/newsfirstlive-kannada/media/post_attachments/wp-content/uploads/2025/06/MURUDESHWARA_TEMPLE.jpg)
ಉತ್ತರ ಕನ್ನಡ: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಮುರುಡೇಶ್ವರ ದೇವಾಲಯದಲ್ಲಿ ಅಧಿಕೃತವಾಗಿ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಸದ್ಯ ಈ ಸಂಬಂಧ ಆಡಳಿತ ಮಂಡಳಿಯು ದೇವಾಲಯದ ಮುಂಭಾಗದಲ್ಲಿ ಸೂಚನ ಫಲಕ ಅಳವಡಿಸಿದೆ.
ಭಟ್ಕಳ ತಾಲೂಕಿನಲ್ಲಿರುವ ಮುರುಡೇಶ್ವರ ಸ್ವಾಮಿಯ ದೇವಸ್ಥಾನವು ಧಾರ್ಮಿಕ ಪುಣ್ಯ ಸ್ಥಳವಾಗಿದ್ದು, ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿದೆ. ಅರಬ್ಬೀ ಸಮುದ್ರದ ತೀರದಲ್ಲಿರುವ ಈ ಊರು, ಪ್ರಪಂಚದ ಅತ್ಯಂತ ಎತ್ತರದ ಶಿವನ ವಿಗ್ರಹಕ್ಕೆ ಹೆಸರುವಾಸಿಯಾಗಿದೆ. ಮುರುಡೇಶ್ವರ ಕೇವಲ ಧಾರ್ಮಿಕ ಕ್ಷೇತ್ರ ಮಾತ್ರವಲ್ಲದೆ, ಪ್ರವಾಸಿ ತಾಣಗಳಲ್ಲಿ ಒಂದಾಗಿದೆ.
ಇಂತಹ ಧಾರ್ಮಿಕ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಭಾರತೀಯ ಸಾಂಪ್ರದಾಯದಂತೆ ಉಡುಪು ಧರಿಸುವಂತೆ ಸೂಚಿಸಲಾಗಿದೆ. ಅಂಗಿ, ಲುಂಗಿ, ಕುರ್ತಾ ಪೈಜಾಮ, ಫಾರ್ಮಲ್ ಪ್ಯಾಂಟ್, ಶರ್ಟ್ ಧರಿಸಬಹುದು. ಮಹಿಳೆಯರು ಸ್ಯಾರಿ, ಸಾಲ್ವರ್, ಚೂಡಿದಾರ ಧರಿಸಿ ದೇವರ ದರ್ಶನ ಪಡೆಯಬಹುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ:SENA ದೇಶಗಳ ವಿರುದ್ಧ ಬೂಮ್ರಾ ವಿಶೇಷ ದಾಖಲೆ.. ರೆಕಾರ್ಡ್ ಬ್ರೇಕ್ ಮಾಡಿದ ಯಾರ್ಕರ್ ಸ್ಪೆಷಲಿಸ್ಟ್!
ಪುರುಷರು, ಮಹಿಳೆಯರು ಟೀಶರ್ಟ್, ಆಫ್ ಪ್ಯಾಂಟ್, ಸ್ಕರ್ಟ್, ಆಫ್ತೋಳಿನ ಟೀಶರ್ಟ್, ಪುರುಷರು ಬನಿಯನ್ ಧರಿಸಿ ಬರುವಂತಿಲ್ಲ. ದೇವಾಲಯದ ಓಳಗೆ ಪಾಶ್ಚಿಮಾತ್ಯ ಶೈಲಿಯ ಕ್ಯಾಶುಯಲ್ ಡ್ರೆಸ್ಗಳಿಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಈ ಬಗ್ಗೆ ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಸೂಚನಾ ಫಲಕ ಅಳವಡಿಸಿ ಭಕ್ತರಿಗೆ ಸೂಚನೆ ನೀಡಲಾಗಿದೆ.
ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುರುಡೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಕೆಲವು ಭಕ್ತರು ಬೇಕಾಬಿಟ್ಟಿ ಉಡುಪು ಧರಿಸಿ ಒಳಗೆ ಬರುತ್ತಿರುವುದಕ್ಕೆ ಆಕ್ಷೇಪ ಕೇಳಿ ಬಂದಿದ್ದವು. ಈ ಬಗ್ಗೆ ಹಿಂದೂ ಪರ ಸಂಘಟನೆಗಳು ದೇವಾಲಯ ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿಗೆ ಮನವಿ ಮಾಡಿದ್ದವು. ಇದರ ಬೆನ್ನಲ್ಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ