BBK11: ಹನುಮಂತ ಗೆದ್ದಿದ್ದು ಸರಿಯಿಲ್ಲ.. ಬಿಗ್​ಬಾಸ್​ ವಿನ್ನರ್‌ ಮೇಲೆ ತ್ರಿವಿಕ್ರಮ್ ತಾಯಿಗೆ ಬೇಸರ; ಏನಂದ್ರು?

author-image
Veena Gangani
Updated On
BBK11: ಹನುಮಂತ ಗೆದ್ದಿದ್ದು ಸರಿಯಿಲ್ಲ.. ಬಿಗ್​ಬಾಸ್​ ವಿನ್ನರ್‌ ಮೇಲೆ ತ್ರಿವಿಕ್ರಮ್ ತಾಯಿಗೆ ಬೇಸರ; ಏನಂದ್ರು?
Advertisment
  • ಬಿಗ್​ಬಾಸ್​ 11ರ ರನ್ನರ್​ ಪಟ್ಟ ಗಿಟ್ಟಿಸಿಕೊಂಡ ತ್ರಿವಿಕ್ರಮ್
  • ಬಿಗ್​ಬಾಸ್​ ಸೀಸನ್​ 11ರ ಟ್ರೋಫಿ ಎತ್ತಿದ ಹನುಮಂತ
  • ಹನುಮಂತನ ಬಗ್ಗೆ ತ್ರಿವಿಕ್ರಮ್ ತಾಯಿ ಹೀಗೆ ಹೇಳಿದ್ಯಾಕೆ?

ಕನ್ನಡದ ಬಿಗ್​ಬಾಸ್​ ಸೀಸನ್ 11ರ ವಿನ್ನರ್​ ಆಗಿ ಹನುಮಂತ ಹೊರ ಹೊಮ್ಮಿದ್ದಾರೆ. ರನ್ನರ್ ಅಪ್​ ಆಗಿ ತ್ರಿವಿಕ್ರಮ್​ ಹೊರ ಹೊಮ್ಮಿದ್ದಾರೆ. ಬಿಗ್​ಬಾಸ್​ ರನ್ನರ್ ಅಪ್ ಆಗಿರೋ ತ್ರಿವಿಕ್ರಮ್​ ಜನರ ಪ್ರೀತಿ ಗಳಿಸಿಕೊಂಡಿದ್ದಾರೆ. ಆದರೆ ಇದರ ಮಧ್ಯೆ ತ್ರಿವಿಕ್ರಮ್ ತಾಯಿ ಹನುಮಂತ ಗೆದ್ದಿದ್ದು ಸರಿಯಿಲ್ಲ ಎಂದಿದ್ದಾರೆ.

ಇದನ್ನೂ ಓದಿ: BBK11 Grand Finale: ಬಿಗ್​ಬಾಸ್ ಸೀಸನ್ 11 ರೋಚಕ ರಿಸಲ್ಟ್‌.. ತ್ರಿವಿಕ್ರಮ್ ಸೋಲಿಗೆ ಅಸಲಿ ಕಾರಣವೇನು?

publive-image

ಹೌದು, ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತಾಡಿದ ತ್ರಿವಿಕ್ರಮ್​ ತಾಯಿ ವನಜಾಕ್ಷಿ, ನನಗೆ ಹನುಮಂತನಲ್ಲಿ ಬೇರೆ ಏನೂ ಕಾಣಿಸಲಿಲ್ಲ. ಅವನಿಗೆ ಬಿಟ್ಟು ಬೇರೆ ಯಾರಿಗಾದ್ರೂ ಸಿಕ್ಕಿದರೆ ನನಗೆ ಖುಷಿ ಆಗುತ್ತಿತ್ತು. ನನ್ನ ಮಗನಿಗೆ ಸಿಕ್ಕಿಲ್ಲ ಅಂತ ಬೇಸರ ಇಲ್ಲ, ಅಷ್ಟು ಜನರಲ್ಲಿ ಹನುಮಂತನಿಗೆ ಬಿಟ್ಟು ಬೇರೆಯವರಿಗೆ ಸಿಗಬೇಕಿತ್ತು  ಎಂದಿದ್ದಾರೆ.

BBK11; ಮನೆಗೆ ಬಂದು ನಾಜೂಕಾಗಿ ...

ಸದ್ಯ ಬಿಗ್​ಬಾಸ್​ ಟ್ರೋಫಿ ಗೆದ್ದುಕೊಂಡಿದ್ದ ಹನುಮಂತ ಸಂಭ್ರಮದಲ್ಲಿ ಮುಳುಗಿದ್ದಾರೆ. ಸಾಕಷ್ಟು ಮಂದಿ ಹನುಮಂತ ಗೆದ್ದಿದ್ದಕ್ಕೆ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ ಇದರ ಮಧ್ಯೆ ತ್ರಿವಿಕ್ರಮ್​ ತಾಯಿ ವನಜಾಕ್ಷಿ ಈ ರೀತಿ ಕೊಟ್ಟ ಹೇಳಿಕೆ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment