ಏಕಾಏಕಿ ಕುಸಿದ ನಿರ್ಮಾಣ ಹಂತದ ರೈಲ್ವೇ ಸೇತುವೆ
35ರಿಂದ 40 ಕಟ್ಟಡ ಕಾರ್ಮಿಕರು ಕೆಲಸ ಮಾಡುತ್ತಿದ್ದರು
ಉಳಿದ ಕಾರ್ಮಿಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ
ನವದೆಹಲಿ: ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿದ ಘಟನೆ ವಿಜೋರಾಂನಲ್ಲಿ ನಡೆದಿದೆ. ಇನ್ನುಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ಐಜ್ವಾಲ್ನಿಂದ ಸುಮಾರು 21 ಕಿ.ಮೀ ದೂರದಲ್ಲಿರುವ ಸಾಯಿರಾಂಗ್ ಪ್ರದೇಶದಲ್ಲಿ ರೈಲ್ವೇ ಸೇತುವೆ ನಿರ್ಮಾಣ ಕಾರ್ಯ ಸಾಗುತ್ತಿತ್ತು. ಈ ಕೆಲಸದಲ್ಲಿ ಸುಮಾರು 35ರಿಂದ 40 ಕಟ್ಟಡ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದರೆ ಕೆಲಸ ಮಾಡುವ ವೇಳೆ ಏಕಾಏಕಿ ಸೇತುವೆ ಕುಸಿದಿದೆ. ಉಳಿದ ಕಾರ್ಮಿಕರಿಗಾಗಿ ಶೋಧ ನಡೆಯುತ್ತಿದೆ.
ರೈಲ್ವೇ ಸೇತುವೆ ಕುಸಿದ ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತಪಟ್ಟವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಘೋಷಿಸಿದ್ದಾರೆ.
Pained by the bridge mishap in Mizoram. Condolences to those who have lost their loved ones. May the injured recover soon. Rescue operations are underway and all possible assistance is being given to those affected.
An ex-gratia of Rs. 2 lakh from PMNRF would be given to the…
— PMO India (@PMOIndia) August 23, 2023
Under construction railway over bridge at Sairang, near Aizawl collapsed today; atleast 17 workers died: Rescue under progress.
Deeply saddened and affected by this tragedy. I extend my deepest condolences to all the bereaved families and wishing a speedy recovery to the… pic.twitter.com/IbmjtHSPT7
— Zoramthanga (@ZoramthangaCM) August 23, 2023
ಮಿಜೋರಾಂ ಮುಖ್ಯಮಂತ್ರಿ ಝೋರಂತರಂಗ ಟ್ವೀಟ್ ಮಾಡಿದ್ದು, “ಐಜ್ವಾಲ್ ಬಳಿಯ ಸಾಯಿರಂಗ್ನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ. ಕನಿಷ್ಠ 17 ಕಾರ್ಮಿಕರು ಸಾವನ್ನಪ್ಪಿದ್ದಾರೆ. ರಕ್ಷಣೆ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರ ದುಃಖ ಮತ್ತು ಬಾಧಿತವಾಗಿದೆ. ನಾನು ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಜನರಿಗೆ ಕೃತಜ್ಞತೆ ಹೇಳುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಏಕಾಏಕಿ ಕುಸಿದ ನಿರ್ಮಾಣ ಹಂತದ ರೈಲ್ವೇ ಸೇತುವೆ
35ರಿಂದ 40 ಕಟ್ಟಡ ಕಾರ್ಮಿಕರು ಕೆಲಸ ಮಾಡುತ್ತಿದ್ದರು
ಉಳಿದ ಕಾರ್ಮಿಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ
ನವದೆಹಲಿ: ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿದ ಘಟನೆ ವಿಜೋರಾಂನಲ್ಲಿ ನಡೆದಿದೆ. ಇನ್ನುಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ಐಜ್ವಾಲ್ನಿಂದ ಸುಮಾರು 21 ಕಿ.ಮೀ ದೂರದಲ್ಲಿರುವ ಸಾಯಿರಾಂಗ್ ಪ್ರದೇಶದಲ್ಲಿ ರೈಲ್ವೇ ಸೇತುವೆ ನಿರ್ಮಾಣ ಕಾರ್ಯ ಸಾಗುತ್ತಿತ್ತು. ಈ ಕೆಲಸದಲ್ಲಿ ಸುಮಾರು 35ರಿಂದ 40 ಕಟ್ಟಡ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದರೆ ಕೆಲಸ ಮಾಡುವ ವೇಳೆ ಏಕಾಏಕಿ ಸೇತುವೆ ಕುಸಿದಿದೆ. ಉಳಿದ ಕಾರ್ಮಿಕರಿಗಾಗಿ ಶೋಧ ನಡೆಯುತ್ತಿದೆ.
ರೈಲ್ವೇ ಸೇತುವೆ ಕುಸಿದ ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತಪಟ್ಟವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಘೋಷಿಸಿದ್ದಾರೆ.
Pained by the bridge mishap in Mizoram. Condolences to those who have lost their loved ones. May the injured recover soon. Rescue operations are underway and all possible assistance is being given to those affected.
An ex-gratia of Rs. 2 lakh from PMNRF would be given to the…
— PMO India (@PMOIndia) August 23, 2023
Under construction railway over bridge at Sairang, near Aizawl collapsed today; atleast 17 workers died: Rescue under progress.
Deeply saddened and affected by this tragedy. I extend my deepest condolences to all the bereaved families and wishing a speedy recovery to the… pic.twitter.com/IbmjtHSPT7
— Zoramthanga (@ZoramthangaCM) August 23, 2023
ಮಿಜೋರಾಂ ಮುಖ್ಯಮಂತ್ರಿ ಝೋರಂತರಂಗ ಟ್ವೀಟ್ ಮಾಡಿದ್ದು, “ಐಜ್ವಾಲ್ ಬಳಿಯ ಸಾಯಿರಂಗ್ನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ. ಕನಿಷ್ಠ 17 ಕಾರ್ಮಿಕರು ಸಾವನ್ನಪ್ಪಿದ್ದಾರೆ. ರಕ್ಷಣೆ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರ ದುಃಖ ಮತ್ತು ಬಾಧಿತವಾಗಿದೆ. ನಾನು ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಜನರಿಗೆ ಕೃತಜ್ಞತೆ ಹೇಳುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ