ಅನೈತಿಕ ಸಂಬಂಧ ಹಿನ್ನೆಲೆ ಇಡೀ ಕುಟುಂಬವನ್ನೇ ಕೊಲೆ ಮಾಡಿದ ಶಂಕೆ
ತಾಯಿ, ಮೂವರು ಮಕ್ಕಳನ್ನ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ
ಲೊಕೇಶನ್ ಆಧರಿಸಿ ಆರೋಪಿಯನ್ನ ಅರೆಸ್ಟ್ ಮಾಡಿದ ಪೊಲೀಸರು
ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಆರೋಪಿಯನ್ನ ಪೊಲೀಸರು ಬೆಳಗಾವಿಯ ಕುಡಚಿಯಲ್ಲಿ ಅರೆಸ್ಟ್ ಮಾಡಿದ್ದಾರೆ.
ಮಂಗಳೂರು ಏರ್ಪೋರ್ಟ್ನ CRPF ಸಿಬ್ಬಂದಿ ಪ್ರವೀಣ್ ಅರುಣ್ ಚೌಗಲೆ ಬಂಧನ. ನವೆಂಬರ್ 12 ರಂದು ತಾಯಿ ಹಸೀನಾ ಹಾಗೂ ಮಕ್ಕಳಾದ ಅಫ್ನಾನ್, ಅಯ್ನಾಝ್, ಹಾಸಿಂರನ್ನು ಕೊಲೆ ಮಾಡಿ ಬಳಿಕ ಅಲ್ಲಿಂದ ಆರೋಪಿ ಪರಾರಿಯಾಗಿದ್ದನು. ಈ ಘಟನೆಯು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಹೀಗಾಗಿ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದರು.
ಪ್ರವೀಣ್ ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದು ಮಂಗಳೂರು ಏರ್ಪೋರ್ಟ್ನಲ್ಲಿ ಸಿಆರ್ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದನು. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ನಾಲ್ವರನ್ನು ಕೊಲೆ ಮಾಡಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಹತ್ಯೆ ಮಾಡಿದ ಬಳಿಕ ಕುಡಚಿಯ ನೀರಾವರಿ ಇಲಾಖೆಯ ಅಧಿಕಾರಿಯಾಗಿರುವ ಸಂಬಂಧಿ ಪಾಟೀಲ್ ಎನ್ನುವರ ಮನೆಯಲ್ಲಿದ್ದನು. ಹೀಗಾಗಿ ಮೊಬೈಲ್ ಟವರ್ ಲೋಕೇಶನ್ ಅನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅನೈತಿಕ ಸಂಬಂಧ ಹಿನ್ನೆಲೆ ಇಡೀ ಕುಟುಂಬವನ್ನೇ ಕೊಲೆ ಮಾಡಿದ ಶಂಕೆ
ತಾಯಿ, ಮೂವರು ಮಕ್ಕಳನ್ನ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ
ಲೊಕೇಶನ್ ಆಧರಿಸಿ ಆರೋಪಿಯನ್ನ ಅರೆಸ್ಟ್ ಮಾಡಿದ ಪೊಲೀಸರು
ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಆರೋಪಿಯನ್ನ ಪೊಲೀಸರು ಬೆಳಗಾವಿಯ ಕುಡಚಿಯಲ್ಲಿ ಅರೆಸ್ಟ್ ಮಾಡಿದ್ದಾರೆ.
ಮಂಗಳೂರು ಏರ್ಪೋರ್ಟ್ನ CRPF ಸಿಬ್ಬಂದಿ ಪ್ರವೀಣ್ ಅರುಣ್ ಚೌಗಲೆ ಬಂಧನ. ನವೆಂಬರ್ 12 ರಂದು ತಾಯಿ ಹಸೀನಾ ಹಾಗೂ ಮಕ್ಕಳಾದ ಅಫ್ನಾನ್, ಅಯ್ನಾಝ್, ಹಾಸಿಂರನ್ನು ಕೊಲೆ ಮಾಡಿ ಬಳಿಕ ಅಲ್ಲಿಂದ ಆರೋಪಿ ಪರಾರಿಯಾಗಿದ್ದನು. ಈ ಘಟನೆಯು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಹೀಗಾಗಿ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದರು.
ಪ್ರವೀಣ್ ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದು ಮಂಗಳೂರು ಏರ್ಪೋರ್ಟ್ನಲ್ಲಿ ಸಿಆರ್ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದನು. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ನಾಲ್ವರನ್ನು ಕೊಲೆ ಮಾಡಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಹತ್ಯೆ ಮಾಡಿದ ಬಳಿಕ ಕುಡಚಿಯ ನೀರಾವರಿ ಇಲಾಖೆಯ ಅಧಿಕಾರಿಯಾಗಿರುವ ಸಂಬಂಧಿ ಪಾಟೀಲ್ ಎನ್ನುವರ ಮನೆಯಲ್ಲಿದ್ದನು. ಹೀಗಾಗಿ ಮೊಬೈಲ್ ಟವರ್ ಲೋಕೇಶನ್ ಅನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ