ಭವಿಷ್ಯದಲ್ಲಿ ನಾನು ದೊಡ್ಡ ಮಟ್ಟಕ್ಕೆ ಹೋಗಬೇಕು ಅಂತ ಕನಸ್ಸನ್ನು ಕಂಡಿದ್ದೇನೆ
ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ನಟನ ವಿಡಿಯೋ
ಕನ್ನಡದ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯ ಬದುಕು ಅಂತ್ಯ ಕಂಡಿದೆ. ನ್ಯಾಯಾಲಯಕ್ಕೆ ಮನವಿ ಮಾಡಿದ್ದ ಸ್ಟಾರ್ ಜೋಡಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ತೀರ್ಮಾನಿಸಿದ್ದರು. ಡಿವೋರ್ಸ್ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಖುದ್ದು ಚಂದನ್, ನಿವೇದಿತಾ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದರು. ಆ ಬೆನ್ನಲ್ಲೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದೂರ ದೂರ ಆಗಿದ್ದಾರೆ. ಇದೀಗ ದಿಢೀರ್ ಅಂತ ಇನ್ಸ್ಟಾಗ್ರಾಮ್ನಲ್ಲಿ ಗಾಯಕ, ನಟ ಚಂದನ್ ಶೆಟ್ಟಿ ಹೊಸ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ನಿವೇದಿತಾ ಡಿವೋರ್ಸ್ ಬೆನ್ನಲ್ಲೇ ಗುಡ್ನ್ಯೂಸ್ ಕೊಟ್ಟ ಚಂದನ್ ಶೆಟ್ಟಿ; ಏನದು?
ಹೌದು, ಗಾಯಕ, ನಟ ಚಂದನ್ ಶೆಟ್ಟಿ ಅವರು ಅರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ. ಹೀಗಾಗಿ ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬಂದು ನಮ್ಮ ಸಿನಿಮಾನ್ನು ನೋಡಿ ಹರಸಿ ಎಂದು ಅಭಿಮಾನಿಗಳಿಗೆ ಕೇಳಿಕೊಂಡಿದ್ದಾರೆ. ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾವನ್ನು ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿತ್ತು. ಇದೀಗ ಇದೇ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮನಸ್ವಿ, ಸಿಂಚನಾ ಮತ್ತು ಮನೋಜ್ ನಟಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ನಾಳೆ ಎಂದರೆ ಜುಲೈ 19ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತಂತೆ ಬಿಗ್ಬಾಸ್ ಕನ್ನಡ ಮಾಜಿ ವಿನ್ನರ್ ಚಂದನ್ ಶೆಟ್ಟಿ ಅವರು ಇನ್ಸ್ಟಾಗ್ರಾಮ್ ಲೈವ್ಗೆ ಬಂದು ಮಾತನಾಡಿದ್ದಾರೆ.
View this post on Instagram
ಆ ದೇವರು ನಮ್ಮ ಹತ್ತಿರದಿಂದ ಏನನ್ನೋ ಕಿತ್ತುಕೊಂಡಿದ್ದಾನೆ ಎಂದರೆ ಮುಂದೆ ಒಂದು ದೊಡ್ಡ ವರವನ್ನೇ ಕೊಡುತ್ತಾನೆ ಎಂದು ಹೇಳುತ್ತಾರೆ. ಈಗ ನನಗೆ ಕೊಡುವ ದೇವರುಗಳು ನೀವುಗಳು. ಇಷ್ಟು ವರ್ಷ ನೀವು ನನ್ನ ಕೈ ಬಿಟ್ಟಿಲ್ಲ. ಈಗಲೂ ಕೂಡ ನನ್ನ ಕೈ ಬಿಡೋದಿಲ್ಲ ಅಂತ ನಾನು ಬಲವಾಗಿ ನಂಬಿದ್ದೇನೆ. ನನ್ನ ಮೊದಲನೇ ಪ್ರಯತ್ನ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾದಲ್ಲಿ ನಟನಾಗಿ ಅಭಿನಯಿಸಿದ್ದೇನೆ. ಜುಲೈ 19ರಂದು ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ರಿಲೀಸ್ ಆಗುತ್ತಿದೆ. ದಯವಿಟ್ಟು ಮೊದಲ ದಿನವೇ ನನ್ನ ಸಿನಿಮಾವನ್ನು ಚಿತ್ರಮಂದಿರಕ್ಕೆ ಹೋಗಿ ನೋಡಿ. ನನಗೆ ದಯವಿಟ್ಟು ಸರ್ಪೋಟ್ ಮಾಡಿ. ಇಷ್ಟು ದಿನ ನಾನು ಸಾಕಷ್ಟು ಏಳು ಬಿಳುಗಳನ್ನು ಕಂಡಿದ್ದನ್ನು ನೀವು ನೋಡಿದ್ದೀರಾ. ಭವಿಷ್ಯದಲ್ಲಿ ನಾನು ದೊಡ್ಡ ಮಟ್ಟಕ್ಕೆ ಹೋಗಬೇಕು ಅಂತ ಕನಸ್ಸನ್ನು ಕಂಡಿದ್ದೇನೆ. ಹೀಗಾಗಿ ನೀವೆಲ್ಲಾ ನನಗೆ ದಯವಿಟ್ಟು ಸರ್ಪೋಟ್ ಮಾಡಬೇಕು.
‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾಗೆ ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ. ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಭವಿಷ್ಯದಲ್ಲಿ ನಾನು ದೊಡ್ಡ ಮಟ್ಟಕ್ಕೆ ಹೋಗಬೇಕು ಅಂತ ಕನಸ್ಸನ್ನು ಕಂಡಿದ್ದೇನೆ
ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ನಟನ ವಿಡಿಯೋ
ಕನ್ನಡದ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯ ಬದುಕು ಅಂತ್ಯ ಕಂಡಿದೆ. ನ್ಯಾಯಾಲಯಕ್ಕೆ ಮನವಿ ಮಾಡಿದ್ದ ಸ್ಟಾರ್ ಜೋಡಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ತೀರ್ಮಾನಿಸಿದ್ದರು. ಡಿವೋರ್ಸ್ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಖುದ್ದು ಚಂದನ್, ನಿವೇದಿತಾ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದರು. ಆ ಬೆನ್ನಲ್ಲೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದೂರ ದೂರ ಆಗಿದ್ದಾರೆ. ಇದೀಗ ದಿಢೀರ್ ಅಂತ ಇನ್ಸ್ಟಾಗ್ರಾಮ್ನಲ್ಲಿ ಗಾಯಕ, ನಟ ಚಂದನ್ ಶೆಟ್ಟಿ ಹೊಸ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ನಿವೇದಿತಾ ಡಿವೋರ್ಸ್ ಬೆನ್ನಲ್ಲೇ ಗುಡ್ನ್ಯೂಸ್ ಕೊಟ್ಟ ಚಂದನ್ ಶೆಟ್ಟಿ; ಏನದು?
ಹೌದು, ಗಾಯಕ, ನಟ ಚಂದನ್ ಶೆಟ್ಟಿ ಅವರು ಅರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ. ಹೀಗಾಗಿ ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬಂದು ನಮ್ಮ ಸಿನಿಮಾನ್ನು ನೋಡಿ ಹರಸಿ ಎಂದು ಅಭಿಮಾನಿಗಳಿಗೆ ಕೇಳಿಕೊಂಡಿದ್ದಾರೆ. ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾವನ್ನು ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿತ್ತು. ಇದೀಗ ಇದೇ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮನಸ್ವಿ, ಸಿಂಚನಾ ಮತ್ತು ಮನೋಜ್ ನಟಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ನಾಳೆ ಎಂದರೆ ಜುಲೈ 19ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತಂತೆ ಬಿಗ್ಬಾಸ್ ಕನ್ನಡ ಮಾಜಿ ವಿನ್ನರ್ ಚಂದನ್ ಶೆಟ್ಟಿ ಅವರು ಇನ್ಸ್ಟಾಗ್ರಾಮ್ ಲೈವ್ಗೆ ಬಂದು ಮಾತನಾಡಿದ್ದಾರೆ.
View this post on Instagram
ಆ ದೇವರು ನಮ್ಮ ಹತ್ತಿರದಿಂದ ಏನನ್ನೋ ಕಿತ್ತುಕೊಂಡಿದ್ದಾನೆ ಎಂದರೆ ಮುಂದೆ ಒಂದು ದೊಡ್ಡ ವರವನ್ನೇ ಕೊಡುತ್ತಾನೆ ಎಂದು ಹೇಳುತ್ತಾರೆ. ಈಗ ನನಗೆ ಕೊಡುವ ದೇವರುಗಳು ನೀವುಗಳು. ಇಷ್ಟು ವರ್ಷ ನೀವು ನನ್ನ ಕೈ ಬಿಟ್ಟಿಲ್ಲ. ಈಗಲೂ ಕೂಡ ನನ್ನ ಕೈ ಬಿಡೋದಿಲ್ಲ ಅಂತ ನಾನು ಬಲವಾಗಿ ನಂಬಿದ್ದೇನೆ. ನನ್ನ ಮೊದಲನೇ ಪ್ರಯತ್ನ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾದಲ್ಲಿ ನಟನಾಗಿ ಅಭಿನಯಿಸಿದ್ದೇನೆ. ಜುಲೈ 19ರಂದು ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ರಿಲೀಸ್ ಆಗುತ್ತಿದೆ. ದಯವಿಟ್ಟು ಮೊದಲ ದಿನವೇ ನನ್ನ ಸಿನಿಮಾವನ್ನು ಚಿತ್ರಮಂದಿರಕ್ಕೆ ಹೋಗಿ ನೋಡಿ. ನನಗೆ ದಯವಿಟ್ಟು ಸರ್ಪೋಟ್ ಮಾಡಿ. ಇಷ್ಟು ದಿನ ನಾನು ಸಾಕಷ್ಟು ಏಳು ಬಿಳುಗಳನ್ನು ಕಂಡಿದ್ದನ್ನು ನೀವು ನೋಡಿದ್ದೀರಾ. ಭವಿಷ್ಯದಲ್ಲಿ ನಾನು ದೊಡ್ಡ ಮಟ್ಟಕ್ಕೆ ಹೋಗಬೇಕು ಅಂತ ಕನಸ್ಸನ್ನು ಕಂಡಿದ್ದೇನೆ. ಹೀಗಾಗಿ ನೀವೆಲ್ಲಾ ನನಗೆ ದಯವಿಟ್ಟು ಸರ್ಪೋಟ್ ಮಾಡಬೇಕು.
‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾಗೆ ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ. ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ