ಸಾಲು ಸಾಲು ಶೂಟಿಂಗ್ಗಳು ಕೈಯಲ್ಲಿರುವಾಗಲೇ ನಟನಿಗೆ ಗಾಯ
ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ಪೃಥ್ವಿರಾಜ್
ಆ್ಯಕ್ಷನ್ ಸೀನ್ ಶೂಟಿಂಗ್ ನಡೆಯುವಾಗ ಬಸ್ನಿಂದ ಜಾರಿ ಬಿದ್ದ ನಟ
ಕೊಚ್ಚಿ: ಮಾಲಿವುಡ್ ಸ್ಟಾರ್ ಹಾಗೂ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ನಲ್ಲಿ ಅಭಿನಯಿಸುತ್ತಿರುವ ಪೃಥ್ವಿರಾಜ್ ಸುಕುಮಾರನ್ ಕಾಲಿಗೆ ತೀವ್ರವಾದ ಪೆಟ್ಟು ಮಾಡಿಕೊಂಡಿದ್ದಾರೆ. ಪೃಥ್ವಿರಾಜ್ ಖಾಸಗಿ ಆಸ್ಪತ್ರೆಗೆ ದಾಖಲೆಯಾಗಿದ್ದು ನಟನಿಗೆ ಸರ್ಜರಿ ಮಾಡಬೇಕೆಂದು ವೈದ್ಯರು ತಿಳಿಸಿದ್ದಾರೆ.
ಮಲಯಾಳಂ ಭಾಷೆಯ ‘ವಿಳಯಾಟ್ಟು ಬುದ್ಧ’ ಸಿನಿಮಾದ ಶೂಟಿಂಗ್ ಮಾಡುತ್ತಿದ್ದರು. ಕೇರಳದ ಮರಯೂರು ಬಸ್ ನಿಲ್ದಾಣದಲ್ಲಿ ಆರ್ಟಿಸಿ ಬಸ್ ಒಳಗೆ ಆ್ಯಕ್ಷನ್ ಸ್ವೀಕ್ವೆನ್ಸ್ ಮಾಡುವಾಗ ನಟ ಪೃಥ್ವಿರಾಜ್ ಬಸ್ನಿಂದ ಜಾರಿ ಬಿದ್ದಿದ್ದಾರೆ. ತಕ್ಷಣ ನಟನನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ವೈದ್ಯರು ಚಿಕಿತ್ಸೆ ನೀಡಿ ಸರ್ಜರಿ ಮಾಡಿಕೊಂಡು 2-3 ವಾರಗಳು ಬೆಡ್ ರೆಸ್ಟ್ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಸಾಲು ಸಾಲು ಸಿನಿಮಾಗಳ ಶೂಟಿಂಗ್ ಕೈಯಲ್ಲಿರುವಾಗಲೇ ನಟನಿಗೆ ಈ ರೀತಿ ಆಗಿರುವುದು ಭಾರೀ ನಿರಾಸೆ ಮೂಡಿಸಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಚಿತ್ರದಲ್ಲೂ ಪೃಥ್ವಿರಾಜ್ ಅಭಿನಯ ಮಾಡಿದ್ದಾರೆ. ಈಗಾಗಲೇ ಪೃಥ್ವಿರಾಜ್ ಸಲಾರ್ ಸಿನಿಮಾದಲ್ಲಿ ತಮ್ಮ ಶೂಟಿಂಗ್ ಅನ್ನು ಪೂರ್ಣಗೊಳಿಸಿದ್ದಾರೆ. ಇನ್ನು ಸಲಾರ್ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಡಾರ್ಲಿಂಗ್ ಪ್ರಭಾಸ್ ನಟನೆ ಮಾಡುತ್ತಿದ್ದಾರೆ. ಕನ್ನಡದ ಖ್ಯಾತ ನಿರ್ದೇಶಕ ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ
ಸಾಲು ಸಾಲು ಶೂಟಿಂಗ್ಗಳು ಕೈಯಲ್ಲಿರುವಾಗಲೇ ನಟನಿಗೆ ಗಾಯ
ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ಪೃಥ್ವಿರಾಜ್
ಆ್ಯಕ್ಷನ್ ಸೀನ್ ಶೂಟಿಂಗ್ ನಡೆಯುವಾಗ ಬಸ್ನಿಂದ ಜಾರಿ ಬಿದ್ದ ನಟ
ಕೊಚ್ಚಿ: ಮಾಲಿವುಡ್ ಸ್ಟಾರ್ ಹಾಗೂ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ನಲ್ಲಿ ಅಭಿನಯಿಸುತ್ತಿರುವ ಪೃಥ್ವಿರಾಜ್ ಸುಕುಮಾರನ್ ಕಾಲಿಗೆ ತೀವ್ರವಾದ ಪೆಟ್ಟು ಮಾಡಿಕೊಂಡಿದ್ದಾರೆ. ಪೃಥ್ವಿರಾಜ್ ಖಾಸಗಿ ಆಸ್ಪತ್ರೆಗೆ ದಾಖಲೆಯಾಗಿದ್ದು ನಟನಿಗೆ ಸರ್ಜರಿ ಮಾಡಬೇಕೆಂದು ವೈದ್ಯರು ತಿಳಿಸಿದ್ದಾರೆ.
ಮಲಯಾಳಂ ಭಾಷೆಯ ‘ವಿಳಯಾಟ್ಟು ಬುದ್ಧ’ ಸಿನಿಮಾದ ಶೂಟಿಂಗ್ ಮಾಡುತ್ತಿದ್ದರು. ಕೇರಳದ ಮರಯೂರು ಬಸ್ ನಿಲ್ದಾಣದಲ್ಲಿ ಆರ್ಟಿಸಿ ಬಸ್ ಒಳಗೆ ಆ್ಯಕ್ಷನ್ ಸ್ವೀಕ್ವೆನ್ಸ್ ಮಾಡುವಾಗ ನಟ ಪೃಥ್ವಿರಾಜ್ ಬಸ್ನಿಂದ ಜಾರಿ ಬಿದ್ದಿದ್ದಾರೆ. ತಕ್ಷಣ ನಟನನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ವೈದ್ಯರು ಚಿಕಿತ್ಸೆ ನೀಡಿ ಸರ್ಜರಿ ಮಾಡಿಕೊಂಡು 2-3 ವಾರಗಳು ಬೆಡ್ ರೆಸ್ಟ್ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಸಾಲು ಸಾಲು ಸಿನಿಮಾಗಳ ಶೂಟಿಂಗ್ ಕೈಯಲ್ಲಿರುವಾಗಲೇ ನಟನಿಗೆ ಈ ರೀತಿ ಆಗಿರುವುದು ಭಾರೀ ನಿರಾಸೆ ಮೂಡಿಸಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಚಿತ್ರದಲ್ಲೂ ಪೃಥ್ವಿರಾಜ್ ಅಭಿನಯ ಮಾಡಿದ್ದಾರೆ. ಈಗಾಗಲೇ ಪೃಥ್ವಿರಾಜ್ ಸಲಾರ್ ಸಿನಿಮಾದಲ್ಲಿ ತಮ್ಮ ಶೂಟಿಂಗ್ ಅನ್ನು ಪೂರ್ಣಗೊಳಿಸಿದ್ದಾರೆ. ಇನ್ನು ಸಲಾರ್ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಡಾರ್ಲಿಂಗ್ ಪ್ರಭಾಸ್ ನಟನೆ ಮಾಡುತ್ತಿದ್ದಾರೆ. ಕನ್ನಡದ ಖ್ಯಾತ ನಿರ್ದೇಶಕ ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ