3 ತಿಂಗಳ ಹಿಂದೆಯೇ ಕೇಸ್ ಆಗಿತ್ತು- ನಟಿ ಶ್ರುತಿಗೆ ಚಾಕು ಇರಿದ ಪ್ರಕರಣದ ಬಗ್ಗೆ ಡಿಸಿಪಿ ಮಹತ್ವದ ಹೇಳಿಕೆ

author-image
Veena Gangani
Updated On
3 ತಿಂಗಳ ಹಿಂದೆಯೇ ಕೇಸ್ ಆಗಿತ್ತು- ನಟಿ ಶ್ರುತಿಗೆ ಚಾಕು ಇರಿದ ಪ್ರಕರಣದ ಬಗ್ಗೆ ಡಿಸಿಪಿ ಮಹತ್ವದ ಹೇಳಿಕೆ
Advertisment
  • ನಟಿ ಶ್ರುತಿ ಪತಿ ಅಮರೇಶ್ ಆಟೋ ಡ್ರೈವರ್ ಆಗಿ ಕೆಲಸ
  • ಮಂಜುಳ ಅಲಿಯಾಸ್​ ಶ್ರುತಿ ಚಾಕು ಇರಿತಕ್ಕೊಳಗಾದ ನಟಿ
  • ಮುನೇಶ್ವರ ಲೇಔಟ್​ನಲ್ಲಿ ನಡೆದ ಘಟನೆ ಬಗ್ಗೆ ಡಿಸಿಪಿ ಹೇಳಿದ್ದೇನು?

ಬೆಂಗಳೂರು: ಕನ್ನಡ ಕಿರುತೆರೆಯ ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್​ಗಳಲ್ಲಿ ನಟಿಸಿದ್ದ ನಟಿ ಮೇಲೆ ಖುದ್ದು ಪತಿಯೇ ಹಲ್ಲೆ ಮಾಡಿರೋ ಘಟನೆ ಬೆಳಕಿಗೆ ಬಂದಿದೆ. ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಯಾಗಿದ್ದ ಶ್ರುತಿ ಮೇಲೆ ಪತಿಯೇ ಚಾಕುವಿನಿಂದ ಇರಿದು ಹಲ್ಲೆ ಮಾಡಿರೋ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್​ನಲ್ಲಿ ನಡೆದಿದೆ. ಮಂಜುಳ ಅಲಿಯಾಸ್​ ಶ್ರುತಿ ಚಾಕು ಇರಿತಕ್ಕೊಳಗಾದ ನಟಿ.

ಇದನ್ನೂ ಓದಿ:ನಾನು ಕರ್ನಾಟಕದ ಹುಡುಗಿ; ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದ ಶಿಲ್ಪಾ ಶೆಟ್ಟಿ -VIDEO

publive-image

ಇನ್ನೂ, ಇದೇ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ಹನುಮಂತ ನಗರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿವೆ. ಮಂಜುಳಾ @ ಶ್ರುತಿ ಮತ್ತು ಅಮರೇಶ್ ದಂಪತಿ ಜಗಳ ಆಗಿದೆ, ಅಮರೇಶ್ ಆಟೋ ಡ್ರೈವರ್, ಮಂಜುಳಾ ನಟಿ ಅಂತಾ ಮಾಹಿತಿ ಇದೆ. ಇಬ್ಬರೂ 20 ವರ್ಷದ ಹಿಂದೆ ಮದುವೆ ಆಗಿದ್ರು, ಇಬ್ಬರು ಮಕ್ಕಳಿದ್ದಾರೆ. ಆದ್ರೆ, ಇಬ್ಬರ ಮಧ್ಯೆ ಆಗಾಗ ಕೌಟುಂಬಿಕ ಕಲಹ ಹಿನ್ನೆಲೆ ಜಗಳ ಆಗ್ತಿತ್ತು. ಮೂರು ತಿಂಗಳ ಹಿಂದೆ ಹನುಮಂತ ನಗರ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ನಂತರ ಸಂಬಂಧಿಕರು ಇಬ್ಬರನ್ನೂ ಸಂಧಾನ ಮಾಡಿ ಕಳಿಸಿದ್ರು. ಇಬ್ರೂ ಶ್ರೀನಗರದ ಮನೆಯಲ್ಲಿ ವಾಸ ಇದ್ರು. ಕಳೆದ ವಾರ ಇಬ್ಬರಿಗೂ ಜಗಳ‌ ಆಗಿದೆ. ಈ‌ ವೇಳೆ ಅಮರೇಶ್ ಪತ್ನಿ ಮಂಜುಳಾಗೆ ಚಾಕು ಇರಿದಿದ್ದಾನೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿ ಜೈಲಿಗೆ ಕಳಿಸಲಾಗಿದೆ ಎಂದು ಹೇಳಿದ್ದಾರೆ.

publive-image

ಏನಿದು ಕೇಸ್..?

ಪತ್ನಿ ಶೀಲ ಶಂಕಿಸಿ, ಕಳೆದ ಜುಲೈ​ 4ರಂದು ನಟಿ ಶ್ರುತಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 20 ವರ್ಷದ ಹಿಂದೆ ಅಮರೇಶ್ ಎಂಬಾತನ ಪ್ರೀತಿಸಿ ಮದುವೆಯಾಗಿದ್ದ ನಟಿ ಶ್ರುತಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ದಂಪತಿ ಹನುಮಂತ ನಗರದಲ್ಲಿ ಲೀಸ್​ಗೆ ಮನೆ ಪಡೆದು ವಾಸವಿದ್ದರು. ನಂತರ ಶ್ರುತಿ ನಡವಳಿಕೆ ಗಂಡ ಅಮರೇಶ್​ಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಕೂಡ ಸರಿ ಇರಲಿಲ್ಲವಂತೆ. ಹೀಗಾಗಿ ಕಳೆದ ಏಪ್ರಿಲ್​ನಲ್ಲಿ ನಟಿ ಗಂಡನಿಂದ ದೂರಾಗಿ ಅಣ್ಣನ ಮನೆಯಲ್ಲಿದ್ದರಂತೆ. ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಸಹ ಜಗಳ ನಡೆದಿತ್ತು. ಈ ಬಗ್ಗೆ ನಟಿ ಶ್ರುತಿ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದರಂತೆ. ಇದಾದ ಬಳಿಕ ಕಳೆದ ಗುರುವಾರ ರಾಜಿ ಸಂಧಾನ ಮಾಡಿ ಒಂದಾಗಿದ್ದರಂತೆ. ಇಬ್ಬರು ಒಂದಾದ ಮಾರನೇ ದಿನವೇ ಹೆಂಡತಿಗೆ ಪತಿ ಚಾಕು ಇರಿದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ಶುಕ್ರವಾರ ಮಕ್ಕಳು ಕಾಲೇಜಿಗೆ ಹೋದ ನಂತರ ಹೆಂಡತಿ ಮೇಲೆ ಪೆಪ್ಪರ್ ಸ್ಪ್ರೇ ಹೊಡೆದು ಪತಿ ಹಲ್ಲೆ ಮಾಡಿದ್ದಾರಂತೆ. ಚಾಕುವಿನಿಂದ ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದಾರಂತೆ. ಸಿನಿಮಾ ಸ್ಟೈಲ್​ನಲ್ಲಿ ತಲೆ ಕೂದಲು ಹಿಡಿದು, ಗೋಡೆಗೆ ತಲೆ ಗುದ್ದಿಸಿ ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ, ಈ ಘಟನೆ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹತ್ಯೆಗೆ ಯತ್ನ ಪ್ರಕರಣ ದಾಖಲಿಸಿ ಆರೋಪಿ ಅಮರೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಗಂಭೀರವಾಗಿ ಗಾಯಗೊಂಡ ನಟಿ ಶ್ರುತಿ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment