ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನಾಲ್ವರ ಕೊಲೆ
ಇನ್ಸ್ಟಾ ಸ್ಟೇಟಸ್ನಲ್ಲಿ ಪ್ರವೀಣ್ ಫೋಟೋ ಶೇರ್ ಮಾಡಿ ವಿಕೃತಿ
ಖಾತೆದಾರರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಪೊಲೀಸರು
ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಹಂತಕ ಪ್ರವೀಣ್ ಅರುಣ್ ಚೌಗುಲೆ ಫೋಟೋಗೆ ಕಿರೀಟ ತೊಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.
ಹಂತಕ ಪ್ರವೀಣ್ ಅರುಣ್ ಚೌಗುಲೆ ಫೋಟೋಕ್ಕೆ ಕಿರೀಟ ತೊಡಿಸಿ ಹಿಂದೂ ಮಂತ್ರ ಎನ್ನುವ ಇನ್ಸ್ಟಾಗ್ರಾಂ ಖಾತೆ ತನ್ನ ಸ್ಟೇಟಸ್ನಲ್ಲಿ ಶೇರ್ ಮಾಡಿಕೊಂಡಿದೆ. 15 ನಿಮಿಷದಲ್ಲಿ 4 ಕೊಲೆ, ಇದು ವರ್ಲ್ಡ್ ರೆಕಾರ್ಡ್ ಎಂದು ಬರೆದು ವಿಕೃತಿ ಮೆರೆದಿದ್ದಾರೆ.
ಸದ್ಯ ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಉಡುಪಿ ಪೋಲಿಸರು ಕ್ರಮ ತೆಗೆದುಕೊಂಡಿದ್ದು ಪೋಸ್ಟ್ ಶೇರ್ ಮಾಡಿದ್ದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಕೇಸ್ ದಾಖಲಿಸುತ್ತಿದ್ದಂತೆ ಹಿಂದೂ ಮಂತ್ರ ಅಕೌಂಟ್ನಿಂದ ಪೋಸ್ಟ್ ಅನ್ನು ತೆಗೆದು ಹಾಕಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನಾಲ್ವರ ಕೊಲೆ
ಇನ್ಸ್ಟಾ ಸ್ಟೇಟಸ್ನಲ್ಲಿ ಪ್ರವೀಣ್ ಫೋಟೋ ಶೇರ್ ಮಾಡಿ ವಿಕೃತಿ
ಖಾತೆದಾರರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಪೊಲೀಸರು
ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಹಂತಕ ಪ್ರವೀಣ್ ಅರುಣ್ ಚೌಗುಲೆ ಫೋಟೋಗೆ ಕಿರೀಟ ತೊಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.
ಹಂತಕ ಪ್ರವೀಣ್ ಅರುಣ್ ಚೌಗುಲೆ ಫೋಟೋಕ್ಕೆ ಕಿರೀಟ ತೊಡಿಸಿ ಹಿಂದೂ ಮಂತ್ರ ಎನ್ನುವ ಇನ್ಸ್ಟಾಗ್ರಾಂ ಖಾತೆ ತನ್ನ ಸ್ಟೇಟಸ್ನಲ್ಲಿ ಶೇರ್ ಮಾಡಿಕೊಂಡಿದೆ. 15 ನಿಮಿಷದಲ್ಲಿ 4 ಕೊಲೆ, ಇದು ವರ್ಲ್ಡ್ ರೆಕಾರ್ಡ್ ಎಂದು ಬರೆದು ವಿಕೃತಿ ಮೆರೆದಿದ್ದಾರೆ.
ಸದ್ಯ ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಉಡುಪಿ ಪೋಲಿಸರು ಕ್ರಮ ತೆಗೆದುಕೊಂಡಿದ್ದು ಪೋಸ್ಟ್ ಶೇರ್ ಮಾಡಿದ್ದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಕೇಸ್ ದಾಖಲಿಸುತ್ತಿದ್ದಂತೆ ಹಿಂದೂ ಮಂತ್ರ ಅಕೌಂಟ್ನಿಂದ ಪೋಸ್ಟ್ ಅನ್ನು ತೆಗೆದು ಹಾಕಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ