ವಿಜಯ್ ರೂಪಾನಿ ದುರಂತ ಅಂತ್ಯ.. ಶೋಕದಲ್ಲಿ ಮುಳುಗಿದ ಗುಜರಾತ್..

author-image
Ganesh
Updated On
ವಿಜಯ್ ರೂಪಾನಿ ದುರಂತ ಅಂತ್ಯ.. ಶೋಕದಲ್ಲಿ ಮುಳುಗಿದ ಗುಜರಾತ್..
Advertisment
  • ಅಹ್ಮದಾಬಾದ್​ನಲ್ಲಿ ವಿಮಾನ ಘೋರ ದುರಂತ..
  • 242 ಪ್ರಯಾಣಿಕರಿದ್ದ ವಿಮಾನ ದಿಢೀರ್ ಪತನ
  • ಓರ್ವ ಪ್ರಯಾಣಿಕ ಬದುಕುಳಿದಿರುವ ಮಾಹಿತಿ

ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್​ನ ಮಾಜಿ ಸಿಎಂ ವಿಜಯ್ ರೂಪಾನಿ (Vijay Rupani ) ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 1.38ಕ್ಕೆ ಅಹ್ಮದಾಬಾದ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಲಂಡನ್​ಗೆ ಪ್ರಯಾಣ ಬೆಳೆಸಿದ್ದರು.

ಇದನ್ನೂ ಓದಿ: ಭಾರತವನ್ನ ಬೆಚ್ಚಿಬೀಳಿಸಿದ 10 ಘೋರ ವಿಮಾನ ದುರಂತಗಳು.. ಒಂದಕ್ಕಿಂತ ಒಂದು ಕರಾಳ ಅಪಘಾತಗಳು..

publive-image

ವಿಮಾನವು ಟೇಕ್-ಆಫ್ ಆದ ಕೆಲವೇ ಸೆಕೆಂಡ್​ಗಳಲ್ಲಿ ಪತನಗೊಂಡು ದುರಂತ ಸಂಭವಿಸಿದೆ. ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರಿದ್ದರು. ಏರ್​ ಇಂಡಿಯಾ-I71 ಈ ದುರ್ಘಟನೆಯಲ್ಲಿ ವಿಜಯ್ ರೂಪಾನಿ ಪ್ರಾಣ ಕಳೆದುಕೊಂಡಿರುವ ಬಗ್ಗೆ ಕೇಂದ್ರ ಸಚಿವ ಸಿ.ಆರ್.ಪಾಟೀಲ್ ದೃಢಪಡಿಸಿದ್ದಾರೆ. ದುರಂತದಲ್ಲಿ ನಿಧನರಾದ ಎರಡನೇ ಮುಖ್ಯಮಂತ್ರಿ ವಿಜಯ್ ರೂಪಾನಿ ಆಗಿದ್ದಾರೆ.
ವಿಜಯ್ ರೂಪಾನಿ ಅವರು 2016ರಲ್ಲಿ ಮೊದಲ ಬಾರಿಗೆ ಗುಜರಾತ್​ನ ಮುಖ್ಯಮಂತ್ರಿಯಾದರು. ಅಂದಿನ ಸಿಎಂ ಆನಂದಿಬೇನ್ ಪಟೇಲ್ ಅವರ ದಿಢೀರ್ ರಾಜೀನಾಮೆ ಬೆನ್ನಲ್ಲೇ, ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸಿದ್ದರು. 2021ರಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದರು.

ಇದನ್ನೂ ಓದಿ: ಇದೇ ವಿಮಾನ ನಿಲ್ದಾಣದಲ್ಲಿ ನಡೆದಿತ್ತು ಘನ ಘೋರ ದುರಂತ.. 37 ವರ್ಷಗಳ ಬಳಿಕ ಮತ್ತೊಂದು ಅಪಘಾತ..

ರಾಜ್​ಕೋಟ್​ನ​ ಪಶ್ಚಿಮ ವಿಧಾನಸಭಾ ಕ್ಷೇತ್ರವನ್ನು ರೂಪಾನಿ ಪ್ರತಿನಿಧಿಸುತ್ತಿದ್ದರು. ಇವರು ಗುಜರಾತ್ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ, ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ರೂಪಾನಿ ಅವರು ಆರ್​ಎಸ್​ಎಸ್​ ಸಕ್ರಿಯ ಕಾರ್ಯಕರ್ತರಾಗುವ ಮೂಲಕ ಸಾರ್ವಜನಿಕ ಬದುಕಿಗೆ ಧುಮುಕಿದರು. ಆರಂಭದ ದಿನಗಳಲ್ಲಿ ಎಬಿವಿಪಿಯಲ್ಲೂ ಗುರುತಿಸಿಕೊಂಡಿದ್ದರು. 1980ರಿಂದ ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ತುರ್ತು ಪರಿಸ್ಥಿತಿ ವೇಳೆ ಆರ್​ಎಸ್​ಎಸ್​ ಪ್ರಚಾರಕರಾಗಿದ್ದ ರೂಪಾನಿ, ಜೈಲು ಶಿಕ್ಷೆ ಕೂಡ ಅನುಭವಿಸಿದ್ದರು. ಮಾತ್ರವಲ್ಲ 2006 ರಿಂದ 2012ವರೆಗೆ ರಾಜ್ಯಸಭೆ ಮೇಂಬರ್ ಆಗಿಯೂ ಕರ್ತವ್ಯ ನಿಭಾಯಿಸಿದ್ದರು.

ಇದನ್ನೂ ಓದಿ: ವಿಮಾನ ದುರಂತದಲ್ಲಿ ಒಂದು ಪಾವಡ.. ಓರ್ವ ಬದುಕಿರುವ ಬಗ್ಗೆ ಕಮಿಷನರ್ ಮಾಹಿತಿ..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment