ಉಡುಪಿ ಕಾಲೇಜು ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಪ್ರಕರಣ
ತನಿಖಾಧಿಕಾರಿ ಬದಲಾವಣೆ ಬೆನ್ನಲ್ಲೇ ಕೇಸ್ ಇನ್ವೆಸ್ಟಿಗೇಷನ್ ಚುರುಕು
ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಪೊಲೀಸ್ ತನಿಖಾ ತಂಡ!
ಉಡುಪಿ: ಇತ್ತೀಚೆಗೆ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಯುವತಿ ವಿಡಿಯೋ ರೆಕಾರ್ಡ್ ಮಾಡಿದ್ದರು ಎನ್ನಲಾದ ಕೇಸ್ ತನಿಖಾಧಿಕಾರಿಯನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿತ್ತು. ಈ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಇಂದು ಖುದ್ದು ಹೊಸ ತನಿಖಾಧಿಕಾರಿ ನೇತೃತ್ವದಲ್ಲೇ ಪೊಲೀಸ್ ತಂಡ ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ.
ಈ ಹಿಂದೆ ಮಂಜುನಾಥ್ ಗೌಡ ಎಂಬುವರು ಕೇಸ್ನ ತನಿಖಾಧಿಕಾರಿಯಾಗಿ ನೇಮಕವಾಗಿದ್ದರು. ಪೊಲೀಸರ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದ ಕೂಡಲೇ ಮಂಜುನಾಥ್ ಗೌಡರ ಬದಲಿಗೆ ಕುಂದಾಪುರದ ಡಿವೈಎಸ್ಪಿ ಬೆಳ್ಳಿಯಪ್ಪ ಅವರ ಹೆಗಲಿಗೆ ಕೇಸ್ ತನಿಖಾ ಜವಾಬ್ದಾರಿ ಹೊರಿಸಲಾಗಿದೆ. ಈಗ ಹೊಸ ತನಿಖಾಧಿಕಾರಿ ನೇತೃತ್ವದ ಪೊಲೀಸರ ತಂಡ ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಮೂವರಿಗೆ ಜಾಮೀನು
ಈಗಾಗಲೇ ವಿಡಿಯೋ ರೆಕಾರ್ಡ್ ಕೇಸ್ನಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೇಸ್ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಉಡುಪಿ ಡಿಸ್ಟ್ರಿಕ್ಟ್ ಕೋರ್ಟ್ ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್ ನೇತೃತ್ವದ ಏಕಸದಸ್ಯ ಪೀಠ ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.
ಏನಿದು ಘಟನೆ?
ಇತ್ತೀಚೆಗೆ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರು ಮತ್ತೊಂದು ಧರ್ಮಕ್ಕೆ ಸೇರಿದ ಯುವತಿ ವಿಡಿಯೋ ಚಿತ್ರೀಕರಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಸುದ್ದಿಗೋಷ್ಠಿ ನಡೆಸಿ, ತಮಾಷೆಗಾಗಿ ವಿಡಿಯೋ ಮಾಡಿರುವುದಾಗಿ ಯುವತಿರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಈ ಕೇಸ್ ಸಂಬಂಧ ಪೊಲೀಸರು ಮೂವರು ವಿದ್ಯಾರ್ಥಿನಿಯರ ಮೇಲೆ ಎಫ್ಐಆರ್ ಮಾಡಿದ್ದಾರೆ. ಜತೆಗೆ ಸೋಷಿಯಲ್ ಮೀಡಿಯಾದಲ್ಲಿ ಇದರ ಬಗ್ಗೆ ಪೋಸ್ಟ್ ಹಾಕಿದ್ದ ಯುವತಿ ವಿರುದ್ಧವೂ ಸುಳ್ಳು ಸುದ್ದಿ ಹರಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದ್ದರು ಎಂದು ಕೇಸ್ ಹಾಕಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಉಡುಪಿ ಕಾಲೇಜು ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಪ್ರಕರಣ
ತನಿಖಾಧಿಕಾರಿ ಬದಲಾವಣೆ ಬೆನ್ನಲ್ಲೇ ಕೇಸ್ ಇನ್ವೆಸ್ಟಿಗೇಷನ್ ಚುರುಕು
ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಪೊಲೀಸ್ ತನಿಖಾ ತಂಡ!
ಉಡುಪಿ: ಇತ್ತೀಚೆಗೆ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಯುವತಿ ವಿಡಿಯೋ ರೆಕಾರ್ಡ್ ಮಾಡಿದ್ದರು ಎನ್ನಲಾದ ಕೇಸ್ ತನಿಖಾಧಿಕಾರಿಯನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿತ್ತು. ಈ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಇಂದು ಖುದ್ದು ಹೊಸ ತನಿಖಾಧಿಕಾರಿ ನೇತೃತ್ವದಲ್ಲೇ ಪೊಲೀಸ್ ತಂಡ ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ.
ಈ ಹಿಂದೆ ಮಂಜುನಾಥ್ ಗೌಡ ಎಂಬುವರು ಕೇಸ್ನ ತನಿಖಾಧಿಕಾರಿಯಾಗಿ ನೇಮಕವಾಗಿದ್ದರು. ಪೊಲೀಸರ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದ ಕೂಡಲೇ ಮಂಜುನಾಥ್ ಗೌಡರ ಬದಲಿಗೆ ಕುಂದಾಪುರದ ಡಿವೈಎಸ್ಪಿ ಬೆಳ್ಳಿಯಪ್ಪ ಅವರ ಹೆಗಲಿಗೆ ಕೇಸ್ ತನಿಖಾ ಜವಾಬ್ದಾರಿ ಹೊರಿಸಲಾಗಿದೆ. ಈಗ ಹೊಸ ತನಿಖಾಧಿಕಾರಿ ನೇತೃತ್ವದ ಪೊಲೀಸರ ತಂಡ ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಮೂವರಿಗೆ ಜಾಮೀನು
ಈಗಾಗಲೇ ವಿಡಿಯೋ ರೆಕಾರ್ಡ್ ಕೇಸ್ನಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೇಸ್ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಉಡುಪಿ ಡಿಸ್ಟ್ರಿಕ್ಟ್ ಕೋರ್ಟ್ ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್ ನೇತೃತ್ವದ ಏಕಸದಸ್ಯ ಪೀಠ ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.
ಏನಿದು ಘಟನೆ?
ಇತ್ತೀಚೆಗೆ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರು ಮತ್ತೊಂದು ಧರ್ಮಕ್ಕೆ ಸೇರಿದ ಯುವತಿ ವಿಡಿಯೋ ಚಿತ್ರೀಕರಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಸುದ್ದಿಗೋಷ್ಠಿ ನಡೆಸಿ, ತಮಾಷೆಗಾಗಿ ವಿಡಿಯೋ ಮಾಡಿರುವುದಾಗಿ ಯುವತಿರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಈ ಕೇಸ್ ಸಂಬಂಧ ಪೊಲೀಸರು ಮೂವರು ವಿದ್ಯಾರ್ಥಿನಿಯರ ಮೇಲೆ ಎಫ್ಐಆರ್ ಮಾಡಿದ್ದಾರೆ. ಜತೆಗೆ ಸೋಷಿಯಲ್ ಮೀಡಿಯಾದಲ್ಲಿ ಇದರ ಬಗ್ಗೆ ಪೋಸ್ಟ್ ಹಾಕಿದ್ದ ಯುವತಿ ವಿರುದ್ಧವೂ ಸುಳ್ಳು ಸುದ್ದಿ ಹರಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದ್ದರು ಎಂದು ಕೇಸ್ ಹಾಕಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ