ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿದ ಕುಟುಂಬ
ಬದುಕುಳಿದ ಪುತ್ರ ಅಸಾದ್ ಜೀವನ ಕಟ್ಟಿಕೊಳ್ಳಬೇಕು ಎಂದು ಮಾರ್ಗದರ್ಶನ!
ಉಡುಪಿ ಎಸ್ಪಿ ವಿಶ್ವಾಸದ ಮತ್ತು ಧೈರ್ಯದ ಮಾತುಗಳನ್ನು ನಮ್ಮಲ್ಲಿ ತುಂಬಿದ್ದಾರೆ
ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಮೊಹಮ್ಮದ್ ಕುಟುಂಬ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ಕೊಟ್ಟ ಮೊಹಮ್ಮದ್ ಕುಟುಂಬ ಆರೋಪಿಯನ್ನು ಶೀಘ್ರವಾಗಿ ಪತ್ತೆ ಹಚ್ಚಿರುವುದಕ್ಕೆ ಧನ್ಯವಾದ ತಿಳಿಸಿದ್ದಾರೆ.
ಒಂದೇ ಮನೆಯಲ್ಲಿ ನಾಲ್ವರ ಹತ್ಯಾಕಾಂಡ ನಡೆದಿದ್ದ ರಕ್ತಪಾತ ಇನ್ನೂ ಬೆಚ್ಚಿ ಬೀಳುವಂತಿದೆ. ಗಗನಸಖಿ ಅಯ್ನಾಸ್ಳನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಪ್ರವೀಣ ಚೌಗಲೆಯ ಬಗ್ಗೆ ಎಲ್ಲಾ ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದಾರೆ. ಇದರ ಮಧ್ಯೆ ಮೊಹಮ್ಮದ್ ಕುಟುಂಬಸ್ಥರು ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇನ್ನೂ ಕುರಿತು ಸುದ್ದಿಗಾರರೊಂದಿಗೆ ಮಾತಾಡಿದ ಮೊಹಮ್ಮದ್ ಅವರು, ದೀಪಾವಳಿ ಆಚರಿಸಿದೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ಘಟನೆ ನಡೆದು ಎರಡು ದಿನದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಉಡುಪಿ ಎಸ್ಪಿ ವಿಶ್ವಾಸದ ಮತ್ತು ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ಬದುಕುಳಿದ ಪುತ್ರ ಅಸಾದ್ ಹೇಗೆ ಜೀವನ ಕಟ್ಟಿಕೊಳ್ಳಬೇಕು ಎಂದು ಮಾರ್ಗದರ್ಶನ ಮಾಡಿದ್ದಾರೆ. ಊಹಾಪೋಹಗಳು ಸುಳ್ಳು ಎಂದು ಎಸ್ ಪಿ ಮಾಹಿತಿ ನೀಡಿರುವುದು ನೆಮ್ಮದಿ ತಂದಿದೆ ಎಂದು ಹೇಳಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿದ ಕುಟುಂಬ
ಬದುಕುಳಿದ ಪುತ್ರ ಅಸಾದ್ ಜೀವನ ಕಟ್ಟಿಕೊಳ್ಳಬೇಕು ಎಂದು ಮಾರ್ಗದರ್ಶನ!
ಉಡುಪಿ ಎಸ್ಪಿ ವಿಶ್ವಾಸದ ಮತ್ತು ಧೈರ್ಯದ ಮಾತುಗಳನ್ನು ನಮ್ಮಲ್ಲಿ ತುಂಬಿದ್ದಾರೆ
ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಮೊಹಮ್ಮದ್ ಕುಟುಂಬ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ಕೊಟ್ಟ ಮೊಹಮ್ಮದ್ ಕುಟುಂಬ ಆರೋಪಿಯನ್ನು ಶೀಘ್ರವಾಗಿ ಪತ್ತೆ ಹಚ್ಚಿರುವುದಕ್ಕೆ ಧನ್ಯವಾದ ತಿಳಿಸಿದ್ದಾರೆ.
ಒಂದೇ ಮನೆಯಲ್ಲಿ ನಾಲ್ವರ ಹತ್ಯಾಕಾಂಡ ನಡೆದಿದ್ದ ರಕ್ತಪಾತ ಇನ್ನೂ ಬೆಚ್ಚಿ ಬೀಳುವಂತಿದೆ. ಗಗನಸಖಿ ಅಯ್ನಾಸ್ಳನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಪ್ರವೀಣ ಚೌಗಲೆಯ ಬಗ್ಗೆ ಎಲ್ಲಾ ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದಾರೆ. ಇದರ ಮಧ್ಯೆ ಮೊಹಮ್ಮದ್ ಕುಟುಂಬಸ್ಥರು ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇನ್ನೂ ಕುರಿತು ಸುದ್ದಿಗಾರರೊಂದಿಗೆ ಮಾತಾಡಿದ ಮೊಹಮ್ಮದ್ ಅವರು, ದೀಪಾವಳಿ ಆಚರಿಸಿದೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ಘಟನೆ ನಡೆದು ಎರಡು ದಿನದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಉಡುಪಿ ಎಸ್ಪಿ ವಿಶ್ವಾಸದ ಮತ್ತು ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ಬದುಕುಳಿದ ಪುತ್ರ ಅಸಾದ್ ಹೇಗೆ ಜೀವನ ಕಟ್ಟಿಕೊಳ್ಳಬೇಕು ಎಂದು ಮಾರ್ಗದರ್ಶನ ಮಾಡಿದ್ದಾರೆ. ಊಹಾಪೋಹಗಳು ಸುಳ್ಳು ಎಂದು ಎಸ್ ಪಿ ಮಾಹಿತಿ ನೀಡಿರುವುದು ನೆಮ್ಮದಿ ತಂದಿದೆ ಎಂದು ಹೇಳಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ