ನಂದಿಗಿರಿಧಾಮದತ್ತ ಹೆಜ್ಜೆ ಹಾಕಿದ ಪ್ರವಾಸಿಗರಿಗೆ ನಿರಾಸೆ
ರಾಷ್ಟ್ರಪತಿ ಆಗಮನದ ಹಿನ್ನೆಲೆ ನಂದಿ ಹಿಲ್ಸ್ಗೆ ಪ್ರವೇಶ ನಿರ್ಬಂಧ
ಇಂದಿನಿಂದ ಎರಡು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶವಿಲ್ಲ
ಚಿಕ್ಕಬಳ್ಳಾಪುರ: ಬೆಳ್ಳಂಬೆಳ್ಳಗ್ಗೆ ನಂದಿಗಿರಿಧಾಮದತ್ತ ಹೆಜ್ಜೆ ಹಾಕಿದ ಪ್ರವಾಸಿಗರಿಗೆ ನಿರಾಸೆಯಾಗಿದೆ. ಬಂದ ದಾರಿಗೆ ಸುಂಕ ಇಲ್ಲವೆಂದು ಪ್ರವಾಸಿಗರು ವಾಪಸ್ ತೆರಳುತ್ತಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವ ವಿಖ್ಯಾತ ನಂದಿ ಹಿಲ್ಸ್ಗೆ ನಿರ್ಬಂಧ ಹೇರಲಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ಭದ್ರತಾ ದೃಷ್ಟಿಯಿಂದ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಈ ವಿಚಾರ ತಿಳಿಯದೇ ಆಗಮಿಸಿದ್ದ ಪ್ರವಾಸಿಗರನ್ನು ಪೊಲೀಸರು ತಡೆದಿದ್ದಾರೆ. ನಂದಿಗಿರಿಧಾಮ ಬುಡದ ಪ್ರವೇಶ ದ್ವಾರದಲ್ಲೇ ವಾಹನಗಳನ್ನು ತಡೆದು ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ.
ಮುದ್ದೇನಹಳ್ಳಿಗೆ ರಾಷ್ಟ್ರಪತಿ
ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮುದ್ದೇನಹಳ್ಳಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಜಿಲ್ಲಾಧಿಕಾರಿ ರವೀಂದ್ರ ಅವರು ನಂದಿಗಿರಿಧಾಮಕ್ಕೆ 2 ದಿನಗಳ ಕಾಲ ನಿರ್ಬಂಧ ಹೇರುವಂತೆ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಪ್ರವಾಸಿಗರಿಗೆ ನಂದಿ ಹಿಲ್ಸ್ ವಿಕ್ಷಣೆಯನ್ನು ನಿರ್ಬಂಧಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಂದಿಗಿರಿಧಾಮದತ್ತ ಹೆಜ್ಜೆ ಹಾಕಿದ ಪ್ರವಾಸಿಗರಿಗೆ ನಿರಾಸೆ
ರಾಷ್ಟ್ರಪತಿ ಆಗಮನದ ಹಿನ್ನೆಲೆ ನಂದಿ ಹಿಲ್ಸ್ಗೆ ಪ್ರವೇಶ ನಿರ್ಬಂಧ
ಇಂದಿನಿಂದ ಎರಡು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶವಿಲ್ಲ
ಚಿಕ್ಕಬಳ್ಳಾಪುರ: ಬೆಳ್ಳಂಬೆಳ್ಳಗ್ಗೆ ನಂದಿಗಿರಿಧಾಮದತ್ತ ಹೆಜ್ಜೆ ಹಾಕಿದ ಪ್ರವಾಸಿಗರಿಗೆ ನಿರಾಸೆಯಾಗಿದೆ. ಬಂದ ದಾರಿಗೆ ಸುಂಕ ಇಲ್ಲವೆಂದು ಪ್ರವಾಸಿಗರು ವಾಪಸ್ ತೆರಳುತ್ತಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವ ವಿಖ್ಯಾತ ನಂದಿ ಹಿಲ್ಸ್ಗೆ ನಿರ್ಬಂಧ ಹೇರಲಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ಭದ್ರತಾ ದೃಷ್ಟಿಯಿಂದ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಈ ವಿಚಾರ ತಿಳಿಯದೇ ಆಗಮಿಸಿದ್ದ ಪ್ರವಾಸಿಗರನ್ನು ಪೊಲೀಸರು ತಡೆದಿದ್ದಾರೆ. ನಂದಿಗಿರಿಧಾಮ ಬುಡದ ಪ್ರವೇಶ ದ್ವಾರದಲ್ಲೇ ವಾಹನಗಳನ್ನು ತಡೆದು ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ.
ಮುದ್ದೇನಹಳ್ಳಿಗೆ ರಾಷ್ಟ್ರಪತಿ
ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮುದ್ದೇನಹಳ್ಳಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಜಿಲ್ಲಾಧಿಕಾರಿ ರವೀಂದ್ರ ಅವರು ನಂದಿಗಿರಿಧಾಮಕ್ಕೆ 2 ದಿನಗಳ ಕಾಲ ನಿರ್ಬಂಧ ಹೇರುವಂತೆ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಪ್ರವಾಸಿಗರಿಗೆ ನಂದಿ ಹಿಲ್ಸ್ ವಿಕ್ಷಣೆಯನ್ನು ನಿರ್ಬಂಧಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ