ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಪ್ರವಾಸಿಗ
ಹಾರಂಗಿ ಜಲಾಶಯದ ನೀರಿಗೆ ಬಿದ್ದ ಪ್ರವಾಸಿಗನಿಗಾಗಿ ಹುಡುಕಾಟ
ಯುವಕನಿಗಾಗಿ ಹುಡುಕಾಡುತ್ತಿರುವ ಕೊಡಗು ಅಗ್ನಿಶಾಮಕ ದಳ
ಕೊಡಗು: ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕುಶಾಲನಗರ ತಾಲ್ಲೂಕಿನ ಹಾರಂಗಿ ಜಲಾಶಯದ ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್ ಎಂಬಾತ ನೀರು ಪಾಲಾಗಿದ್ದಾನೆ.
ಸಂದೀಪ್ ಮೂವರು ಸ್ನೇಹಿತರೊಂದಿಗೆ ಹಾರಂಗಿ ಜಲಾಶಯಕ್ಕೆ ಬಂದಿದ್ದ. ಈ ವೇಳೆ ಹಾರಂಗಿ ಜಲಾಶಯದ ಮುಂಭಾಗದ ಸೇತುವೆ ಮೇಲೆ ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಆಯ ತಪ್ಪಿ ನೀರಿನಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ.
ಸದ್ಯ ಅಗ್ನಿಶಾಮಕ ದಳ ಸಂದೀಪ್ಗಾಗಿ ಹುಡುಕಾಟ ನಡೆಸುತ್ತಿದೆ. ಕುಶಾಲನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಪ್ರವಾಸಿಗ
ಹಾರಂಗಿ ಜಲಾಶಯದ ನೀರಿಗೆ ಬಿದ್ದ ಪ್ರವಾಸಿಗನಿಗಾಗಿ ಹುಡುಕಾಟ
ಯುವಕನಿಗಾಗಿ ಹುಡುಕಾಡುತ್ತಿರುವ ಕೊಡಗು ಅಗ್ನಿಶಾಮಕ ದಳ
ಕೊಡಗು: ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕುಶಾಲನಗರ ತಾಲ್ಲೂಕಿನ ಹಾರಂಗಿ ಜಲಾಶಯದ ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್ ಎಂಬಾತ ನೀರು ಪಾಲಾಗಿದ್ದಾನೆ.
ಸಂದೀಪ್ ಮೂವರು ಸ್ನೇಹಿತರೊಂದಿಗೆ ಹಾರಂಗಿ ಜಲಾಶಯಕ್ಕೆ ಬಂದಿದ್ದ. ಈ ವೇಳೆ ಹಾರಂಗಿ ಜಲಾಶಯದ ಮುಂಭಾಗದ ಸೇತುವೆ ಮೇಲೆ ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಆಯ ತಪ್ಪಿ ನೀರಿನಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ.
ಸದ್ಯ ಅಗ್ನಿಶಾಮಕ ದಳ ಸಂದೀಪ್ಗಾಗಿ ಹುಡುಕಾಟ ನಡೆಸುತ್ತಿದೆ. ಕುಶಾಲನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ