newsfirstkannada.com

ಕಾಲೇಜು ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​​ ಕೇಸ್​ಗೆ ಟ್ವಿಸ್ಟ್​​; ತನಿಖೆ ಚುರುಕುಗೊಳಿಸಿದ ಪೊಲೀಸ್ರು

Share :

30-07-2023

    ಉಡುಪಿ ಕಾಲೇಜು ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​​ ಪ್ರಕರಣ

    ತನಿಖಾಧಿಕಾರಿ ಬದಲಾವಣೆ ಬೆನ್ನಲ್ಲೇ ಕೇಸ್​​ ಇನ್ವೆಸ್ಟಿಗೇಷನ್​​ ಚುರುಕು

    ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಪೊಲೀಸ್​​ ತನಿಖಾ ತಂಡ!

ಉಡುಪಿ: ಇತ್ತೀಚೆಗೆ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಯುವತಿ ವಿಡಿಯೋ ರೆಕಾರ್ಡ್​ ಮಾಡಿದ್ದರು ಎನ್ನಲಾದ ಕೇಸ್​​ ತನಿಖಾಧಿಕಾರಿಯನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿತ್ತು. ಈ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಇಂದು ಖುದ್ದು ಹೊಸ ತನಿಖಾಧಿಕಾರಿ ನೇತೃತ್ವದಲ್ಲೇ ಪೊಲೀಸ್​​ ತಂಡ ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ.

ಈ ಹಿಂದೆ ಮಂಜುನಾಥ್​ ಗೌಡ ಎಂಬುವರು ಕೇಸ್​​ನ ತನಿಖಾಧಿಕಾರಿಯಾಗಿ ನೇಮಕವಾಗಿದ್ದರು. ಪೊಲೀಸರ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದ ಕೂಡಲೇ ಮಂಜುನಾಥ್​​ ಗೌಡರ ಬದಲಿಗೆ ಕುಂದಾಪುರದ ಡಿವೈಎಸ್​​ಪಿ ಬೆಳ್ಳಿಯಪ್ಪ ಅವರ ಹೆಗಲಿಗೆ ಕೇಸ್​​ ತನಿಖಾ ಜವಾಬ್ದಾರಿ ಹೊರಿಸಲಾಗಿದೆ. ಈಗ ಹೊಸ ತನಿಖಾಧಿಕಾರಿ ನೇತೃತ್ವದ ಪೊಲೀಸರ ತಂಡ ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಮೂವರಿಗೆ ಜಾಮೀನು

ಈಗಾಗಲೇ ವಿಡಿಯೋ ರೆಕಾರ್ಡ್​ ಕೇಸ್​ನಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಕೇಸ್​ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಉಡುಪಿ ಡಿಸ್ಟ್ರಿಕ್ಟ್​​ ಕೋರ್ಟ್​​ ನ್ಯಾಯಾಧೀಶರಾದ ಶ್ಯಾಮ್​ ಪ್ರಕಾಶ್​​​ ನೇತೃತ್ವದ ಏಕಸದಸ್ಯ ಪೀಠ ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.

ಏನಿದು ಘಟನೆ?

ಇತ್ತೀಚೆಗೆ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರು ಮತ್ತೊಂದು ಧರ್ಮಕ್ಕೆ ಸೇರಿದ ಯುವತಿ ವಿಡಿಯೋ ಚಿತ್ರೀಕರಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಸುದ್ದಿಗೋಷ್ಠಿ ನಡೆಸಿ, ತಮಾಷೆಗಾಗಿ ವಿಡಿಯೋ ಮಾಡಿರುವುದಾಗಿ ಯುವತಿರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಈ ಕೇಸ್​ ಸಂಬಂಧ ಪೊಲೀಸರು ಮೂವರು ವಿದ್ಯಾರ್ಥಿನಿಯರ ಮೇಲೆ ಎಫ್​ಐಆರ್​ ಮಾಡಿದ್ದಾರೆ. ಜತೆಗೆ ಸೋಷಿಯಲ್​ ಮೀಡಿಯಾದಲ್ಲಿ ಇದರ ಬಗ್ಗೆ ಪೋಸ್ಟ್​ ಹಾಕಿದ್ದ ಯುವತಿ ವಿರುದ್ಧವೂ ಸುಳ್ಳು ಸುದ್ದಿ ಹರಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದ್ದರು ಎಂದು ಕೇಸ್​ ಹಾಕಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಲೇಜು ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​​ ಕೇಸ್​ಗೆ ಟ್ವಿಸ್ಟ್​​; ತನಿಖೆ ಚುರುಕುಗೊಳಿಸಿದ ಪೊಲೀಸ್ರು

https://newsfirstlive.com/wp-content/uploads/2023/07/Udupi-police_1.jpg

    ಉಡುಪಿ ಕಾಲೇಜು ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​​ ಪ್ರಕರಣ

    ತನಿಖಾಧಿಕಾರಿ ಬದಲಾವಣೆ ಬೆನ್ನಲ್ಲೇ ಕೇಸ್​​ ಇನ್ವೆಸ್ಟಿಗೇಷನ್​​ ಚುರುಕು

    ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಪೊಲೀಸ್​​ ತನಿಖಾ ತಂಡ!

ಉಡುಪಿ: ಇತ್ತೀಚೆಗೆ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಯುವತಿ ವಿಡಿಯೋ ರೆಕಾರ್ಡ್​ ಮಾಡಿದ್ದರು ಎನ್ನಲಾದ ಕೇಸ್​​ ತನಿಖಾಧಿಕಾರಿಯನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿತ್ತು. ಈ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಇಂದು ಖುದ್ದು ಹೊಸ ತನಿಖಾಧಿಕಾರಿ ನೇತೃತ್ವದಲ್ಲೇ ಪೊಲೀಸ್​​ ತಂಡ ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ.

ಈ ಹಿಂದೆ ಮಂಜುನಾಥ್​ ಗೌಡ ಎಂಬುವರು ಕೇಸ್​​ನ ತನಿಖಾಧಿಕಾರಿಯಾಗಿ ನೇಮಕವಾಗಿದ್ದರು. ಪೊಲೀಸರ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದ ಕೂಡಲೇ ಮಂಜುನಾಥ್​​ ಗೌಡರ ಬದಲಿಗೆ ಕುಂದಾಪುರದ ಡಿವೈಎಸ್​​ಪಿ ಬೆಳ್ಳಿಯಪ್ಪ ಅವರ ಹೆಗಲಿಗೆ ಕೇಸ್​​ ತನಿಖಾ ಜವಾಬ್ದಾರಿ ಹೊರಿಸಲಾಗಿದೆ. ಈಗ ಹೊಸ ತನಿಖಾಧಿಕಾರಿ ನೇತೃತ್ವದ ಪೊಲೀಸರ ತಂಡ ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಮೂವರಿಗೆ ಜಾಮೀನು

ಈಗಾಗಲೇ ವಿಡಿಯೋ ರೆಕಾರ್ಡ್​ ಕೇಸ್​ನಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಕೇಸ್​ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಉಡುಪಿ ಡಿಸ್ಟ್ರಿಕ್ಟ್​​ ಕೋರ್ಟ್​​ ನ್ಯಾಯಾಧೀಶರಾದ ಶ್ಯಾಮ್​ ಪ್ರಕಾಶ್​​​ ನೇತೃತ್ವದ ಏಕಸದಸ್ಯ ಪೀಠ ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.

ಏನಿದು ಘಟನೆ?

ಇತ್ತೀಚೆಗೆ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರು ಮತ್ತೊಂದು ಧರ್ಮಕ್ಕೆ ಸೇರಿದ ಯುವತಿ ವಿಡಿಯೋ ಚಿತ್ರೀಕರಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಸುದ್ದಿಗೋಷ್ಠಿ ನಡೆಸಿ, ತಮಾಷೆಗಾಗಿ ವಿಡಿಯೋ ಮಾಡಿರುವುದಾಗಿ ಯುವತಿರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಈ ಕೇಸ್​ ಸಂಬಂಧ ಪೊಲೀಸರು ಮೂವರು ವಿದ್ಯಾರ್ಥಿನಿಯರ ಮೇಲೆ ಎಫ್​ಐಆರ್​ ಮಾಡಿದ್ದಾರೆ. ಜತೆಗೆ ಸೋಷಿಯಲ್​ ಮೀಡಿಯಾದಲ್ಲಿ ಇದರ ಬಗ್ಗೆ ಪೋಸ್ಟ್​ ಹಾಕಿದ್ದ ಯುವತಿ ವಿರುದ್ಧವೂ ಸುಳ್ಳು ಸುದ್ದಿ ಹರಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದ್ದರು ಎಂದು ಕೇಸ್​ ಹಾಕಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More