ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಮುನ್ಸೂಚನೆ : ಎಲ್ಲೆಲ್ಲಿ ಮಳೆಯ ಮುನ್ಸೂಚನೆ ಇದೆ ಗೊತ್ತಾ?

ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇನ್ನೂ ಮೂರು ದಿನ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದಿನಿಂದ ಅಕ್ಟೋಬರ್ 14 ರವರೆಗೆ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಜನರು, ರೈತರು ಇದಕ್ಕೆ ತಕ್ಕಂತೆ ತಮ್ಮ ಕೃಷಿ ಚಟುವಟಿಕೆ, ಇನ್ನಿತರ ಚಟುವಟಿಕೆ ಪ್ಲ್ಯಾನ್ ಮಾಡಿಕೊಳ್ಳುವುದು ಒಳಿತು.

author-image
Chandramohan
bengalore rain (2)

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ನಿಶ್ಚಿತ!

Advertisment
  • ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ನಿಶ್ಚಿತ!
  • ಇಂದಿನಿಂದ ಅಕ್ಟೋಬರ್ 14 ರವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
  • ಇಂದು, ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಆಲರ್ಟ್ ನೀಡಿಕೆ


ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಶನಿವಾರದಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಆರೇಂಜ್ ಆಲರ್ಟ್ ನೀಡಿದೆ.  ಆಕ್ಟೋಬರ್ 11 ರಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಜಿಲ್ಲೆಗಳಿಗೆ ಆರೇಂಜ್ ಆಲರ್ಟ್ ನೀಡಿದೆ. ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ ಜಿಲ್ಲೆ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ. 
ಅಕ್ಟೋಬರ್ 12 ರಂದು ಚಿಕ್ಕಮಗಳೂರು, ಕೋಲಾರ, ಬೆಂಗಳೂರು ದಕ್ಷಿಣ ಜಿಲ್ಲೆಗಳಿಗೆ ಆರೇಂಜ್ ಆಲರ್ಟ್ ನೀಡಲಾಗಿದೆ.  ಬೆಂಗಳೂರು ಗ್ರಾಮಾಂತರ, ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ.  ಅಕ್ಟೋಬರ್ 13  ಮತ್ತು 14 ರಂದು ಚಿಕ್ಕಮಗಳೂರು , ಬೆಂಗಳೂರು ದಕ್ಷಿಣ ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ. 


ಇನ್ನೂ ಕರಾವಳಿ ಭಾಗದ ಜಿಲ್ಲೆಗಳಿಗೆ ಅಕ್ಟೋಬರ್ 11 ಮತ್ತು 12 ರಂದು ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 


ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

HEAVY RAIN IN KARNATAKA
Advertisment