ದರ್ಶನ ಗ್ಯಾಂಗ್​ಗೆ ಜಾಮೀನು; ಬೇಸರದಲ್ಲಿ ರೇಣುಕಾಸ್ವಾಮಿ ತಂದೆ ಹೇಳಿದ್ದೇನು?

author-image
Veena Gangani
Updated On
ನಮ್ಮ ಮಗನೇ ಹುಟ್ಟಿ ಬಂದಷ್ಟು ಸಂತೋಷ.. ರೇಣುಕಾಸ್ವಾಮಿ ನೆನೆದು ಕಣ್ಣೀರಿಟ್ಟ ತಂದೆ
Advertisment
  • ದರ್ಶನ್​ ಸೇರಿ ಒಟ್ಟು 7 ಮಂದಿಗೆ ಜಾಮೀನು ಮಂಜೂರು
  • ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಬಿಗ್​ ಟ್ವಿಸ್ಟ್​
  • ನಮಗೆ ನ್ಯಾಯಾಂಗದ ಬಗ್ಗೆ ನಂಬಿಕೆ ಇದೆ ಎಂದ ಶಿವನಗೌಡ್ರು

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಆರೋಪಿಗಳಿಗೆ ಜಾಮೀನು‌ ನೀಡಲಾಗಿದೆ. ಎ1 ದರ್ಶನ್​ ಸೇರಿದಂತೆ ಎ2 ಪವಿತ್ರಾ ಗೌಡ, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ12 ಲಕ್ಷ್ಮಣ್, ಎ11 ನಾಗರಾಜ್, ಎ14 ಪ್ರದೋಷ್​​ಗೆ ಜಾಮೀನು ಮಂಜೂರು ಮಾಡಲಾಗಿದೆ.

ಇದನ್ನೂ ಓದಿ:Breaking: ದರ್ಶನ್​​ಗೆ ಬಿಗ್​ ರಿಲೀಫ್; ಹೈಕೋರ್ಟ್​ನಿಂದ ಷರತ್ತುಬದ್ಧ ಜಾಮೀನು ಮಂಜೂರು

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಶಿವನಗೌಡ್ರು ಪ್ರತಿಕ್ರಿಯೆ ನೀಡಿದ್ದಾರೆ. ಆರೋಪಿಗಳಿಗೆ ಜಾಮೀನಾಗಿದೆ ಎಂದು ಮಾಧ್ಯಮಗಳ‌ ಮೂಲಕ ತಿಳಿತು. ಪ್ರಾರಂಭದಲ್ಲಿ ಈಗ ಜಮೀನು ನೀಡಿದ್ದರೂ ತೀರ್ಪಿನಲ್ಲಿ ನ್ಯಾಯ ಸಿಗುತ್ತದೆ. ನಮಗೆ ನ್ಯಾಯಾಂಗದ ಬಗ್ಗೆ ನಂಬಿಕೆ ಇದೆ. ಅದರ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

publive-image

ನಟ ದರ್ಶನ್ ನಿಮ್ಮ ಮನೆಗೆ ಬಂದರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ನಮ್ಮ ಮನೆಗೆ ಬಂದರೆ ಎಂಬ ವಿಚಾರ ನಮ್ಮಲ್ಲಿ ಚರ್ಚೆ ಇಲ್ಲ. ನಮ್ಮ ಮಗನನ್ನ ಕಳೆದುಕೊಂಡಿದ್ದೇವೆ. ದರ್ಶನ್ ಬರುವುದು ಬೇಕಿಲ್ಲ. ನನ್ನ ಮಗನ ಸಾವಿಗೆ ನ್ಯಾಯ ಬೇಕಿದೆ ಅಷ್ಟೇ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment