newsfirstkannada.com

ಭೀಕರವಾಗಿ ಮರಕ್ಕೆ ಗುದ್ದಿದ ವಾಹನ; 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

Share :

31-10-2023

    ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗಕ್ಕೂ ಹಾನಿ

    ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬದುಕಿ ಬರಲಿಲ್ಲ

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ತನಿಖೆ ಶುರು

ಉತ್ತರ ಪ್ರದೇಶದ ಹರ್ದೋಯಿನಲ್ಲಿ ಮರವೊಂದಕ್ಕೆ ವಾಹನ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 4 ವರ್ಷದ ಮಗು ಕೂಡ ಮೃತಪಟ್ಟಿದೆ.

ನಿನ್ನೆ ಸಂಜೆ ಬಿಲ್ಹುರ್-ಕತ್ರಾ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ಹರ್ದೋಯಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಘಟನೆ ಬಗ್ಗೆ ಮಾಹಿತಿ ನೀಡಿ.. ರಸ್ತೆ ಅಪಘಾತದಲ್ಲಿ ನಾಲ್ವರು ವಯಸ್ಕರು ಹಾಗೂ ನಾಲ್ಕು ವರ್ಷದ ಒಂದು ಮಗು ಮೃತಪಟ್ಟಿದೆ. ಇವರು ನಯಾಗಾಂವ್​ನ ಬರಕನಾಥ ಗ್ರಾಮದ ನಿವಾಸಿಗಳಾಗಿದ್ದರು.

ಪ್ರಯಾಣಿಸುತ್ತಿದ್ದ ವಾಹನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರು ಮೃತಪಟ್ಟಿದ್ದಾರೆಂದು ದೃಢಪಡಿಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರವಾಗಿ ಮರಕ್ಕೆ ಗುದ್ದಿದ ವಾಹನ; 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

https://newsfirstlive.com/wp-content/uploads/2023/10/CAR_ACCIDENT-1.jpg

    ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗಕ್ಕೂ ಹಾನಿ

    ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬದುಕಿ ಬರಲಿಲ್ಲ

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ತನಿಖೆ ಶುರು

ಉತ್ತರ ಪ್ರದೇಶದ ಹರ್ದೋಯಿನಲ್ಲಿ ಮರವೊಂದಕ್ಕೆ ವಾಹನ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 4 ವರ್ಷದ ಮಗು ಕೂಡ ಮೃತಪಟ್ಟಿದೆ.

ನಿನ್ನೆ ಸಂಜೆ ಬಿಲ್ಹುರ್-ಕತ್ರಾ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ಹರ್ದೋಯಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಘಟನೆ ಬಗ್ಗೆ ಮಾಹಿತಿ ನೀಡಿ.. ರಸ್ತೆ ಅಪಘಾತದಲ್ಲಿ ನಾಲ್ವರು ವಯಸ್ಕರು ಹಾಗೂ ನಾಲ್ಕು ವರ್ಷದ ಒಂದು ಮಗು ಮೃತಪಟ್ಟಿದೆ. ಇವರು ನಯಾಗಾಂವ್​ನ ಬರಕನಾಥ ಗ್ರಾಮದ ನಿವಾಸಿಗಳಾಗಿದ್ದರು.

ಪ್ರಯಾಣಿಸುತ್ತಿದ್ದ ವಾಹನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರು ಮೃತಪಟ್ಟಿದ್ದಾರೆಂದು ದೃಢಪಡಿಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More