ಇಂದು ರಾಜ್ಯಾದ್ಯಂತ ಪ್ರಕಟವಾಯ್ತು ಎಸ್ಎಸ್ಎಲ್ಸಿ ಫಲಿತಾಂಶ
ಶಾಸಕ ಪ್ರದೀಪ್ ಈಶ್ವರ್ ಆರಂಭಿಸಿರುವ ಸೂಪರ್ 60 ಯಶಸ್ವಿ
ಆನಂದ್ ಕುಮಾರ್ ಸೂಪರ್ 30 ಕಾರ್ಯಕ್ರಮದಿಂದ ಪ್ರೇರಣೆ
ಚಿಕ್ಕಬಳ್ಳಾಪುರ: ಇಂದು ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಅದೇಷ್ಟೋ ವಿದ್ಯಾರ್ಥಿಗಳ ಕನಸ್ಸು ಇಂದು ನನಸಾಗಿದೆ. ಅದರಲ್ಲೂ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಶುರು ಮಾಡಿದ ಸೂಪರ್ 60 ಶೈಕ್ಷಣಿಕ ಕಾರ್ಯಕ್ರಮ ಕೊನೆಗೂ ಯಶಸ್ವಿಯಾಗಿದೆ.
ಇದನ್ನೂ ಓದಿ: ರೈತನ ಮಗ SSLCಯಲ್ಲಿ ರಾಜ್ಯಕ್ಕೇ ದ್ವಿತೀಯ.. ತಂದೆಗೆ ಖುಷಿಯೋ ಖುಷಿ
ಹೌದು, ಆರಂಭವಾದ ಮೊದಲ ವರ್ಷದಲ್ಲೇ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸೂಪರ್ 30ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಾಗಿತ್ತು. ಇದೀಗ ಸೂಪರ್ 60ಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಅದರಲ್ಲೂ ಬಹುತೇಕ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಪಾಸ್ ಆಗಿದ್ದಾರೆ. ಸರ್ಕಾರಿ ಶಾಲೆ ಮತ್ತು ಸರ್ಕಾರಿ ಏಡೆಡ್ ಶಾಲೆಗಳಿಂದ ಒಟ್ಟು 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸೂಪರ್ 60ನಲ್ಲಿ ತರಬೇತಿ ನೀಡಲಾಗಿತ್ತು. ಅದರಲ್ಲಿ ಹೆಚ್ಚಾಗಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ರೈನಿಂಗ್ ಸಹ ನೀಡಲಾಗಿತ್ತು.
ಬೆಂಗಳೂರಿನಲ್ಲಿ 1 ರಿಂದ 2 ತಿಂಗಳ ಕಾಲ ನುರಿತ ತಜ್ಞರಿಂದ ತರಬೇತಿ ಕೊಡಿಸಲಾಗಿತ್ತು. ಈ ತರಬೇತಿಯನ್ನು ನೀಡಲು ಸೂಪರ್ 60 ಎಂಬ ಶೈಕ್ಷಣಿಕ ಕಾರ್ಯಕ್ರಮ ಶಾಸಕ ಪ್ರದೀಪ್ ಈಶ್ವರ್ ಅವರು ಆರಂಭಿಸಿದ್ದರು. ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಈ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಸದ್ಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರದ ಜೂನಿಯರ್ ಕಾಲೇಜು ಆವರಣದಲ್ಲಿ ಸೇರಿಕೊಂಡು ಶಾಸಕ ಪ್ರದೀಪ್ ಈಶ್ವರ್ಗೆ ಹೂವಿನ ಸುರಿಮಳೆ ಗೈದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ರಾಜ್ಯಾದ್ಯಂತ ಪ್ರಕಟವಾಯ್ತು ಎಸ್ಎಸ್ಎಲ್ಸಿ ಫಲಿತಾಂಶ
ಶಾಸಕ ಪ್ರದೀಪ್ ಈಶ್ವರ್ ಆರಂಭಿಸಿರುವ ಸೂಪರ್ 60 ಯಶಸ್ವಿ
ಆನಂದ್ ಕುಮಾರ್ ಸೂಪರ್ 30 ಕಾರ್ಯಕ್ರಮದಿಂದ ಪ್ರೇರಣೆ
ಚಿಕ್ಕಬಳ್ಳಾಪುರ: ಇಂದು ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಅದೇಷ್ಟೋ ವಿದ್ಯಾರ್ಥಿಗಳ ಕನಸ್ಸು ಇಂದು ನನಸಾಗಿದೆ. ಅದರಲ್ಲೂ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಶುರು ಮಾಡಿದ ಸೂಪರ್ 60 ಶೈಕ್ಷಣಿಕ ಕಾರ್ಯಕ್ರಮ ಕೊನೆಗೂ ಯಶಸ್ವಿಯಾಗಿದೆ.
ಇದನ್ನೂ ಓದಿ: ರೈತನ ಮಗ SSLCಯಲ್ಲಿ ರಾಜ್ಯಕ್ಕೇ ದ್ವಿತೀಯ.. ತಂದೆಗೆ ಖುಷಿಯೋ ಖುಷಿ
ಹೌದು, ಆರಂಭವಾದ ಮೊದಲ ವರ್ಷದಲ್ಲೇ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸೂಪರ್ 30ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಾಗಿತ್ತು. ಇದೀಗ ಸೂಪರ್ 60ಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಅದರಲ್ಲೂ ಬಹುತೇಕ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಪಾಸ್ ಆಗಿದ್ದಾರೆ. ಸರ್ಕಾರಿ ಶಾಲೆ ಮತ್ತು ಸರ್ಕಾರಿ ಏಡೆಡ್ ಶಾಲೆಗಳಿಂದ ಒಟ್ಟು 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸೂಪರ್ 60ನಲ್ಲಿ ತರಬೇತಿ ನೀಡಲಾಗಿತ್ತು. ಅದರಲ್ಲಿ ಹೆಚ್ಚಾಗಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ರೈನಿಂಗ್ ಸಹ ನೀಡಲಾಗಿತ್ತು.
ಬೆಂಗಳೂರಿನಲ್ಲಿ 1 ರಿಂದ 2 ತಿಂಗಳ ಕಾಲ ನುರಿತ ತಜ್ಞರಿಂದ ತರಬೇತಿ ಕೊಡಿಸಲಾಗಿತ್ತು. ಈ ತರಬೇತಿಯನ್ನು ನೀಡಲು ಸೂಪರ್ 60 ಎಂಬ ಶೈಕ್ಷಣಿಕ ಕಾರ್ಯಕ್ರಮ ಶಾಸಕ ಪ್ರದೀಪ್ ಈಶ್ವರ್ ಅವರು ಆರಂಭಿಸಿದ್ದರು. ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಈ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಸದ್ಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರದ ಜೂನಿಯರ್ ಕಾಲೇಜು ಆವರಣದಲ್ಲಿ ಸೇರಿಕೊಂಡು ಶಾಸಕ ಪ್ರದೀಪ್ ಈಶ್ವರ್ಗೆ ಹೂವಿನ ಸುರಿಮಳೆ ಗೈದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ