ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದ ವಿದ್ಯಾರ್ಥಿಗಳು
ಉಪೇಂದ್ರ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಪ್ರತಿಭಟನೆ
ಉಪ್ಪಿ ಕ್ಷಮೆ ಕೇಳಿದರು ತಣಿಯುತ್ತಿಲ್ಲ ಅಸಮಾಧಾನ
ರಿಯಲ್ ಸ್ಟಾರ್ ಉಪೇಂದ್ರ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು. ಕೂಡಲೇ ಬಂಧಿಸಬೇಕು ಎಂದು ಘೋಷಣೆ ಕೂಗುವ ಮೂಲಕ ನಟನ ಪ್ರತಿಕೃತಿ ದಹಿಸಿ ಬೆಂಗಳೂರು ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
ಇತ್ತೀಚೆಗೆ ನಟ ಉಪೇಂದ್ರ ಫೇಸ್ಬುಕ್ ಮತ್ತು ಇನ್ಸ್ಟಾ ಲೈವ್ನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದರು. ಇದೇ ವಿಚಾರವಾಗಿ ಉಪೇಂದ್ರ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ನಟನ ವಿರುದ್ಧ ಘೋಷಣೆ ಕೂಗಿ ಗಡಿ ಪಾರು ಮಾಡುವಂತೆ ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಸದ್ಯ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.
ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆಯ ವಿಚಾರವಾಗಿ ಕ್ಷಮೆ ಕೇಳಿದರು ರಾಜ್ಯದಾದ್ಯಂತ ಪ್ರತಿಭಟನೆ ನಿಲ್ಲುತ್ತಿಲ್ಲ. ಮತ್ತೊಂದೆಡೆ ಅವರ ಮೇಲೆ ಕೇಸ್ ಕೂಡ ದಾಖಲಾಗಿದೆ. ಹೀಗಿದ್ದರು ಸಾಮಾಜಿಕ ಜಾಲತಾಣ ಸೇರಿದಂತೆ ಹಲವರು ಉಪ್ಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಉಪ್ಪಿ ಮೇಲೆ ಚೆನ್ನಮ್ಮನಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ಗೆ ಸ್ಟೇ ಸಿಕ್ಕಿದೆ.
Popular Kannada actor Upendra faces atrocity case for alleged anti Dalit remark during a social media live on the anniversary of his political outfit "Prajaakeeya"
He calls it slip of tongue, deletes & apologises. Case registered under Scheduled Castes and Scheduled Tribes… pic.twitter.com/F63KbDYCLk
— Nabila Jamal (@nabilajamal_) August 14, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದ ವಿದ್ಯಾರ್ಥಿಗಳು
ಉಪೇಂದ್ರ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಪ್ರತಿಭಟನೆ
ಉಪ್ಪಿ ಕ್ಷಮೆ ಕೇಳಿದರು ತಣಿಯುತ್ತಿಲ್ಲ ಅಸಮಾಧಾನ
ರಿಯಲ್ ಸ್ಟಾರ್ ಉಪೇಂದ್ರ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು. ಕೂಡಲೇ ಬಂಧಿಸಬೇಕು ಎಂದು ಘೋಷಣೆ ಕೂಗುವ ಮೂಲಕ ನಟನ ಪ್ರತಿಕೃತಿ ದಹಿಸಿ ಬೆಂಗಳೂರು ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
ಇತ್ತೀಚೆಗೆ ನಟ ಉಪೇಂದ್ರ ಫೇಸ್ಬುಕ್ ಮತ್ತು ಇನ್ಸ್ಟಾ ಲೈವ್ನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದರು. ಇದೇ ವಿಚಾರವಾಗಿ ಉಪೇಂದ್ರ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ನಟನ ವಿರುದ್ಧ ಘೋಷಣೆ ಕೂಗಿ ಗಡಿ ಪಾರು ಮಾಡುವಂತೆ ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಸದ್ಯ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.
ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆಯ ವಿಚಾರವಾಗಿ ಕ್ಷಮೆ ಕೇಳಿದರು ರಾಜ್ಯದಾದ್ಯಂತ ಪ್ರತಿಭಟನೆ ನಿಲ್ಲುತ್ತಿಲ್ಲ. ಮತ್ತೊಂದೆಡೆ ಅವರ ಮೇಲೆ ಕೇಸ್ ಕೂಡ ದಾಖಲಾಗಿದೆ. ಹೀಗಿದ್ದರು ಸಾಮಾಜಿಕ ಜಾಲತಾಣ ಸೇರಿದಂತೆ ಹಲವರು ಉಪ್ಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಉಪ್ಪಿ ಮೇಲೆ ಚೆನ್ನಮ್ಮನಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ಗೆ ಸ್ಟೇ ಸಿಕ್ಕಿದೆ.
Popular Kannada actor Upendra faces atrocity case for alleged anti Dalit remark during a social media live on the anniversary of his political outfit "Prajaakeeya"
He calls it slip of tongue, deletes & apologises. Case registered under Scheduled Castes and Scheduled Tribes… pic.twitter.com/F63KbDYCLk
— Nabila Jamal (@nabilajamal_) August 14, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ