/newsfirstlive-kannada/media/media_files/2025/08/01/rakshak_bullet-2025-08-01-22-31-16.jpg)
ಬೆಂಗಳೂರು: ಬಿಗ್ಬಾಸ್ ಖ್ಯಾತಿಯ ರಕ್ಷಕ್ ಬುಲೆಟ್ ಅವರ ಅಜಾಗರೂಕತೆಯ ಕಾರು ಚಾಲನೆಯಿಂದ ಯುವಕ ಕಾಲು ಕಳೆದುಕೊಂಡಿದ್ದಾರೆ. ಈ ಅಪಘಾತವು ಸಿಲಿಕಾನ್ ಸಿಟಿಯ ಮಾನ್ಯತಾ ಟೆಕ್ ಪಾರ್ಕ್ನ ಶಿವರಾಜ್ ಕುಮಾರ್ ಮನೆಯ ತಿರುವಿನಲ್ಲಿ ನಡೆದಿದೆ.
ಶಿಡ್ಲಘಟ್ಟ ಮೂಲದ ಯುವಕ ವೇಣುಗೋಪಾಲ ಅವರು ಎಡಗಾಲಿನ ಮೂಳೆ ಮುರಿದುಕೊಂಡಿದ್ದಾರೆ. ವೇಣುಗೋಪಾಲ ಮತ್ತು ಸ್ನೇಹಿತೆ ಬೈಕ್ನಲ್ಲಿ ಬರುತ್ತಿದ್ದರು. ರಕ್ಷಕ್ ಬುಲೆಟ್ ಅವರ ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದರಿಂದ ಬೈಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದ ವೇಣುಗೋಪಾಲ ಎನ್ನುವ ಯುವಕನ ಎಡಗಾಲಿನ ಮೂಳೆ ಮುರಿತವಾಗಿದೆ.
ಇದನ್ನೂ ಓದಿ:ಕಾಮಿಡಿ ಕಿಲಾಡಿ ಶೋ ಖ್ಯಾತಿಯ ಚಂದ್ರಶೇಖರ ಸಿದ್ದಿ ನಿಧನ.. ದೂರು ನೀಡಿದ ತಾಯಿ
ಮಾನ್ಯತಾ ಟೆಕ್ ಪಾರ್ಕ್ನ ಶಿವರಾಜ್ ಕುಮಾರ್ ಮನೆ ತಿರುವಿನಲ್ಲಿ ಈ ಆಕ್ಸಿಡೆಂಟ್ ಆಗಿದೆ. ರಕ್ಷಕ್ ಬುಲೆಟ್ ಅವರ ಕಾರು ಯುವಕನ ಬೈಕ್ಗೆ ಡಿಕ್ಕಿ ಹೊಡೆದಿದೆ. ತಕ್ಷಣ ಗಾಯಾಳುವನ್ನು ಹೆಬ್ಬಾಳದಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಲಾಗಿದೆ. ಶಿಡ್ಲಘಟ್ಟ ಮೂಲದ ಯುವಕ ವೇಣುಗೋಪಾಲ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದನು. ಸದ್ಯ ಈ ಸಂಬಂಧ ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ