Advertisment

‘ಇಬ್ಬರು ಮಕ್ಕಳನ್ನು ಸಾಯಿಸಿದ್ದೇನೆ..’ ಕರುಣೆ ಇಲ್ಲದೇ ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿದ ಪಾಪಿ ತಾಯಿ

author-image
Ganesh
Updated On
‘ಇಬ್ಬರು ಮಕ್ಕಳನ್ನು ಸಾಯಿಸಿದ್ದೇನೆ..’ ಕರುಣೆ ಇಲ್ಲದೇ ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿದ ಪಾಪಿ ತಾಯಿ
Advertisment
  • ಬೆಂಗಳೂರಲ್ಲಿ ತಾಯಿಯಿಂದ ಬೆಚ್ಚಿ ಬೀಳಿಸೋ ಕೃತ್ಯ
  • ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ತಾಯಿ
  • 9 ವರ್ಷ ಮಗಳು, 7 ವರ್ಷದ ಪುತ್ರನ ಕೊಲೆ ಮಾಡಿದ ಹೆತ್ತಮ್ಮ

ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಬೆಂಗಳೂರು ಮಂದಿ ಬೆಚ್ಚಿಬಿದ್ದಿದ್ದಾರೆ.

Advertisment

ಗಂಗಾ ದೇವಿ ಕೊಲೆ ಮಾಡಿದ ಆರೋಪಿ. 9 ವರ್ಷದ ಮಗಳು ಲಕ್ಷ್ಮೀ, 7 ವರ್ಷದ ಮಗ ಗೌತಮ್​​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಆರೋಪ ಹೊತ್ತಿದ್ದಾಳೆ. ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಗಂಗಾದೇವಿಯೇ ಪೊಲೀಸರಿಗೆ ಖುದ್ದು ಮಾಹಿತಿ ನೀಡಿದ್ದಾಳೆ.

ಇದನ್ನೂ ಓದಿ: PUC RESULT: ಕಲಾ ವಿಭಾಗದಲ್ಲಿ ಮೇಧಾ, ವಾಣಿಜ್ಯ ವಿಭಾಗದಲ್ಲಿ ಗಾನವಿ, ವಿಜ್ಞಾನ ವಿಭಾಗ ನೂತನ್​ ರಾಜ್ಯಕ್ಕೆ ಪ್ರಥಮ

publive-image

ಇಬ್ಬರು ಮಕ್ಕಳನ್ನ ಕೊಲೆ ಮಾಡಿ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಗಂಗಾದೇವಿ, ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇನೆ. ಈಗ ನಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಫೋನ್​ನಲ್ಲಿ ಹೇಳಿದ್ದಾರೆ. ಕೂಡಲೇ ಅಲರ್ಟ್ ಆಗಿರುವ ಕಂಟ್ರೋಲ್ ರೂಮ್​, ಸ್ಥಳಕ್ಕೆ ಹೊಯ್ಸಳ ಟೀಂ ಕಳುಹಿಸಿದೆ. ಪರಿಶೀಲನೆ ಮಾಡಿ ಗಂಗಾದೇವಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisment

ಇದನ್ನೂ ಓದಿ: ಮುದ್ದಾದ ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದ ತಾಯಿ, ಬೆಚ್ಚಿಬಿದ್ದ ಬೆಂಗಳೂರು

ಗಂಗಾದೇವಿ ಮೂಲತಃ ಆಂಧ್ರ ಮೂಲದವಳು. ಕೊಲೆ ಆರೋಪಿತೆ ಗಂಗಾದೇವಿ ಪತಿ ಪೊಕ್ಸೊ ಕೇಸ್​ನಲ್ಲಿ ಜೈಲು ಪಾಲಾಗಿದ್ದಾನೆ. ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡ್ತಿದ್ದಳು ಎಂದು ತಿಳಿದುಬಂದಿದೆ. ಇನ್ನು, ಈ ಹಿಂದೆ ಗಂಗಾದೇವಿಯೇ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು. ಮಕ್ಕಳ ಜೊತೆ ಅಸಭ್ಯವರ್ತನೆ ತೋರುತ್ತಾನೆಂದು ಜಾಲಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment