ ಉಪವಿಭಾಗಾಧಿಕಾರಿ ನೀಡಿರುವ ಆದೇಶ ಜಾರಿಗೊಳಿಸದಂತೆ ಆದೇಶಿಸಿದೆ. ಗಡೀಪಾರು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Mahesh Thimaroddi
Advertisment