/newsfirstlive-kannada/media/post_attachments/wp-content/uploads/2024/03/Smriti_Mandhana-_2.jpg)
ಯುಪಿ ವಾರಿಯರ್ಸ್ ವಿರುದ್ಧ ನಡೆದ ಡಬ್ಲುಪಿಎಲ್ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಗರ್ಲ್ಸ್ ಹೀನಾಯ ಸೋಲು ಕಂಡಿದ್ದಾರೆ. ಪಂದ್ಯ ಟೈ ಆದ ಮೇಲೆ ಸೂಪರ್ ಓವರ್ನಲ್ಲಿ ಆರ್ಸಿಬಿ ನೆಲ ಕಚ್ಚಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕ್ಯಾಪ್ಟನ್ ಸ್ಮೃತಿ ಮಂದಾನ ಭಾರೀ ಮುಖಭಂಗ ಅನುಭವಿಸಿದ್ದಾರೆ. ಯುಪಿ ವಾರಿಯರ್ಸ್ ವಿರುದ್ಧದ ರಣ ರೋಚಕ ಪಂದ್ಯದಲ್ಲಿ ಇದೇ ಮೊದಲ ಬಾರಿಗೆ ಡಬ್ಲ್ಯುಪಿಎಲ್ನಲ್ಲಿ ಸೂಪರ್ ಓವರ್ ಪಂದ್ಯ ನಡೆಯಿತು. ಆದರೆ 4 ರನ್ಗಳಿಂದ ವಾರಿಯರ್ಸ್ ತಂಡ, ಆರ್ಸಿಬಿಯನ್ನು ಮಣಿಸಿದೆ.
ಸೂಪರ್ ಓವರ್ನಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡ 6 ಎಸೆತದಲ್ಲಿ 8 ರನ್ ಗಳಿಸಿತ್ತು. ಆರ್ಸಿಬಿಗೆ 9 ರನ್ಗಳ ಟಾರ್ಗೆಟ್ ಇತ್ತು. ಆದರೆ ಸ್ಮೃತಿ ಮಂದಾನ ಹಾಗೂ ರಿಚಾ ಘೋಷ್ ಅವರ ಬ್ಯಾಟಿಂಗ್ ದುಬಾರಿಯಾಯಿತು. ಇಬ್ಬರು ಒತ್ತಡದಲ್ಲೇ ಬಿಗ್ ಶಾಟ್ ಹೊಡೆಯುವಲ್ಲಿ ಕೈಚೆಲ್ಲಿದರು. ಸ್ಪೋಟಕ ಆಟಗಾರ್ತಿ ಎಲ್ಲಿಸ್ ಪೆರ್ರಿರನ್ನ ಬ್ಯಾಟಿಂಗ್ಗೆ ಕಳಿಸಿದ್ರೆ ಆರ್ಸಿಬಿ ಮ್ಯಾಚ್ ಗೆಲ್ಲಬಹುದಿತ್ತು. ಆದರೆ ಯುಪಿ ಪರವಾಗಿ ಸೋಫಿ ಎಕ್ಲೆಸ್ಟೋನ್ ಬೌಲಿಂಗ್ನಲ್ಲಿ ಪರಾಕ್ರಮ ಮೆರೆದು ಆರ್ಸಿಬಿ ಜಯ ಕಸಿದುಕೊಂಡರು. ಸೂಪರ್ ಓವರ್ನಲ್ಲಿ ಕೇವಲ 4 ರನ್ ಮಾತ್ರ ನೀಡಿದರು.
ಇದನ್ನೂ ಓದಿ: ರಾಜಕೀಯದಲ್ಲಿ ಒಂದು ನೈಟ್ ಅಲ್ಲಿ ಏನ್ ಬೇಕಾದ್ರೂ ಆಗಬಹುದು.. ದೆಹಲಿ ಯಾತ್ರೆಗೂ ಮುನ್ನ ಡಿಕೆಶಿ ಅಚ್ಚರಿ ಹೇಳಿಕೆ
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದುಕೊಂಡಿದ್ದ ಯುಪಿ ವಾರಿಯರ್ಸ್ ನಾಯಕಿ ದೀಪ್ತಿ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಬ್ಯಾಟಿಂಗ್ಗೆ ಆಗಮಿಸಿದ ಆರ್ಸಿಬಿ ಪರ ಓಪನರ್ ಸ್ಮೃತಿ ಮಂದಾನ ಕೇವಲ 6 ರನ್ಗೆ ಔಟ್ ಆಗಿ ಮತ್ತೆ ನಿರಾಸೆ ಮೂಡಿಸಿದರು. ಆದರೆ ಕ್ರೀಸ್ ಕಚ್ಚಿ ಬ್ಯಾಟ್ ಬೀಸಿದ ವ್ಯಾಟ್-ಹಾಡ್ಜ್ 57 ರನ್ ಹಾಗೂ ಸ್ಪೋಟಕ ಬ್ಯಾಟ್ಸ್ ವುಮೆನ್ ಎಲ್ಲಿಸ್ ಪೆರ್ರಿ 90 ರನ್ ಗಳಿಸಿ ಅಜೆಯರಾಗಿ ಉಳಿದು ಶತಕ ಮಿಸ್ ಮಾಡಿಕೊಂಡರು. ಉಳಿದವರು ಯಾರು ಉತ್ತಮ ಬ್ಯಾಟಿಂಗ್ ಮಾಡಲಿಲ್ಲ, ಹೀಗಾಗಿ 20 ಓವರ್ಗಳಲ್ಲಿ 6 ವಿಕೆಟ್ಗೆ 180 ರನ್ ಟಾರ್ಗೆಟ್ ನೀಡಿತು.
ಈ ಟಾರ್ಗೆಟ್ ಬೆನ್ನು ಹತ್ತಿದ ಯುಪಿ ವಾರಿಯರ್ಸ್ ಎಲ್ಲ ಬ್ಯಾಟರ್ಸ್ ಸಾಧಾರಣ ಬ್ಯಾಟಿಂಗ್ ಮಾಡಿದರು. ಹೀಗಾಗಿ 180 ರನ್ ಗಳಿಸಿ ಪಂದ್ಯವನ್ನು ಸಮಬಲಗೊಳಿಸಿದರು. ಇದರಿಂದಾಗಿ ಸೂಪರ್ ಓವರ್ ಆಡಿಸಲಾಗಿತ್ತು. ಆದರೆ ಆರ್ಸಿಬಿಯನ್ನು 4 ರನ್ಗಳಿಂದ ಯುಪಿ ಸೋಲಿಸಿತು. ಹ್ಯಾಟ್ರಿಕ್ ಗೆಲುವಿನಲ್ಲಿದ್ದ ಆರ್ಸಿಬಿ ಈಗ ಹ್ಯಾಟ್ರಿಕ್ ಸೋಲಿನ ಸುಳಿಯಲ್ಲಿ ನಿಂತಿದೆ ಎಂದು ಹೇಳಬಹುದು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ