/newsfirstlive-kannada/media/post_attachments/wp-content/uploads/2024/07/TN_CAR_BUS_ACCIDENT.jpg)
ಹೈದರಾಬಾದ್​: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಬಸ್​ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾಫ್ಟ್​ವೇರ್​ ಉದ್ಯೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮೇಡ್ಚಲ್-ಸಮೀರ್ ಪೇಟೆಯ ರಾಜೀವ್ ರಸ್ತೆಯಲ್ಲಿ ನಡೆದಿದೆ.
ಸಾಫ್ಟ್​ವೇರ್​ ಉದ್ಯೋಗಿಗಳಾದ ಮೋಹನ್ (25) ಮತ್ತು ದೀಪಿಕಾ (25) ಮೃತಪಟ್ಟವರು. ಇವರು ಮೇಡ್ಚಲ್-ಸಮೀರ್ಪೇಟೆಯ ರಾಜೀವ್ ರಸ್ತೆಯಲ್ಲಿ ಕಾರಿನಲ್ಲಿ ವೇಗವಾಗಿ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ ದಾಟಿ ಇನ್ನೊಂದು ರಸ್ತೆಯಲ್ಲಿ ಎದುರಿಗೆ ಬರುತ್ತಿದ್ದ ಬಸ್​ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್​ನ ಹಿಂದೆ ಇನ್ನೊಂದು ಬಸ್​ ಬರುತ್ತಿತ್ತು. ಸ್ವಲ್ಪದರಲ್ಲೇ ದೊಡ್ಡ ಅನಾಹುತವೊಂದು ತಪ್ಪಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊಟ್ಟ ಮೊದಲ ಪದಕ.. ಮನು ಭಾಕರ್​ಗೆ ಅಭಿನಂದನೆಗಳ ಸುರಿಮಳೆ
కారు డాష్ క్యామ్ ఫుటేజ్.. రోడ్డు ప్రమాదంలో సాప్ట్వేర్ ఉద్యోగులు మృతి
మేడ్చల్ - శామీర్ పేట్ రాజీవ్ రహదారిపై అతివేగంతో కారు అదుపుతప్పి డివైడర్ దాటి, ఎదురుగా వస్తున్న బస్సును ఢీకొట్టింది.
నిన్న జరిగిన ఈ రోడ్డు ప్రమాదంలో గచ్చిబౌలిలోని ఓ సాప్ట్వేర్ కంపెనీలో పనిచేసే మోహన్(25),… pic.twitter.com/EqtlCON2IK
— Telugu Scribe (@TeluguScribe) July 27, 2024
ರಂಗಾರೆಡ್ಡಿ ಜಿಲ್ಲೆಯಲ್ಲಿನ ಗಚ್ಚಿಬೌಲಿಯ ಸಾಫ್ಟ್ವೇರ್ ಕಂಪನಿಯಲ್ಲಿ ಸಾವನ್ನಪ್ಪಿದ ಇಬ್ಬರು ಉದ್ಯೋಗಿಗಳು ಆಗಿದ್ದರು ಎನ್ನಲಾಗಿದೆ. ಕಾರು ಬಸ್​ಗೆ ಡಿಕ್ಕಿ ಹೊಡೆದಿದ್ದರಿಂದ ಬಸ್​ನ ಮುಂಭಾಗವೆಲ್ಲ ಹಾನಿಯಾಗಿದ್ದು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳು ಆಗಿವೆ. ಸದ್ಯ ಈ ಭೀಕರ ದೃಶ್ಯಗಳು ಬಸ್ಸಿನ ಹಿಂದೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ವಿಡಿಯೋ ಫುಲ್ ವೈರಲ್ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ