/newsfirstlive-kannada/media/post_attachments/wp-content/uploads/2025/06/rcb-fan-death2.jpg)
‘ಕೊನೆಗೂ ಈ ಸಲ ಕಪ್ ನಮ್ದೇ ಆಗಿದೆ’.. ಐಪಿಎಲ್ ಟ್ರೋಫಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುತ್ತಿಡುತ್ತಿದ್ದಂತೆಯೇ ಅಭಿಮಾನಿಗಳ ಸಂಭ್ರಮ ಸಖತ್ ಜೋರಾಗಿದೆ. ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕದ ಹಲವೆಡೆ ಪಟಾಕಿ ಸಿಡಿಸಿ ಸಂಭ್ರಮಿಸಲಾಗ್ತಿದೆ.
ಇದನ್ನೂ ಓದಿ:ಆರ್ಸಿಬಿ ಭಲೇ.. ಭೇಷ್..! ತಮಿಳುನಾಡು ಸಿಎಂ MK ಸ್ಟಾಲಿನ್ ಬೆಂಗಳೂರು ತಂಡಕ್ಕೆ, ಕೊಹ್ಲಿ ಬಗ್ಗೆ ಏನಂದ್ರು?
ಆದ್ರೆ ಸಂಭ್ರಮಾಚರಣೆಯ ಖುಷಿಯಲ್ಲಿದ್ದ ಅಭಿಮಾನಿಯೊಬ್ಬ ಜೀವ ಬಿಟ್ಟಿದ್ದಾನೆ. ಹೌದು, ಆರ್ಸಿಬಿ ಕಪ್ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡುತ್ತಿದ್ದರು. ಇದೇ ವೇಳೆ ಆರ್ಸಿಬಿ ಅಭಿಮಾನಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ನಿವಾಸಿ ಮಂಜುನಾಥ ಕುಂಬಾರ (25) ಜೀವ ಬಿಟ್ಟಿದ್ದಾರೆ. ಆರ್ಸಿಬಿ ಫೈನಲ್ ಮ್ಯಾಚ್ ಗೆದ್ದಿದ್ದಕ್ಕೆ ಗ್ರಾಮದಲ್ಲಿ ಸಂಭ್ರಮಾಚರಣೆ ನಡೆಯುತ್ತಿತ್ತು. ಆದ್ರೆ ಇದೇ ವೆಳೆ ಮಂಜುನಾಥ ಕುಣಿದು ಕುಪ್ಪಳಿಸುತ್ತಿದ್ದಾಗ ಹೃದಯಾಘಾತದಿಂದ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಇನ್ನೂ, ಮೃತ ಮಂಜುನಾಥ ಕುಂಬಾರ ಅವರ ಅಂತ್ಯಕ್ರಿಯೆ ಅವರಾದಿ ಗ್ರಾಮದಲ್ಲಿ ಮಧ್ಯಾಹ್ನ 12ಕ್ಕೆ ನಡೆಯಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ