ಬ್ಯಾರಿಕೇಡ್ ಡಿಕ್ಕಿ ಹೊಡೆದು ಉರುಳಿ ಬಿದ್ದ ಕ್ಯಾಂಟರ್ ಗಾಡಿ
ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಇಬ್ಬರು ಪಾದಚಾರಿಗಳು ಸಾವು
ಅಜಾಗರೂಕ ಕ್ಯಾಂಟರ್ ಚಾಲಕನನ್ನು ಬಂಧಿಸಿದ ಪೊಲೀಸ್
ಆನೇಕಲ್: ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕ್ಯಾಂಟರ್ ಲಾರಿ ಹರಿದ ಘಟನೆ ತಾಲೂಕಿನ ಹೆಬ್ಬಗೋಡಿ ಬಯೋಕಾನ್ ಕಂಪನಿ ಮುಂಭಾಗದಲ್ಲಿ ನಡೆದಿದೆ. ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಶಿಕ್ (28), ಮನೋಜ್ ಕುಮಾರ್(30) ಎಂಬ ಯುವಕರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಕುಡಿದ ಅಮಲಿನಲ್ಲಿ ಕ್ಯಾಂಟರ್ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸಿದ್ದಕ್ಕೆ ಇಬ್ಬರು ಅಮಾಯಕ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಹೆದ್ದಾರಿಯ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ಕ್ಯಾಂಟರ್ ಲಾರಿ ಉರುಳಿ ಬಿದ್ದಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕುಡಿತದ ನಶೆಯಲ್ಲಿದ್ದ ಡ್ರೈವರ್ನನ್ನು ಹಾಗೂ ಕ್ಲೀನರ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬ್ಯಾರಿಕೇಡ್ ಡಿಕ್ಕಿ ಹೊಡೆದು ಉರುಳಿ ಬಿದ್ದ ಕ್ಯಾಂಟರ್ ಗಾಡಿ
ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಇಬ್ಬರು ಪಾದಚಾರಿಗಳು ಸಾವು
ಅಜಾಗರೂಕ ಕ್ಯಾಂಟರ್ ಚಾಲಕನನ್ನು ಬಂಧಿಸಿದ ಪೊಲೀಸ್
ಆನೇಕಲ್: ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕ್ಯಾಂಟರ್ ಲಾರಿ ಹರಿದ ಘಟನೆ ತಾಲೂಕಿನ ಹೆಬ್ಬಗೋಡಿ ಬಯೋಕಾನ್ ಕಂಪನಿ ಮುಂಭಾಗದಲ್ಲಿ ನಡೆದಿದೆ. ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಶಿಕ್ (28), ಮನೋಜ್ ಕುಮಾರ್(30) ಎಂಬ ಯುವಕರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಕುಡಿದ ಅಮಲಿನಲ್ಲಿ ಕ್ಯಾಂಟರ್ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸಿದ್ದಕ್ಕೆ ಇಬ್ಬರು ಅಮಾಯಕ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಹೆದ್ದಾರಿಯ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ಕ್ಯಾಂಟರ್ ಲಾರಿ ಉರುಳಿ ಬಿದ್ದಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕುಡಿತದ ನಶೆಯಲ್ಲಿದ್ದ ಡ್ರೈವರ್ನನ್ನು ಹಾಗೂ ಕ್ಲೀನರ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ