ಸ್ನೇಹಿತರೇ ತುಂಬಿದ್ದ ಎರ್ಟಿಗಾ ಕಾರು ಅಪಘಾತ
ಮದುವೆ ಮುಗಿಸಿ ಬರುವಾಗ ಮಸಣ ಸೇರಿದರು
ರಾತ್ರೋ ರಾತ್ರಿ ಭೀಕರ ಅಪಘಾತಕ್ಕೆ 2 ಸಾವು
ತುಮಕೂರು: ಲಾರಿ ಹಾಗೂ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ನಡೆದಿದೆ. ಕಾರಿನಲ್ಲಿದ್ದ 7 ಜನರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನುಳಿದ 5 ಗಂಭೀರ ಗಾಯಗೊಂಡಿದ್ದಾರೆ.
ದಾವಣೆಗೆರೆ ಮೂಲದ ಶಿವು ನಾಯಕ್( 32), ಕೊಡಿಗೇನಹಳ್ಳಿಯ ಪರಮೇಶ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಡ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದ್ದು, ಕಾರಿನಲ್ಲಿ 7 ಜನ ಯುವಕರು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ದಾಬಸ್ ಪೇಟೆಯಿಂದ ಸ್ನೇಹಿತನ ಮದುವೆಗೆ ತೆರಳಿ ಕೊರಟಗೆರೆ ಹಾಗೂ ಕೊಡಗೇನಹಳ್ಳಿಗೆ ವಾಪಸ್ ಬರುತಿದ್ದಂತೆ ಅಪಘಾತವಾಗಿದೆ. ಆಂಧ್ರದಿಂದ ತುಮಕೂರಿಗೆ ಬರುತ್ತಿದ್ದ ಲಾರಿಗೆ ಎರ್ಟಿಗಾ ಕಾರು ಡಿಕ್ಕಿ ಹೊಡೆದಿದೆ.
ಇನ್ನು ಗಾಯಗೊಂಡ ಐವರನ್ನು ನಿಮಾನ್ಸ್ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸ್ನೇಹಿತರೇ ತುಂಬಿದ್ದ ಎರ್ಟಿಗಾ ಕಾರು ಅಪಘಾತ
ಮದುವೆ ಮುಗಿಸಿ ಬರುವಾಗ ಮಸಣ ಸೇರಿದರು
ರಾತ್ರೋ ರಾತ್ರಿ ಭೀಕರ ಅಪಘಾತಕ್ಕೆ 2 ಸಾವು
ತುಮಕೂರು: ಲಾರಿ ಹಾಗೂ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ನಡೆದಿದೆ. ಕಾರಿನಲ್ಲಿದ್ದ 7 ಜನರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನುಳಿದ 5 ಗಂಭೀರ ಗಾಯಗೊಂಡಿದ್ದಾರೆ.
ದಾವಣೆಗೆರೆ ಮೂಲದ ಶಿವು ನಾಯಕ್( 32), ಕೊಡಿಗೇನಹಳ್ಳಿಯ ಪರಮೇಶ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಡ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದ್ದು, ಕಾರಿನಲ್ಲಿ 7 ಜನ ಯುವಕರು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ದಾಬಸ್ ಪೇಟೆಯಿಂದ ಸ್ನೇಹಿತನ ಮದುವೆಗೆ ತೆರಳಿ ಕೊರಟಗೆರೆ ಹಾಗೂ ಕೊಡಗೇನಹಳ್ಳಿಗೆ ವಾಪಸ್ ಬರುತಿದ್ದಂತೆ ಅಪಘಾತವಾಗಿದೆ. ಆಂಧ್ರದಿಂದ ತುಮಕೂರಿಗೆ ಬರುತ್ತಿದ್ದ ಲಾರಿಗೆ ಎರ್ಟಿಗಾ ಕಾರು ಡಿಕ್ಕಿ ಹೊಡೆದಿದೆ.
ಇನ್ನು ಗಾಯಗೊಂಡ ಐವರನ್ನು ನಿಮಾನ್ಸ್ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ