/newsfirstlive-kannada/media/media_files/2025/08/05/karnataka-rain222-2025-08-05-13-52-14.jpg)
ಕರ್ನಾಟಕ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಆಗಸ್ಟ್ 5 ಮತ್ತು 6 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಯೆಲ್ಲೆ ಆಲರ್ಟ್ ನೀಡಲಾಗಿದೆ. ಯೆಲ್ಲೋ ಆಲರ್ಟ್ ಅಂದರೇ, ಸಾಧಾರಣ ಮಳೆಯಾಗುವ ಆಲರ್ಟ್ ಎಂದರ್ಥ. ಇನ್ನೂ ಆಗಸ್ಟ್ 7 ಮತ್ತು 8 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆರೇಂಜ್ ಆಲರ್ಟ್ ನೀಡಲಾಗಿದೆ. ಆರೇಂಜ್ ಆಲರ್ಟ್ ಅಂದರೇ, 24 ಗಂಟೆ ಅವಧಿಯಲ್ಲಿ 115 ಮಿಲಿಮೀಟರ್ ನಿಂದ 204 ಮಿಲಿಮೀಟರ್ ವರೆಗೂ ಭಾರಿ ಮಳೆಯಾಗುವ ಮುನ್ಸೂಚನೆ ಎಂದರ್ಥ.
ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 5 ರಿಂದ ಆಗಸ್ಟ್ 8ರವರೆಗೆ ನಾಲ್ಕು ದಿನವೂ ಯೆಲ್ಲೋ ಆಲರ್ಟ್ ನೀಡಲಾಗಿದೆ. ಯೆಲ್ಲೋ ಆಲರ್ಟ್ ದಿನಗಳಂದು ಸಾಧಾರಣ ಮಳೆಯಾಗಲಿದೆ.
ಆಗಸ್ಟ್ 5 ರಂದು ಬಯಲು ಸೀಮೆಯ ಜಿಲ್ಲೆಗಳಾದ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗೆ ಆರೇಂಜ್ ಆಲರ್ಟ್ ನೀಡಲಾಗಿದೆ. ರಾಮನಗರ, ಮಂಡ್ಯ, ಹಾಸನ, ಬೆಂಗಳೂರು ನಗರ, ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ.
ಆಗಸ್ಟ್ 6 ರಂದು ಹಾಸನ, ಮಂಡ್ಯ, ಮೈಸೂರು ಜಿಲ್ಲೆಗೆ ಆರೇಂಜ್ ಆಲರ್ಟ್ ನೀಡಲಾಗಿದೆ. ತುಮಕೂರು, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಗುಡುಗು ಸಿಡಿಲು ಮಿಂಚಿನೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಇನ್ನೂ ಉತ್ತರ ಒಳನಾಡಿನ ಜಿಲ್ಲೆಗಳಿಗೂ ಆಗಸ್ಟ್ 5 ರಿಂದ ಆಗಸ್ಟ್ 8ರವರೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ.
ಮುಂದಿನ 7 ದಿನಗಳ #ಮಳೆ#ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) August 5, 2025
ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಆಗಸ್ಟ್ 6 & 7 ರಂದು ಅಲ್ಲಲ್ಲಿ ಭಾರಿ ಇಂದ ಅತಿ ಭಾರಿ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾದಾರಣ ಮಳೆ ಆಗಸ್ಟ್ 8 ರವರೆಗೆ pic.twitter.com/zFn3jDiQOr
ಕಳೆದ 24 ಗಂಟೆ ಅವಧಿಯಲ್ಲಿ ಗುಬ್ಬಿ ತಾಲ್ಲೂಕಿನಲ್ಲಿ 158 ಮಿ.ಮೀ. ಮಳೆ
ಇನ್ನೂ ಕಳೆದ 24 ಗಂಟೆ ಅವಧಿಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಅತ್ಯಧಿಕ ಮಳೆಯಾಗಿದೆ. ಶಿವಪುರ ಗ್ರಾಮದಲ್ಲಿ 158 ಮಿ.ಮೀಟರ್ ನಷ್ಟು ಭಾರಿ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ. ಆಗಸ್ಟ್ 4 ಬೆಳಿಗ್ಗೆ 8.30 ರಿಂದ ಆಗಸ್ಟ್ 5ರ ಬೆಳಿಗ್ಗೆ 8.30 ರವರೆಗಿನ ಗಂಟೆಯನ್ನು 24 ಗಂಟೆ ಎಂದು ಹವಾಮಾನ ಇಲಾಖೆ ಪರಿಗಣಿಸುತ್ತೆ.
24 ಗಂಟೆಗಳ #ಕರ್ನಾಟಕ#ಮಳೆ ನಕ್ಷೆ: 4th ಆಗಸ್ಟ್ 8.30AM ರಿಂದ 5th ಆಗಸ್ಟ್ 2025 ರ 8.30AM ರವರೆಗೆ, ಅತ್ಯಧಿಕ 158ಮಿಮೀ ☔️ @ತುಮಕೂರು_ಗುಬ್ಬಿ_ಶಿವಪುರ.@KarnatakaVarthe#KSNDMC#ಸುರಕ್ಷಿತವಾಗಿರಿ#ಎಚ್ಚರಿಕೆವಹಿಸಿ#ಮುಂಗಾರುಮಳೆpic.twitter.com/eF5ijtigp9
— Karnataka State Natural Disaster Monitoring Centre (@KarnatakaSNDMC) August 5, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ