/newsfirstlive-kannada/media/post_attachments/wp-content/uploads/2025/07/Jagdeep_Dhankhar_1.jpg)
ದೇಶದ ಪ್ರಮುಖ ಸಾಂವಿಧಾನಿಕ ಹುದ್ದೆ ಹೊಂದಿರುವ ಜಗದೀಪ್ ಧನಕರ್ (Jagdeep Dhankhar) ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಘೋಷಿಸಿದ್ದಾರೆ.
ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಗೆ ಕಳುಹಿಸಿದ್ದಾರೆ. ರಾಷ್ಟ್ರಪತಿ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ ನಂತರ, ಹೊಸ ಉಪಾಧ್ಯಕ್ಷರ ಸಾಂವಿಧಾನಿಕ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ.
ಇದನ್ನೂ ಓದಿ: BCCI ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗ ರೋಜರ್ ಬಿನ್ನಿ ಗುಡ್ಬೈ.. ಹೊಸ ಬಾಸ್ ಯಾರ್ ಆಗ್ತಾರೆ?
ಸೋಮವಾರದ ಅಧಿವೇಶನದಲ್ಲಿ ಜಗದೀಪ್ ಧನಕರ್ ಸಂಜೆಯವರೆಗೂ ರಾಜ್ಯಸಭೆಯಲ್ಲಿದ್ದರು. ಅವರ ಹಠಾತ್ ನಿರ್ಧಾರ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸುತ್ತಿದೆ. ವೃತ್ತಿಯಲ್ಲಿ ವಕೀಲರಾಗಿದ್ದು, ನಂತರ ರಾಜಕೀಯದಲ್ಲಿ ಪ್ರಮುಖ ಹುದ್ದೆಗಳಿಗೆ ಏರಿದ ಧನಕರ್, ಈ ಹಿಂದೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಮತ್ತು ನಂತರ 2022ರಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಅವಧಿ ಮುಗಿಯುವ ಮುನ್ನವೇ ರಾಜೀನಾಮೆ ನೀಡಿರೋದು ಅಚ್ಚರಿಯ ಬೆಳವಣಿಗೆಗೆ ಕಾರಣವಾಗಿದೆ.
ಇದನ್ನೂ ಓದಿ: ಮೇಘಾಲಯ ಹನಿಮೂನ್ ಕೇಸ್; ಸೋನಮ್ ಈಗ ಏನ್ ಮಾಡ್ತಿದ್ದಾಳೆ..? ಲೇಟೆಸ್ಟ್ ಅಪ್ಡೇಟ್ಸ್ ಏನು?
ರಾಜೀನಾಮೆ ಪತ್ರದಲ್ಲಿ ಏನೆಂದು ತಿಳಿಸಿದ್ದಾರೆ..?
ಅನಾರೋಗ್ಯದ ಕಾರಣ ಸಂವಿಧಾನದ 67 ( ಎ) ವಿಧಿಯ ಅಡಿಯಲ್ಲಿ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳ ಸಹಕಾರ ಮತ್ತು ಸೌಹಾರ್ದಯುತ ಸಂಬಂಧಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
ಆರೋಗ್ಯ ಕಾರಣ ನೀಡಿ ರಾಜೀನಾಮೆ
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದ ಪತ್ರದಲ್ಲಿ ಅವರು, ‘ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಅನುಸರಿಸಲು ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ. ಮಹಾನ್ ಪ್ರಜಾಪ್ರಭುತ್ವದಲ್ಲಿ ಉಪಾಧ್ಯಕ್ಷರಾಗಿ ನಾನು ಗಳಿಸಿದ ಅಮೂಲ್ಯ ಅನುಭವಗಳಿಗೆ ಕೃತಜ್ಞನಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು. ನನ್ನ ಅಧಿಕಾರಾವಧಿಯಲ್ಲಿ ಅವರಿಂದ ಬಹಳಷ್ಟು ಕಲಿತಿದ್ದೇನೆ.
ಸಂಸತ್ತಿನ ಎಲ್ಲಾ ಸದಸ್ಯರಿಂದ ದೊರೆತ ಪ್ರೀತಿ, ವಿಶ್ವಾಸ ಮತ್ತು ಗೌರವ ನನ್ನ ಜೀವನದುದ್ದಕ್ಕೂ ಹೃದಯದಲ್ಲಿ ಉಳಿಯುತ್ತದೆ. ಈ ಮಹತ್ವದ ಅವಧಿಯಲ್ಲಿ ಭಾರತದ ಆರ್ಥಿಕ ಪ್ರಗತಿ ಮತ್ತು ಅಭೂತಪೂರ್ವ ಅಭಿವೃದ್ಧಿಯನ್ನು ವೀಕ್ಷಿಸಲು ಮತ್ತು ಭಾಗವಹಿಸಲು ಅದೃಷ್ಟ ಮತ್ತು ತೃಪ್ತಿಯ ವಿಷಯವಾಗಿದೆ ಎಂದು ಬರೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ