ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ಖಡಕ್ ಎಚ್ಚರಿಕೆ
ದೇಶೀಯ ಕ್ರಿಕೆಟ್ ಆಡುವಂತೆ ವಾರ್ನಿಂಗ್ ಕೊಟ್ಟ ಬಿಸಿಸಿಐ..!
ಬಿಸಿಸಿಐ ವಾರ್ನಿಂಗ್ ಬೆನ್ನಲ್ಲೇ ಎಚ್ಚೆತ್ತ ಕ್ರಿಕೆಟರ್ ವಿರಾಟ್ ಕೊಹ್ಲಿ
ಇತ್ತೀಚೆಗಷ್ಟೇ ಭಾರತ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದೆ. ಶ್ರೀಲಂಕಾ ಪ್ರವಾಸ ಮುಗಿಯುತ್ತಿದ್ದಂತೆ ಟೀಮ್ ಇಂಡಿಯಾ ಆಟಗಾರರಿಗೆ ಐದು ವಾರಗಳ ವಿಶ್ರಾಂತಿ ನೀಡಲಾಗಿದೆ. ಈ ಸಂದರ್ಭವನ್ನು ಸದುಪಯೋಗ ಮಾಡಿಕೊಳ್ಳಲು ಟೀಮ್ ಇಂಡಿಯಾ ಆಟಗಾರರು ತಮ್ಮದೇ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅದರಲ್ಲೂ ಕೆಲವರು ಸ್ಟಾರ್ ಆಟಗಾರರು ದೇಶೀಯ ಕ್ರಿಕೆಟ್ ಆಡಲು ಮುಂದಾಗಿರುವುದು ವಿಶೇಷ.
ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿ ಮಾಡಿರೋ ಪ್ರಕಾರ ಟೀಮ್ ಇಂಡಿಯಾ ಆಟಗಾರರು ವಿಶ್ರಾಂತಿ ಅವಧಿಯನ್ನು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸ್ಟಾರ್ ಆಟಗಾರರೇ ದೇಶೀಯ ಟೂರ್ನಿಯಲ್ಲಿ ಭಾಗವಹಿಸಲು ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆಪ್ಟಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಪಂದ್ಯಾವಳಿ ಆರಂಭವಾಗಲಿದೆ. ಇದಕ್ಕೂ ಮುನ್ನ ದುಲೀಪ್ ಟ್ರೋಫಿ ನಡೆಯಲಿದೆ.
ದುಲೀಪ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ
ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ದುಲೀಪ್ ಟ್ರೋಫಿ ಆಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಇವರು ಯಾವಾಗ ಮೈದಾನ ಪ್ರವೇಶಿಸುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ.
ಬಿಸಿಸಿಐನಿಂದಲೂ ಖಡಕ್ ವಾರ್ನಿಂಗ್
ದುಲೀಪ್ ಟ್ರೋಫಿಗೆ ಎಲ್ಲಾ ಆಟಗಾರರು ಲಭ್ಯ ಇರಬೇಕು ಎಂದು ಬಿಸಿಸಿಐ ಈಗಾಗಲೇ ಖಡಕ್ ವಾರ್ನಿಂಗ್ ನೀಡಿದೆ. ಸದ್ಯದಲ್ಲೇ ಭಾರತ ಎ, ಇಂಡಿಯಾ ಬಿ, ಇಂಡಿಯಾ ಸಿ ಮತ್ತು ಇಂಡಿಯಾ ಡಿ ತಂಡಗಳನ್ನು ರಚಿಸಲಿದ್ದು, ಎಲ್ಲರೂ ಟೂರ್ನಿಯಲ್ಲಿ ಭಾಗಿಯಾಗಬೇಕು ಎಂದು ಸೂಚನೆ ಕೊಡಲಾಗಿದೆ. ಇದರಿಂದ ಎಚ್ಚೆತ್ತ ವಿರಾಟ್ ಕೊಹ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಕ್ಯಾಪ್ಟನ್ಸಿಯಿಂದ ಸ್ಟಾರ್ ಆಟಗಾರ ಔಟ್; ಸೂರ್ಯಕುಮಾರ್ ಯಾದವ್ಗೆ ಡಬಲ್ ಧಮಾಕ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ಖಡಕ್ ಎಚ್ಚರಿಕೆ
ದೇಶೀಯ ಕ್ರಿಕೆಟ್ ಆಡುವಂತೆ ವಾರ್ನಿಂಗ್ ಕೊಟ್ಟ ಬಿಸಿಸಿಐ..!
ಬಿಸಿಸಿಐ ವಾರ್ನಿಂಗ್ ಬೆನ್ನಲ್ಲೇ ಎಚ್ಚೆತ್ತ ಕ್ರಿಕೆಟರ್ ವಿರಾಟ್ ಕೊಹ್ಲಿ
ಇತ್ತೀಚೆಗಷ್ಟೇ ಭಾರತ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದೆ. ಶ್ರೀಲಂಕಾ ಪ್ರವಾಸ ಮುಗಿಯುತ್ತಿದ್ದಂತೆ ಟೀಮ್ ಇಂಡಿಯಾ ಆಟಗಾರರಿಗೆ ಐದು ವಾರಗಳ ವಿಶ್ರಾಂತಿ ನೀಡಲಾಗಿದೆ. ಈ ಸಂದರ್ಭವನ್ನು ಸದುಪಯೋಗ ಮಾಡಿಕೊಳ್ಳಲು ಟೀಮ್ ಇಂಡಿಯಾ ಆಟಗಾರರು ತಮ್ಮದೇ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅದರಲ್ಲೂ ಕೆಲವರು ಸ್ಟಾರ್ ಆಟಗಾರರು ದೇಶೀಯ ಕ್ರಿಕೆಟ್ ಆಡಲು ಮುಂದಾಗಿರುವುದು ವಿಶೇಷ.
ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿ ಮಾಡಿರೋ ಪ್ರಕಾರ ಟೀಮ್ ಇಂಡಿಯಾ ಆಟಗಾರರು ವಿಶ್ರಾಂತಿ ಅವಧಿಯನ್ನು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸ್ಟಾರ್ ಆಟಗಾರರೇ ದೇಶೀಯ ಟೂರ್ನಿಯಲ್ಲಿ ಭಾಗವಹಿಸಲು ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆಪ್ಟಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಪಂದ್ಯಾವಳಿ ಆರಂಭವಾಗಲಿದೆ. ಇದಕ್ಕೂ ಮುನ್ನ ದುಲೀಪ್ ಟ್ರೋಫಿ ನಡೆಯಲಿದೆ.
ದುಲೀಪ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ
ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ದುಲೀಪ್ ಟ್ರೋಫಿ ಆಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಇವರು ಯಾವಾಗ ಮೈದಾನ ಪ್ರವೇಶಿಸುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ.
ಬಿಸಿಸಿಐನಿಂದಲೂ ಖಡಕ್ ವಾರ್ನಿಂಗ್
ದುಲೀಪ್ ಟ್ರೋಫಿಗೆ ಎಲ್ಲಾ ಆಟಗಾರರು ಲಭ್ಯ ಇರಬೇಕು ಎಂದು ಬಿಸಿಸಿಐ ಈಗಾಗಲೇ ಖಡಕ್ ವಾರ್ನಿಂಗ್ ನೀಡಿದೆ. ಸದ್ಯದಲ್ಲೇ ಭಾರತ ಎ, ಇಂಡಿಯಾ ಬಿ, ಇಂಡಿಯಾ ಸಿ ಮತ್ತು ಇಂಡಿಯಾ ಡಿ ತಂಡಗಳನ್ನು ರಚಿಸಲಿದ್ದು, ಎಲ್ಲರೂ ಟೂರ್ನಿಯಲ್ಲಿ ಭಾಗಿಯಾಗಬೇಕು ಎಂದು ಸೂಚನೆ ಕೊಡಲಾಗಿದೆ. ಇದರಿಂದ ಎಚ್ಚೆತ್ತ ವಿರಾಟ್ ಕೊಹ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಕ್ಯಾಪ್ಟನ್ಸಿಯಿಂದ ಸ್ಟಾರ್ ಆಟಗಾರ ಔಟ್; ಸೂರ್ಯಕುಮಾರ್ ಯಾದವ್ಗೆ ಡಬಲ್ ಧಮಾಕ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ