ಬಿಗ್ಬಾಸ್ ಸೀಸನ್ 10ರ ಟ್ರೋಫಿ ಯಾರ ಕೈಗೆ ಸೇರಲಿದೆ ಗೊತ್ತಾ?
ಹುಲಿ ಉಗುರು ಪೆಂಡೆಂಟ್ ಧರಿಸಿದಕ್ಕೆ ಜೈಲಿಗೆ ಹೋಗಿದ್ದ ವರ್ತೂರು
ತನ್ನ ಜೀವನದಲ್ಲಾದ ಕಹಿ ಘಟನೆ ನೆನೆದು ಕಣ್ಣೀರಿಟ್ಟ ಹಳ್ಳಿಕಾರ್
ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10 ಫೈನಲ್ಗೆ ಕ್ಷಣಗಣನೆ ಶುರುವಾಗಿದೆ. ಇಂದು ಮತ್ತು ನಾಳೆ ಗ್ರ್ಯಾಂಡ್ ಫಿನಾಲೆ ಇದ್ದು, ಭಾನುವಾರ ಎಪಿಸೋಡ್ನಲ್ಲಿ ಬಿಗ್ಬಾಸ್ ಸೀಸನ್ 10ರ ಟ್ರೋಫಿ ಯಾರ ಕೈಗೆ ಸೇರಲಿದೆ ಎಂದು ತಿಳಿಯಲಿದೆ. ಇಂದು ಮತ್ತು ನಾಳೆ ವೀಕ್ಷಕರು ಕಿಚ್ಚ ಸುದೀಪ್ ಅವರನ್ನು ಕಾಣಬಹುದು.
ಸದ್ಯ ಕಲರ್ಸ್ ಕನ್ನಡ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನೂತನ ಪ್ರೋಮೋವೊಂದು ರಿಲೀಸ್ ಆಗಿದೆ. ರಿಲೀಸ್ ಆದ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅವರು ಖಡಕ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಕಿಚ್ಚ ಸುದೀಪ್ ಅವರು ವೇದಿಕೆ ಮೇಲೆ ಬರುತ್ತಿದ್ದಂತೆ ವರ್ತೂರ್ ಸಂತೋಷ್ ಅವರ ಜೀವನದಲ್ಲಿ ಆದ ಕಹಿ ಘಟನೆ ಬಗ್ಗೆ ನೆನಪು ಮಾಡಿದ್ದಾರೆ. ಹೌದು, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪದಲ್ಲಿ ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿತ್ತು. ವರ್ತೂರು ಸಂತೋಷ್ ಅವರ ಬಂಧನದ ಬಳಿಕ ಸಾಕಷ್ಟು ಬೇಸರಗೊಂಡಿದ್ದರು. ಬಳಿಕ ನನಗೆ ಬಿಗ್ಬಾಸ್ ಮನೆಯಲ್ಲಿ ಉಳಿಯಲು ಆಗುತ್ತಿಲ್ಲ. ದಯಮಾಡಿ ನನನ್ನು ಕಳುಹಿಸಿ ಎಂದು ಅತ್ತಿದ್ದರು. ಬಳಿಕ ಬಿಗ್ ಮನೆಗೆ ವರ್ತೂರ್ ಅವರ ತಾಯಿಯನ್ನು ಕಳಿಸಿ ಅವರಿಗೆ ಸಮಾಧಾನ ಮಾಡಲಾಯಿತು.
ಇದೇ ವಿಚಾರವಾಗಿ ಬಿಗ್ಬಾಸ್ ಮನೆಯಲ್ಲಿ ಉಳಿದುಕೊಂಡ ಸ್ಪರ್ಧಿಗಳ ಮುಂದೆ ಕಿಚ್ಚ ಸುದೀಪ್ ಅವರು ಈ ರೀತಿ ಹೇಳಿದ್ದಾರೆ. ವರ್ತೂರು ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಆ ಸಮಯದಲ್ಲಿ ತುಂಬಾ ನೋವನ್ನು ಅನುಭವಿಸುತ್ತಾರೆ. ಆಗ ವರ್ತೂರು ಸಂತೋಷ್ ಅವರು ‘‘ ನೀವು ಆಗ ಹೇಳಿದ್ದ ಮಾತು, ಬಿಗ್ಬಾಸ್ ನನಗೆ ಕೊಟ್ಟ ಒಂದು ಅವಕಾಶ ಇಲ್ಲಿಗೆ ತಂದು ನಿಲ್ಲಿಸಿದೆ. ನಾನು ಸಾಯುವವರೆಗೂ ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಗಳು ಅಣ್ಣ ಎಂದು ಹೇಳಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಿಗ್ಬಾಸ್ ಸೀಸನ್ 10ರ ಟ್ರೋಫಿ ಯಾರ ಕೈಗೆ ಸೇರಲಿದೆ ಗೊತ್ತಾ?
ಹುಲಿ ಉಗುರು ಪೆಂಡೆಂಟ್ ಧರಿಸಿದಕ್ಕೆ ಜೈಲಿಗೆ ಹೋಗಿದ್ದ ವರ್ತೂರು
ತನ್ನ ಜೀವನದಲ್ಲಾದ ಕಹಿ ಘಟನೆ ನೆನೆದು ಕಣ್ಣೀರಿಟ್ಟ ಹಳ್ಳಿಕಾರ್
ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10 ಫೈನಲ್ಗೆ ಕ್ಷಣಗಣನೆ ಶುರುವಾಗಿದೆ. ಇಂದು ಮತ್ತು ನಾಳೆ ಗ್ರ್ಯಾಂಡ್ ಫಿನಾಲೆ ಇದ್ದು, ಭಾನುವಾರ ಎಪಿಸೋಡ್ನಲ್ಲಿ ಬಿಗ್ಬಾಸ್ ಸೀಸನ್ 10ರ ಟ್ರೋಫಿ ಯಾರ ಕೈಗೆ ಸೇರಲಿದೆ ಎಂದು ತಿಳಿಯಲಿದೆ. ಇಂದು ಮತ್ತು ನಾಳೆ ವೀಕ್ಷಕರು ಕಿಚ್ಚ ಸುದೀಪ್ ಅವರನ್ನು ಕಾಣಬಹುದು.
ಸದ್ಯ ಕಲರ್ಸ್ ಕನ್ನಡ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನೂತನ ಪ್ರೋಮೋವೊಂದು ರಿಲೀಸ್ ಆಗಿದೆ. ರಿಲೀಸ್ ಆದ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅವರು ಖಡಕ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಕಿಚ್ಚ ಸುದೀಪ್ ಅವರು ವೇದಿಕೆ ಮೇಲೆ ಬರುತ್ತಿದ್ದಂತೆ ವರ್ತೂರ್ ಸಂತೋಷ್ ಅವರ ಜೀವನದಲ್ಲಿ ಆದ ಕಹಿ ಘಟನೆ ಬಗ್ಗೆ ನೆನಪು ಮಾಡಿದ್ದಾರೆ. ಹೌದು, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪದಲ್ಲಿ ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿತ್ತು. ವರ್ತೂರು ಸಂತೋಷ್ ಅವರ ಬಂಧನದ ಬಳಿಕ ಸಾಕಷ್ಟು ಬೇಸರಗೊಂಡಿದ್ದರು. ಬಳಿಕ ನನಗೆ ಬಿಗ್ಬಾಸ್ ಮನೆಯಲ್ಲಿ ಉಳಿಯಲು ಆಗುತ್ತಿಲ್ಲ. ದಯಮಾಡಿ ನನನ್ನು ಕಳುಹಿಸಿ ಎಂದು ಅತ್ತಿದ್ದರು. ಬಳಿಕ ಬಿಗ್ ಮನೆಗೆ ವರ್ತೂರ್ ಅವರ ತಾಯಿಯನ್ನು ಕಳಿಸಿ ಅವರಿಗೆ ಸಮಾಧಾನ ಮಾಡಲಾಯಿತು.
ಇದೇ ವಿಚಾರವಾಗಿ ಬಿಗ್ಬಾಸ್ ಮನೆಯಲ್ಲಿ ಉಳಿದುಕೊಂಡ ಸ್ಪರ್ಧಿಗಳ ಮುಂದೆ ಕಿಚ್ಚ ಸುದೀಪ್ ಅವರು ಈ ರೀತಿ ಹೇಳಿದ್ದಾರೆ. ವರ್ತೂರು ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಆ ಸಮಯದಲ್ಲಿ ತುಂಬಾ ನೋವನ್ನು ಅನುಭವಿಸುತ್ತಾರೆ. ಆಗ ವರ್ತೂರು ಸಂತೋಷ್ ಅವರು ‘‘ ನೀವು ಆಗ ಹೇಳಿದ್ದ ಮಾತು, ಬಿಗ್ಬಾಸ್ ನನಗೆ ಕೊಟ್ಟ ಒಂದು ಅವಕಾಶ ಇಲ್ಲಿಗೆ ತಂದು ನಿಲ್ಲಿಸಿದೆ. ನಾನು ಸಾಯುವವರೆಗೂ ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಗಳು ಅಣ್ಣ ಎಂದು ಹೇಳಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ