Advertisment

ಸಾವಿನಲ್ಲೂ ಒಂದಾದ ದಂಪತಿ, ಹೃದಯ ವಿದ್ರಾವಕ ಘಟನೆಯಲ್ಲಿ 5 ಮಂದಿ ದಾರುಣ ಸಾವು

author-image
Ganesh
Updated On
ಸಾವಿನಲ್ಲೂ ಒಂದಾದ ದಂಪತಿ, ಹೃದಯ ವಿದ್ರಾವಕ ಘಟನೆಯಲ್ಲಿ 5 ಮಂದಿ ದಾರುಣ ಸಾವು
Advertisment
  • ಹಾಸನ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ
  • ಎರಡು ಬೈಕ್​​ನಲ್ಲಿದ್ದ ಒಟ್ಟು 6 ಮಂದಿ ಪ್ರಯಾಣ ಮಾಡ್ತಿದ್ದರು
  • ದುರ್ಘಟನೆಯಲ್ಲಿ ಓರ್ವ ಗಂಭೀರ, ಆಸ್ಪತ್ರೆಗೆ ದಾಖಲು

ಹಾಸನ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎರಡು ಅಪಘಾತ ಪ್ರಕರಣಗಳಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿ ಓರ್ವನಿಗೆ ಗಂಭೀರ ಗಾಯವಾಗಿದೆ. ಹೃದಯ ವಿದ್ರಾವಕ ವಿಚಾರ ಏನೆಂದರೆ ಸಾವಿನಲ್ಲೂ ದಂಪತಿ ಒಂದಾಗಿದೆ.

Advertisment

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ರಾಮೇಗೌಡ (55), ಭಾಗ್ಯಮ್ಮ (45) ಹಾಗೂ ಬೇಡಿಗನಹಳ್ಳಿ ಗ್ರಾಮದ ನಂಜಮ್ಮ (65) ಮೃತ ದುರ್ದೈವಿಗಳು. ಒಂದೇ ಬೈಕ್‌ನಲ್ಲಿ ಮೂಡಲ ಮಾಯಗೋಡನಹಳ್ಳಿ ಗ್ರಾಮಕ್ಕೆ ದಂಪತಿ ಹಾಗೂ ಬೀಗತಿ ತೆರಳುತ್ತಿದ್ದರು. ಹೊಳೆನರಸೀಪುರ ತಾಲೂಕಿನ ಆಲದಹಳ್ಳಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ‘ನನ್ನ ಪಾಲಿಗೆ ಆಕೆ ಸತ್ತಂತೆ..’ ಮಗಳು ಬದುಕಿರುವಾಗಲೇ ಶ್ರದ್ಧಾಂಜಲಿ ಸಲ್ಲಿಸಿ ಹೆತ್ತ ತಂದೆ ಆಕ್ರೋಶ

ಮೂವರು ತೆರಳುತ್ತಿದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಭಾಗ್ಯಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ರಾಮೇಗೌಡ ಹಾಗೂ ನಂಜಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Advertisment

ಮತ್ತೊಂದು ಪ್ರಕರಣದಲ್ಲಿ ಬೈಕ್‌ಗೆ ಆಪೆ ಆಟೋ ಡಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಕುಂಚೇವು ಕೋಡಿಹಳ್ಳಿ ಗ್ರಾಮದ ಕುಮಾರ್ (18), ರತೀಶ್ (17) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜುನಾಥ್‌ಗೆ (27) ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನ ಅಗ್ರಹಾರ ಗೇಟ್ ಬಳಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment