newsfirstkannada.com

ಚಲಿಸುತ್ತಿದ್ದ ಖಾಸಗಿ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ.. 30 ಜನರ ಪ್ರಾಣ ಉಳಿಸಿದ ಚಾಲಕ

Share :

11-09-2023

    ಇಂದು ಬೆಳಗಿನ ಜಾವ ಖಾಸಗಿ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ

    ಬೆಂಗಳೂರಿನಿಂದ ಹಟ್ಟಿ ಚಿನ್ನದ ಗಣಿ ಕಡೆಗೆ ಸಂಚರಿಸುವ ವೇಳೆ ಅವಘಡ

    ಬೆಂಕಿ ಕಂಡಾಗ ಕಾನಾಹೊಸಹಳ್ಳಿ ಬಳಿ NH-50 ರಸ್ತೆಯಲ್ಲಿ ಬಸ್​ ನಿಲ್ಲಿಸಿದ ಸವಾರ

ವಿಜಯನಗರ: ಖಾಸಗಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಬಳಿ NH -50 ರಸ್ತೆಯಲ್ಲಿ ನಡೆದಿದೆ. ಬಸ್ ಟೈರ್ ಸಿಡಿದು ಬೆಂಕಿ ಆವರಿಸಿದೆ.

ಇಂದು ಬೆಳಗಿನ ಜಾವ ಬೆಂಗಳೂರಿನಿಂದ ಹಟ್ಟಿ ಚಿನ್ನದ ಗಣಿ ಕಡೆಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ 30 ಜನರನ್ನು ಸಾಗಿಸುತ್ತಿದ್ದ ಬಸ್​​ ಟೈರ್​ ಬ್ಲಾಸ್ಟ್​ ಆಗಿದೆ. ಬ್ಲಾಸ್ಟ್​ ಆಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ಬಸ್​ ನಿಲ್ಲಿಸಿದ್ದಾನೆ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ.

ಚಾಲಕನ ಸಮಯಪ್ರಜ್ಞೆಗೆ 30 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಕಾನಾಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಲಿಸುತ್ತಿದ್ದ ಖಾಸಗಿ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ.. 30 ಜನರ ಪ್ರಾಣ ಉಳಿಸಿದ ಚಾಲಕ

https://newsfirstlive.com/wp-content/uploads/2023/09/Bus-Fire.jpg

    ಇಂದು ಬೆಳಗಿನ ಜಾವ ಖಾಸಗಿ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ

    ಬೆಂಗಳೂರಿನಿಂದ ಹಟ್ಟಿ ಚಿನ್ನದ ಗಣಿ ಕಡೆಗೆ ಸಂಚರಿಸುವ ವೇಳೆ ಅವಘಡ

    ಬೆಂಕಿ ಕಂಡಾಗ ಕಾನಾಹೊಸಹಳ್ಳಿ ಬಳಿ NH-50 ರಸ್ತೆಯಲ್ಲಿ ಬಸ್​ ನಿಲ್ಲಿಸಿದ ಸವಾರ

ವಿಜಯನಗರ: ಖಾಸಗಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಬಳಿ NH -50 ರಸ್ತೆಯಲ್ಲಿ ನಡೆದಿದೆ. ಬಸ್ ಟೈರ್ ಸಿಡಿದು ಬೆಂಕಿ ಆವರಿಸಿದೆ.

ಇಂದು ಬೆಳಗಿನ ಜಾವ ಬೆಂಗಳೂರಿನಿಂದ ಹಟ್ಟಿ ಚಿನ್ನದ ಗಣಿ ಕಡೆಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ 30 ಜನರನ್ನು ಸಾಗಿಸುತ್ತಿದ್ದ ಬಸ್​​ ಟೈರ್​ ಬ್ಲಾಸ್ಟ್​ ಆಗಿದೆ. ಬ್ಲಾಸ್ಟ್​ ಆಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ಬಸ್​ ನಿಲ್ಲಿಸಿದ್ದಾನೆ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ.

ಚಾಲಕನ ಸಮಯಪ್ರಜ್ಞೆಗೆ 30 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಕಾನಾಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More