ರಮ್ಯಾ ಪರ ನಿಂತ ದೊಡ್ಮನೆ ಕುಡಿ.. ವಿನಯ್ ರಾಜ್​ಕುಮಾರ್​ ಹೇಳಿದ್ದೇನು?

author-image
Bheemappa
Updated On
ರಮ್ಯಾ ಪರ ನಿಂತ ದೊಡ್ಮನೆ ಕುಡಿ.. ವಿನಯ್ ರಾಜ್​ಕುಮಾರ್​ ಹೇಳಿದ್ದೇನು?
Advertisment
  • ರಮ್ಯಾ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದ ಫ್ಯಾನ್ಸ್​
  • ನಟ ವಿನಯ್ ರಾಜ್​ಕುಮಾರ್ ಅವರು ಏನ್ ಹೇಳಿದ್ದಾರೆ?
  • ದರ್ಶನ್ ಅಭಿಮಾನಿಗಳಿಂದ ರಮ್ಯಾಗೆ ಕೆಟ್ಟದಾಗಿ ಕಮೆಂಟ್

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ರಮ್ಯಾ ಅವರು ನಟ ದರ್ಶನ್ ಕೇಸಿನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದಕ್ಕೆ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್​ ಮಾಡಿದ್ದರು. ಈ ಸಂಬಂಧ ರಮ್ಯಾ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ರಮ್ಯಾ ಪರವಾಗಿ ನಟ ವಿನಯ್ ರಾಜ್ ಕುಮಾರ್ ಬ್ಯಾಟ್ ಬೀಸಿದ್ದಾರೆ.

ರಮ್ಯಾ ಅವರಿಗೆ ಕೆಟ್ಟದಾಗಿ ನಿಂದಿಸುತ್ತಿರುವ ಸಂಬಂಧ ಮಹಿಳಾ ಆಯೋಗ ಸುಮೊಟೋ ಕೇಸ್​ ದಾಖಲಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಸುಮೋಟೋ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಮಾನ ಹಾನಿ ಆಗುವಂತಹ ಅವಾಚ್ಯ ಶಬ್ದ ಪ್ರಯೋಗ ಮಾಡಲಾಗಿದೆ. ಹೇಗೆ ಬೇಕೋ ಹಾಗೆ ಕಾಮೆಂಟ್ ಮಾಡೋದನ್ನು ನಿಲ್ಲಿಸಬೇಕು ಎಂದಿದ್ದರು.

ಇದನ್ನೂ ಓದಿ:TCS ಕಂಪನಿಯಿಂದ 12 ಸಾವಿರ ಉದ್ಯೋಗಿಗಳಿಗೆ ಗೇಟ್​ ಪಾಸ್​​.. ಕೆಲಸದಿಂದ ತೆಗೆಯಲು ಕಾರಣ ಏನು ಗೊತ್ತಾ?

publive-image

ಈ ಎಲ್ಲದರ ಬೆನ್ನಲ್ಲೇ ರಮ್ಯಾ ಪರವಾಗಿ ನಟ ವಿನಯ್ ರಾಜ್ ಕುಮಾರ್ ಇನ್​ಸ್ಟಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇನ್​ಸ್ಟಾ ಪೋಸ್ಟ್​ನಲ್ಲಿ ರಮ್ಯಾ ಅವರ ಹೆಸರು ಉಲ್ಲೇಖ ಮಾಡದೇ ಮಹಿಳೆಯರನ್ನ ಕೀಳಾಗಿ ಕಾಣುವವರನ್ನ ಮೊದಲೇ ನಾಶ ಮಾಡಬೇಕು ಎಂದಿದ್ದಾರೆ. ವಿನಯ್ ರಾಜ್​ಕುಮಾರ್ ಹಾಕಿದ ಪೋಸ್ಟ್ ಈ ರೀತಿ ಇದೆ. ಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ. ಹೆಣ್ಮಕ್ಕಳನ್ನ ಕೀಳಾಗಿ ಕಾಣೋ ಪ್ರಪಂಚ ಬೆಳವಣಿಗೆಗೂ ಮೊದಲೇ ನಾಶವಾಗಬೇಕು ಎಂದು ಬರೆದುಕೊಂಡಿದ್ದಾರೆ.

ದರ್ಶನ್‌ ಫ್ಯಾನ್ಸ್ ವಿರುದ್ಧ ಮತ್ತೆ ಸಿಡಿದೆದ್ದ ರಮ್ಯಾ ನ್ಯೂಸ್​ಫಸ್ಟ್​ ಜೊತೆ ಮಾತನಾಡಿದ್ದರು. ಈ ವೇಳೆ ದರ್ಶನ್‌ ಫ್ಯಾನ್ಸ್‌ನ ರೇಣುಕಾಸ್ವಾಮಿಗೆ ಹೋಲಿಸಿದ್ದರು. ಅವರ ಫ್ಯಾನ್ಸ್‌ ಮೆಸೇಜ್‌ಗೂ, ರೇಣುಕಾಸ್ವಾಮಿ ಮೆಸೇಜ್‌ಗೂ ವ್ಯತ್ಯಾಸವಿಲ್ಲ. ಇಂಥವರಿಂದಲೇ ಸಮಾಜ ಹಾಳಾಗುತ್ತಿದೆ. ಹೆಣ್ಮಕ್ಕಳಿಗೆ ಈ ರೀತಿ ಮೆಸೇಜ್ ಮಾಡೋರಿಗೆ ಸೌಜನ್ಯ ಕೇಸ್​ನಲ್ಲಿ ನ್ಯಾಯ ಬೇಕು ಅಂತಾರೆ ಎಂಥಾ ಜೋಕ್ ನೋಡ್ರಿ. ಇಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವೇ ಇಲ್ಲ ಎಂದು ಹೇಳಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment