ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ಆರೋಪ
ಜೂನ್ 1ರಂದು ವಾಲ್ಮೀಕಿ ನಿಗಮದಲ್ಲಿ ಹಿರಿಯ ಅಧಿಕಾರಿಗಳು ಅರೆಸ್ಟ್
ಆರೋಪಿ ನಾಗರಾಜ್ ಜೊತೆಗೆ ನಾಗೇಶ್ ಎಂಬಾತನನ್ನು ಬಂಧಿಸಿರೋ SIT
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಾಂತರ ರೂಪಾಯಿ ಹಗರಣದ ತನಿಖೆ ತೀವ್ರಗೊಂಡಿದೆ. ಮೊನ್ನೆಯಷ್ಟೇ ಎಸ್ಐಟಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಇಬ್ಬರು ಹಿರಿಯ ಅಧಿಕಾರಿಗಳನ್ನು ಬಂಧಿಸಿದ್ದರು. ಇದೀಗ ಎಸ್ಐಟಿ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ನಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: NDA ಸಭೆಗೂ ಮುನ್ನವೇ ದೊಡ್ಡ ಬೇಡಿಕೆ ಇಟ್ಟ ನಿತೀಶ್ ಕುಮಾರ್.. ಮೋದಿಗೆ ಟೆನ್ಷನ್ ಹೆಚ್ಚಿಸಿದ ಜೆಡಿಯು
ವಾಲ್ಮೀಕಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರ್ ಅವರು ಬರೆದಿದ್ದ ಡೆತ್ನೋಟ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕೃತ ಬ್ಯಾಂಕ್ ಖಾತೆಯಿಂದ ಆರ್ಬಿಎಲ್ ಬ್ಯಾಂಕ್ನಲ್ಲಿರೋ ಹತ್ತು ಖಾಸಗಿ ಕಂಪನಿಗಳು ಮತ್ತು ಎಂಟು ವ್ಯಕ್ತಿಗಳ ಖಾತೆಗಳಿಗೆ ₹89.62 ಕೋಟಿ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ: BREAKING: ವಾಲ್ಮೀಕಿ ನಿಗಮದ ಹಗರಣಕ್ಕೆ ಹೊಸ ಟ್ವಿಸ್ಟ್.. ಇಬ್ಬರು ಹಿರಿಯ ಅಧಿಕಾರಿಗಳು ಅರೆಸ್ಟ್!
ಈ ಹಗರಣ ಬೆಳಕಿಗೆ ಬಂದ ಬಳಿಕ ವಾಲ್ಮೀಕಿ ನಿಗಮದ ಅಧಿಕಾರಿಗಳು ನಾಪತ್ತೆಯಾಗಿದ್ದರು. ಜೂನ್ 1ರಂದು ಇಬ್ಬರನ್ನೂ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಪದ್ಮನಾಭ್ ಮತ್ತು ಪರುಶುರಾಮ್ ಬಂಧಿತ ಆರೋಪಿತ ಅಧಿಕಾರಿಗಳಾಗಿದ್ದರು. ಇದೀಗ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ನಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವ ನಾಗೇಂದ್ರ ಪಿಎ ನೆಕ್ಕುಂಟಿ ನಾಗರಾಜ್ನನ್ನು ಎಸ್ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಇವರ ಜೊತೆಗೆ ನಾಗರಾಜ್ ಸ್ನೇಹಿತ ನಾಗೇಶ್ ಎಂಬಾತನನ್ನ ಎಸ್ಐಟಿ ಬಂಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ಆರೋಪ
ಜೂನ್ 1ರಂದು ವಾಲ್ಮೀಕಿ ನಿಗಮದಲ್ಲಿ ಹಿರಿಯ ಅಧಿಕಾರಿಗಳು ಅರೆಸ್ಟ್
ಆರೋಪಿ ನಾಗರಾಜ್ ಜೊತೆಗೆ ನಾಗೇಶ್ ಎಂಬಾತನನ್ನು ಬಂಧಿಸಿರೋ SIT
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಾಂತರ ರೂಪಾಯಿ ಹಗರಣದ ತನಿಖೆ ತೀವ್ರಗೊಂಡಿದೆ. ಮೊನ್ನೆಯಷ್ಟೇ ಎಸ್ಐಟಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಇಬ್ಬರು ಹಿರಿಯ ಅಧಿಕಾರಿಗಳನ್ನು ಬಂಧಿಸಿದ್ದರು. ಇದೀಗ ಎಸ್ಐಟಿ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ನಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: NDA ಸಭೆಗೂ ಮುನ್ನವೇ ದೊಡ್ಡ ಬೇಡಿಕೆ ಇಟ್ಟ ನಿತೀಶ್ ಕುಮಾರ್.. ಮೋದಿಗೆ ಟೆನ್ಷನ್ ಹೆಚ್ಚಿಸಿದ ಜೆಡಿಯು
ವಾಲ್ಮೀಕಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರ್ ಅವರು ಬರೆದಿದ್ದ ಡೆತ್ನೋಟ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕೃತ ಬ್ಯಾಂಕ್ ಖಾತೆಯಿಂದ ಆರ್ಬಿಎಲ್ ಬ್ಯಾಂಕ್ನಲ್ಲಿರೋ ಹತ್ತು ಖಾಸಗಿ ಕಂಪನಿಗಳು ಮತ್ತು ಎಂಟು ವ್ಯಕ್ತಿಗಳ ಖಾತೆಗಳಿಗೆ ₹89.62 ಕೋಟಿ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ: BREAKING: ವಾಲ್ಮೀಕಿ ನಿಗಮದ ಹಗರಣಕ್ಕೆ ಹೊಸ ಟ್ವಿಸ್ಟ್.. ಇಬ್ಬರು ಹಿರಿಯ ಅಧಿಕಾರಿಗಳು ಅರೆಸ್ಟ್!
ಈ ಹಗರಣ ಬೆಳಕಿಗೆ ಬಂದ ಬಳಿಕ ವಾಲ್ಮೀಕಿ ನಿಗಮದ ಅಧಿಕಾರಿಗಳು ನಾಪತ್ತೆಯಾಗಿದ್ದರು. ಜೂನ್ 1ರಂದು ಇಬ್ಬರನ್ನೂ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಪದ್ಮನಾಭ್ ಮತ್ತು ಪರುಶುರಾಮ್ ಬಂಧಿತ ಆರೋಪಿತ ಅಧಿಕಾರಿಗಳಾಗಿದ್ದರು. ಇದೀಗ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ನಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವ ನಾಗೇಂದ್ರ ಪಿಎ ನೆಕ್ಕುಂಟಿ ನಾಗರಾಜ್ನನ್ನು ಎಸ್ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಇವರ ಜೊತೆಗೆ ನಾಗರಾಜ್ ಸ್ನೇಹಿತ ನಾಗೇಶ್ ಎಂಬಾತನನ್ನ ಎಸ್ಐಟಿ ಬಂಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ