Advertisment

Rain: ಮಂಡ್ಯದಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಮರ ಬಿದ್ದು ಭಾರೀ ಅನಾಹುತ..

author-image
Ganesh
Updated On
Rain: ಮಂಡ್ಯದಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಮರ ಬಿದ್ದು ಭಾರೀ ಅನಾಹುತ..
Advertisment
  • ಭಾರೀ ಮಳೆಗೆ ವಿಶ್ವಮಾನವ ಟ್ರೈನ್ ಮೇಲೆ ಬಿದ್ದ ಮರ
  • ಬೆಂಗಳೂರಿನಿಂದ ಮೈಸೂರಿಗೆ ರೈಲು ತೆರಳುತ್ತಿತ್ತು
  • ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ 5 ದಿನ ವರುಣಾರ್ಭಟ

ಮಂಡ್ಯ: ಬಿರುಗಾಳಿ ಸಹಿತ ಭಾರೀ ಮಳೆಗೆ ಚಲಿಸುತ್ತಿದ್ದ ಟ್ರೈನ್ ಮೇಲೆ ಮರ ಬಿದ್ದ ಘಟನೆ ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ನಡೆದಿದೆ.

Advertisment

ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವಿಶ್ವಮಾನವ ಟ್ರೈನ್ ಮೇಲೆ ಮರ ಬಿದ್ದಿದ್ದು, ರೈಲಿನ ಮುಂಭಾಗದ ಗ್ಲಾಸ್ ಪುಡಿ ಪುಡಿಯಾಗಿ, ಲೋಕೋ ಪೈಲೆಟ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯದ ನಡುವೆಯೂ ಟ್ರೈನ್ ಅನ್ನು ಮಂಡ್ಯ ರೈಲ್ವೆ ನಿಲ್ದಾಣದ ವರೆಗೆ ಚಾಲಕ ತಂದಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ವಿಶ್ವಮಾನವ ರೈಲು ತೆರಳುತ್ತಿತ್ತು. ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ಟ್ರೈನ್ ನಿಲ್ಲಿಸಿ ಒಡೆದ ಗ್ಲಾಸ್ ಅನ್ನು ಬದಲಿಸಲಾಗಿದೆ. ಗಾಯಾಳು ಲೋಕೋ ಪೈಲೆಟ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಗಾಳಿ ಮಳೆಗೆ ಭಾರೀ ಅನಾಹುತ.. ಹೋರ್ಡಿಂಗ್ ಬಿದ್ದು 12 ಜನ ಸಾವು

publive-image

ಇನ್ನೂ 5 ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆ ಬಿರುಗಾಳಿ ಸಹಿತ ಮಳೆಯಾರ್ಭಟದ ಮುನ್ಸೂಚನೆ ನೀಡಿದೆ. ಮಳೆಯಲ್ಲಿ ಸಂಚರಿಸುವಾಗ ಜವಾಬ್ದಾರಿಯುತವಾಗಿ ಚಾಲನೆ ಮಾಡಿ ಅನ್ನೋದೆ ನಮ್ಮ ಕಳಕಳಿ.

ಇದನ್ನೂ ಓದಿ:LSG vs DC ಮಧ್ಯೆ ಹೈ-ವೋಲ್ಟೇಜ್ ಪಂದ್ಯ; ಆರ್​ಸಿಬಿ ಪ್ಲೇ ಆಫ್​ಗೆ ಇವತ್ತು ಯಾವ ತಂಡ ಗೆದ್ದರೆ ಉತ್ತಮ..?

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment