ಚಾಲಕನ ಕಂಟ್ರೋಲ್ ತಪ್ಪಿ ಪಲ್ಟಿಯಾದ ಕಾರು
ಟೈರ್ ಬ್ಲಾಸ್ಟ್ ಆದಂತೆ ನಿಯಂತ್ರಣ ಕಳೆದುಕೊಂಡು ಪಲ್ಟಿ
ಘಟನೆ ನಡೆದಿದ್ದೆಲ್ಲಿ? ಕಾರಿನಲ್ಲಿದ್ದ ನಾಲ್ವರ ಪರಿಸ್ಥಿತಿ ಏನಾಗಿದೆ?
ಕೊಪ್ಪಳ: ಕಾರೊಂದು ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದೆ. ಕೊಪ್ಪಳದ ಬಸಾಪುರ ದಿಬ್ಬ ಬೈಪಾಸ್ ಹೆದ್ದಾರಿ 67ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಾರು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ಹೊರಟಿತ್ತು. ಈ ವೇಳೆ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಚಾಲಕನ ಕಂಟ್ರೋಲ್ ತಪ್ಪಿ ಕಾರು ಪಲ್ಟಿಯಾಗಿದೆ.
ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ‘ಎಲ್ಲಾ ಹಣೆಬರಹ ಏನೂ ಮಾಡೋಕೆ ಆಗಲ್ಲ..’ ದರ್ಶನ್ ಪ್ರಕರಣದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ನಿನ್ನೆ ಸಂಜೆ ನಡೆದಿರುವ ಘಟನೆ ಇದಾಗಿದ್ದು, ಪೊಲೀಸರು ಮಾಹಿತಿ ನೀಡಿದ್ದಾರೆ. ಕಾರಿನಲ್ಲಿದ್ದ ನಾಲ್ಕು ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ
ಪಲ್ಟಿ ಹೊಡೆದ ಕಾರು ಕೊಪ್ಪಳ ನಿವಾಸಿ ಉಮರ್ ಎನ್ನುವವರಿಗೆ ಸೇರಿದ್ದಾಗಿದ್ದು, ಕೊಪ್ಪಳದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಚಾಲಕನ ಕಂಟ್ರೋಲ್ ತಪ್ಪಿ ಪಲ್ಟಿಯಾದ ಕಾರು
ಟೈರ್ ಬ್ಲಾಸ್ಟ್ ಆದಂತೆ ನಿಯಂತ್ರಣ ಕಳೆದುಕೊಂಡು ಪಲ್ಟಿ
ಘಟನೆ ನಡೆದಿದ್ದೆಲ್ಲಿ? ಕಾರಿನಲ್ಲಿದ್ದ ನಾಲ್ವರ ಪರಿಸ್ಥಿತಿ ಏನಾಗಿದೆ?
ಕೊಪ್ಪಳ: ಕಾರೊಂದು ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದೆ. ಕೊಪ್ಪಳದ ಬಸಾಪುರ ದಿಬ್ಬ ಬೈಪಾಸ್ ಹೆದ್ದಾರಿ 67ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಾರು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ಹೊರಟಿತ್ತು. ಈ ವೇಳೆ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಚಾಲಕನ ಕಂಟ್ರೋಲ್ ತಪ್ಪಿ ಕಾರು ಪಲ್ಟಿಯಾಗಿದೆ.
ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ‘ಎಲ್ಲಾ ಹಣೆಬರಹ ಏನೂ ಮಾಡೋಕೆ ಆಗಲ್ಲ..’ ದರ್ಶನ್ ಪ್ರಕರಣದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ನಿನ್ನೆ ಸಂಜೆ ನಡೆದಿರುವ ಘಟನೆ ಇದಾಗಿದ್ದು, ಪೊಲೀಸರು ಮಾಹಿತಿ ನೀಡಿದ್ದಾರೆ. ಕಾರಿನಲ್ಲಿದ್ದ ನಾಲ್ಕು ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ
ಪಲ್ಟಿ ಹೊಡೆದ ಕಾರು ಕೊಪ್ಪಳ ನಿವಾಸಿ ಉಮರ್ ಎನ್ನುವವರಿಗೆ ಸೇರಿದ್ದಾಗಿದ್ದು, ಕೊಪ್ಪಳದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ