ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು
ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡಿ ಓಡಿದ್ದು ಯಾಕೆ?
ಸ್ಥಳೀಯರು, ಕುಟುಂಬಸ್ಥರು ರಸ್ತೆ ಬಂದ್ ಮಾಡಿ ಪ್ರತಿಭಟನೆ
ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಯುವಕನೊರ್ವನ ಮೇಲೆ ಪೊಲೀಸರು ಹಲ್ಲೆ ಮಾಡಿದ ಪರಿಣಾಮ ಯುವಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಗೋಳಗುಮ್ಮಟ ಎದುರು ಈ ಘಟನೆ ನಡೆದಿದೆ.
ಇದನ್ನೂ ಓದಿ: ಕಮಲ್ ಹಾಸನ್ ಸಹೋದರ, ನಟಿ ಸುಹಾಸಿನಿ ತಂದೆ ಆಸ್ಪತ್ರೆಗೆ ದಾಖಲು.. ಚಾರುಹಾಸನ್ಗೆ ಏನಾಯಿತು..?
ಯುವಕ ಸಂತೋಷ್ ಗುಣಸಿ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋಳಗುಮ್ಮಟ ಎದುರು ಇಬ್ಬರು ಯುವಕರ ಮಧ್ಯೆ ವಾಗ್ವಾದ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ಆಗಮಿಸಿದ ಪೊಲೀಸರು ಯುವಕರ ಮೇಲೆ ಹಲ್ಲೆ ಮಾಡಿ ಸ್ಥಳದಿಂದ ಹೋಗಿದ್ದಾರೆ. ಆದರೆ ಘಟನೆಯಲ್ಲಿ ಸಂತೋಷ್ ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಿತಿ ಗಂಭೀರವಾಗಿದ್ದು ಸಂತೋಷ್ನನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ: ₹1200 ಕೋಟಿ ವೆಚ್ಚದ ಸಂಸತ್ ಭವನ ಸೋರಿಕೆ.. ₹120 ಬಕೆಟ್ ಮೇಲೆ ಅವಲಂಬಿತ ಆಯ್ತಾವೆಂದು ವ್ಯಂಗ್ಯ
ಸದ್ಯ ಈ ಸಂಬಂಧ ಸ್ಥಳೀಯರು, ಕುಟುಂಬಸ್ಥರು ರಸ್ತೆ ಬಂದ್ ಮಾಡಿ ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೂರಾರು ಯುವಕರು ಟೈರ್ಗೆ ಬೆಂಕಿ ಹಚ್ಚಿ ನ್ಯಾಯ ಕೇಳುತ್ತಿದ್ದಾರೆ. ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿರುವ ಸ್ಥಳೀಯರು ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು
ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡಿ ಓಡಿದ್ದು ಯಾಕೆ?
ಸ್ಥಳೀಯರು, ಕುಟುಂಬಸ್ಥರು ರಸ್ತೆ ಬಂದ್ ಮಾಡಿ ಪ್ರತಿಭಟನೆ
ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಯುವಕನೊರ್ವನ ಮೇಲೆ ಪೊಲೀಸರು ಹಲ್ಲೆ ಮಾಡಿದ ಪರಿಣಾಮ ಯುವಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಗೋಳಗುಮ್ಮಟ ಎದುರು ಈ ಘಟನೆ ನಡೆದಿದೆ.
ಇದನ್ನೂ ಓದಿ: ಕಮಲ್ ಹಾಸನ್ ಸಹೋದರ, ನಟಿ ಸುಹಾಸಿನಿ ತಂದೆ ಆಸ್ಪತ್ರೆಗೆ ದಾಖಲು.. ಚಾರುಹಾಸನ್ಗೆ ಏನಾಯಿತು..?
ಯುವಕ ಸಂತೋಷ್ ಗುಣಸಿ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋಳಗುಮ್ಮಟ ಎದುರು ಇಬ್ಬರು ಯುವಕರ ಮಧ್ಯೆ ವಾಗ್ವಾದ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ಆಗಮಿಸಿದ ಪೊಲೀಸರು ಯುವಕರ ಮೇಲೆ ಹಲ್ಲೆ ಮಾಡಿ ಸ್ಥಳದಿಂದ ಹೋಗಿದ್ದಾರೆ. ಆದರೆ ಘಟನೆಯಲ್ಲಿ ಸಂತೋಷ್ ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಿತಿ ಗಂಭೀರವಾಗಿದ್ದು ಸಂತೋಷ್ನನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ: ₹1200 ಕೋಟಿ ವೆಚ್ಚದ ಸಂಸತ್ ಭವನ ಸೋರಿಕೆ.. ₹120 ಬಕೆಟ್ ಮೇಲೆ ಅವಲಂಬಿತ ಆಯ್ತಾವೆಂದು ವ್ಯಂಗ್ಯ
ಸದ್ಯ ಈ ಸಂಬಂಧ ಸ್ಥಳೀಯರು, ಕುಟುಂಬಸ್ಥರು ರಸ್ತೆ ಬಂದ್ ಮಾಡಿ ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೂರಾರು ಯುವಕರು ಟೈರ್ಗೆ ಬೆಂಕಿ ಹಚ್ಚಿ ನ್ಯಾಯ ಕೇಳುತ್ತಿದ್ದಾರೆ. ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿರುವ ಸ್ಥಳೀಯರು ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ