/newsfirstlive-kannada/media/post_attachments/wp-content/uploads/2024/06/VIRAT_KOHLI_1-1.jpg)
ಇತ್ತೀಚೆಗಷ್ಟೇ ಭಾರತ ಕ್ರಿಕೆಟ್​ ತಂಡ ಶ್ರೀಲಂಕಾ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದೆ. ಶ್ರೀಲಂಕಾ ಪ್ರವಾಸ ಮುಗಿಯುತ್ತಿದ್ದಂತೆ ಟೀಮ್​ ಇಂಡಿಯಾ ಆಟಗಾರರಿಗೆ ಐದು ವಾರಗಳ ವಿಶ್ರಾಂತಿ ನೀಡಲಾಗಿದೆ. ಈ ಸಂದರ್ಭವನ್ನು ಸದುಪಯೋಗ ಮಾಡಿಕೊಳ್ಳಲು ಟೀಮ್​ ಇಂಡಿಯಾ ಆಟಗಾರರು ತಮ್ಮದೇ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅದರಲ್ಲೂ ಕೆಲವರು ಸ್ಟಾರ್​ ಆಟಗಾರರು ದೇಶೀಯ ಕ್ರಿಕೆಟ್​ ಆಡಲು ಮುಂದಾಗಿರುವುದು ವಿಶೇಷ.
ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿ ಮಾಡಿರೋ ಪ್ರಕಾರ ಟೀಮ್​ ಇಂಡಿಯಾ ಆಟಗಾರರು ವಿಶ್ರಾಂತಿ ಅವಧಿಯನ್ನು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸ್ಟಾರ್​ ಆಟಗಾರರೇ ದೇಶೀಯ ಟೂರ್ನಿಯಲ್ಲಿ ಭಾಗವಹಿಸಲು ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆಪ್ಟಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಪಂದ್ಯಾವಳಿ ಆರಂಭವಾಗಲಿದೆ. ಇದಕ್ಕೂ ಮುನ್ನ ದುಲೀಪ್ ಟ್ರೋಫಿ ನಡೆಯಲಿದೆ.
ದುಲೀಪ್ ಟ್ರೋಫಿಯಲ್ಲಿ ವಿರಾಟ್​ ಕೊಹ್ಲಿ
ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ದುಲೀಪ್ ಟ್ರೋಫಿ ಆಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಇವರು ಯಾವಾಗ ಮೈದಾನ ಪ್ರವೇಶಿಸುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ.
ಬಿಸಿಸಿಐನಿಂದಲೂ ಖಡಕ್​ ವಾರ್ನಿಂಗ್​​
ದುಲೀಪ್ ಟ್ರೋಫಿಗೆ ಎಲ್ಲಾ ಆಟಗಾರರು ಲಭ್ಯ ಇರಬೇಕು ಎಂದು ಬಿಸಿಸಿಐ ಈಗಾಗಲೇ ಖಡಕ್​ ವಾರ್ನಿಂಗ್​​​ ನೀಡಿದೆ. ಸದ್ಯದಲ್ಲೇ ಭಾರತ ಎ, ಇಂಡಿಯಾ ಬಿ, ಇಂಡಿಯಾ ಸಿ ಮತ್ತು ಇಂಡಿಯಾ ಡಿ ತಂಡಗಳನ್ನು ರಚಿಸಲಿದ್ದು, ಎಲ್ಲರೂ ಟೂರ್ನಿಯಲ್ಲಿ ಭಾಗಿಯಾಗಬೇಕು ಎಂದು ಸೂಚನೆ ಕೊಡಲಾಗಿದೆ. ಇದರಿಂದ ಎಚ್ಚೆತ್ತ ವಿರಾಟ್​​ ಕೊಹ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ