/newsfirstlive-kannada/media/post_attachments/wp-content/uploads/2025/07/ramya4.jpg)
ರೇಣುಕಾಸ್ವಾಮಿ ಪ್ರಕರಣದಲ್ಲಿ ರಮ್ಯಾ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ವಾರ್​ಗೆ ವಿಜಯಲಕ್ಷ್ಮೀ ಅವರು ಎಂಟ್ರಿ ಕೊಟ್ಟಿದ್ದಾರೆ. ನಟಿ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ರೇಣುಕಾಸ್ವಾಮಿ ಪ್ರಕರಣದ ಆರೋಪಿ, ನಟ ದರ್ಶನ್ ಅಭಿಮಾನಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಇದನ್ನೂ ಓದಿ: ರಮ್ಯಾ ಪರ ಒಳ್ಳೆ ಹುಡುಗ ಬ್ಯಾಟ್; ದರ್ಶನ್ ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು..?
ಅಲ್ಲದೇ ದರ್ಶನ್​ ಅಭಿಮಾನಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ರಮ್ಯಾ ಮುಂದಾಗಿರೋ ಹೊತ್ತಲ್ಲೇ, ಈ ಕೇಸ್ಗೆ ನಟ ದರ್ಶನ್​ ಪತ್ನಿ ವಿಜಯಲಕ್ಷ್ಮೀ ಟ್ವಿಸ್ಟ್​ ಕೊಟ್ಟಿದ್ದಾರೆ. ದರ್ಶನ್​ ಪತ್ನಿ ವಿಜಯಲಕ್ಷ್ಮೀ ಅವರು ಇನ್​ಸ್ಟಾ ಸ್ಟೋರಿಯಲ್ಲಿ ಮಾರ್ಮಿಕವಾದ ಪೋಸ್ಟ್​ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೋಸ್ಟ್​ನಲ್ಲಿ ಏನಿದೆ?
ಬುದ್ಧನ ಫೋಟೋ ಕೆಳಗಡೆ ಇಂಗ್ಲಿಷ್​ನಲ್ಲಿ "A fool is known by his speech; and a wise man by silence ಎಂದು ಬರೆಯಲಾಗಿದೆ. ಅಂದರೆ ಕನ್ನಡದಲ್ಲಿ ಇದರರ್ಥ, ಮೂರ್ಖರನ್ನ ಅವರ ಮಾತಿನಿಂದ ಗುರ್ತಿಸಬಹುದು; ಬುದ್ದಿವಂತನನ್ನ ಮೌನದಿಂದ ಗುರುತಿಸಬಹುದು" ಎಂದಿರೋ ಪೋಸ್ಟ್​ ಶೇರ್ ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ