/newsfirstlive-kannada/media/post_attachments/wp-content/uploads/2025/01/hanuma-6-1.jpg)
ಕನ್ನಡದ ಬಿಗ್ಬಾಸ್ ಸೀಸನ್ 11ರ ವಿನ್ನರ್ ಆಗಿ ಹನುಮಂತ ಹೊರ ಹೊಮ್ಮಿದ್ದಾರೆ. ರನ್ನರ್ ಅಪ್ ಆಗಿ ತ್ರಿವಿಕ್ರಮ್ ಹೊರ ಹೊಮ್ಮಿದ್ದಾರೆ. ಬಿಗ್ಬಾಸ್ ರನ್ನರ್ ಅಪ್ ಆಗಿರೋ ತ್ರಿವಿಕ್ರಮ್ ಜನರ ಪ್ರೀತಿ ಗಳಿಸಿಕೊಂಡಿದ್ದಾರೆ. ಆದರೆ ಇದರ ಮಧ್ಯೆ ತ್ರಿವಿಕ್ರಮ್ ತಾಯಿ ಹನುಮಂತ ಗೆದ್ದಿದ್ದು ಸರಿಯಿಲ್ಲ ಎಂದಿದ್ದಾರೆ.
ಇದನ್ನೂ ಓದಿ: BBK11 Grand Finale: ಬಿಗ್ಬಾಸ್ ಸೀಸನ್ 11 ರೋಚಕ ರಿಸಲ್ಟ್.. ತ್ರಿವಿಕ್ರಮ್ ಸೋಲಿಗೆ ಅಸಲಿ ಕಾರಣವೇನು?
ಹೌದು, ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತಾಡಿದ ತ್ರಿವಿಕ್ರಮ್ ತಾಯಿ ವನಜಾಕ್ಷಿ, ನನಗೆ ಹನುಮಂತನಲ್ಲಿ ಬೇರೆ ಏನೂ ಕಾಣಿಸಲಿಲ್ಲ. ಅವನಿಗೆ ಬಿಟ್ಟು ಬೇರೆ ಯಾರಿಗಾದ್ರೂ ಸಿಕ್ಕಿದರೆ ನನಗೆ ಖುಷಿ ಆಗುತ್ತಿತ್ತು. ನನ್ನ ಮಗನಿಗೆ ಸಿಕ್ಕಿಲ್ಲ ಅಂತ ಬೇಸರ ಇಲ್ಲ, ಅಷ್ಟು ಜನರಲ್ಲಿ ಹನುಮಂತನಿಗೆ ಬಿಟ್ಟು ಬೇರೆಯವರಿಗೆ ಸಿಗಬೇಕಿತ್ತು ಎಂದಿದ್ದಾರೆ.
ಸದ್ಯ ಬಿಗ್ಬಾಸ್ ಟ್ರೋಫಿ ಗೆದ್ದುಕೊಂಡಿದ್ದ ಹನುಮಂತ ಸಂಭ್ರಮದಲ್ಲಿ ಮುಳುಗಿದ್ದಾರೆ. ಸಾಕಷ್ಟು ಮಂದಿ ಹನುಮಂತ ಗೆದ್ದಿದ್ದಕ್ಕೆ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ ಇದರ ಮಧ್ಯೆ ತ್ರಿವಿಕ್ರಮ್ ತಾಯಿ ವನಜಾಕ್ಷಿ ಈ ರೀತಿ ಕೊಟ್ಟ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ