newsfirstkannada.com

ಲಾರಿ-ಕಾರು ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು, ಐವರು ಗಂಭೀರ

Share :

Published June 14, 2023 at 10:52am

Update June 14, 2023 at 10:53am

    ಸ್ನೇಹಿತರೇ ತುಂಬಿದ್ದ ಎರ್ಟಿಗಾ ಕಾರು ಅಪಘಾತ

    ಮದುವೆ ಮುಗಿಸಿ ಬರುವಾಗ ಮಸಣ ಸೇರಿದರು

    ರಾತ್ರೋ ರಾತ್ರಿ ಭೀಕರ ಅಪಘಾತಕ್ಕೆ 2 ಸಾವು

 

ತುಮಕೂರು: ಲಾರಿ ಹಾಗೂ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ‌ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ನಡೆದಿದೆ. ಕಾರಿನಲ್ಲಿದ್ದ 7 ಜನರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನುಳಿದ 5 ಗಂಭೀರ ಗಾಯಗೊಂಡಿದ್ದಾರೆ.

ದಾವಣೆಗೆರೆ ಮೂಲದ ಶಿವು ನಾಯಕ್( 32), ಕೊಡಿಗೇನಹಳ್ಳಿಯ ಪರಮೇಶ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಡ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದ್ದು, ಕಾರಿನಲ್ಲಿ 7 ಜನ ಯುವಕರು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ದಾಬಸ್ ಪೇಟೆಯಿಂದ ಸ್ನೇಹಿತನ ಮದುವೆಗೆ ತೆರಳಿ ಕೊರಟಗೆರೆ ಹಾಗೂ ಕೊಡಗೇನಹಳ್ಳಿಗೆ ವಾಪಸ್ ಬರುತಿದ್ದಂತೆ ಅಪಘಾತವಾಗಿದೆ. ಆಂಧ್ರದಿಂದ ತುಮಕೂರಿಗೆ ಬರುತ್ತಿದ್ದ ಲಾರಿಗೆ ಎರ್ಟಿಗಾ ಕಾರು ಡಿಕ್ಕಿ ಹೊಡೆದಿದೆ.

ಇನ್ನು ಗಾಯಗೊಂಡ ಐವರನ್ನು ನಿಮಾನ್ಸ್​ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

 

 

 

ಲಾರಿ-ಕಾರು ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು, ಐವರು ಗಂಭೀರ

https://newsfirstlive.com/wp-content/uploads/2023/06/Tumkur-Accident.jpg

    ಸ್ನೇಹಿತರೇ ತುಂಬಿದ್ದ ಎರ್ಟಿಗಾ ಕಾರು ಅಪಘಾತ

    ಮದುವೆ ಮುಗಿಸಿ ಬರುವಾಗ ಮಸಣ ಸೇರಿದರು

    ರಾತ್ರೋ ರಾತ್ರಿ ಭೀಕರ ಅಪಘಾತಕ್ಕೆ 2 ಸಾವು

 

ತುಮಕೂರು: ಲಾರಿ ಹಾಗೂ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ‌ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ನಡೆದಿದೆ. ಕಾರಿನಲ್ಲಿದ್ದ 7 ಜನರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನುಳಿದ 5 ಗಂಭೀರ ಗಾಯಗೊಂಡಿದ್ದಾರೆ.

ದಾವಣೆಗೆರೆ ಮೂಲದ ಶಿವು ನಾಯಕ್( 32), ಕೊಡಿಗೇನಹಳ್ಳಿಯ ಪರಮೇಶ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಡ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದ್ದು, ಕಾರಿನಲ್ಲಿ 7 ಜನ ಯುವಕರು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ದಾಬಸ್ ಪೇಟೆಯಿಂದ ಸ್ನೇಹಿತನ ಮದುವೆಗೆ ತೆರಳಿ ಕೊರಟಗೆರೆ ಹಾಗೂ ಕೊಡಗೇನಹಳ್ಳಿಗೆ ವಾಪಸ್ ಬರುತಿದ್ದಂತೆ ಅಪಘಾತವಾಗಿದೆ. ಆಂಧ್ರದಿಂದ ತುಮಕೂರಿಗೆ ಬರುತ್ತಿದ್ದ ಲಾರಿಗೆ ಎರ್ಟಿಗಾ ಕಾರು ಡಿಕ್ಕಿ ಹೊಡೆದಿದೆ.

ಇನ್ನು ಗಾಯಗೊಂಡ ಐವರನ್ನು ನಿಮಾನ್ಸ್​ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

 

 

 

Load More