/newsfirstlive-kannada/media/post_attachments/wp-content/uploads/2025/05/Mock-drill.jpg)
ಯುದ್ಧ.. ಭಾರತ-ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ದಟ್ಟವಾಗಿ ಆವರಿಸ್ತಿದೆ. ಉಗ್ರರು ಪಹಲ್ಗಾಮ್ನಲ್ಲಿ 26 ಹಿಂದೂಗಳ ನರಮೇಧ ಮಾಡ್ತಿದ್ದಂತೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಸತತ 11ನೇ ರಾತ್ರಿಯೂ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಸ್ಟೇಷನ್ಗಳ ಮೇಲೆ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತ ಪ್ರತಿದಾಳಿ ಕೂಡ ನಡೆಸಿದೆ. ಈಗ ಮತ್ತೊಂದು ಲೆವೆಲ್ಗೆ ಪ್ರತೀಕಾರವನ್ನು ಕೊಂಡೊಯ್ಯಲು ಭಾರತ ಸರ್ಕಾರ ಮುಂದಾಗಿದೆ. ನಾಳೆ ದೇಶಾದ್ಯಂತ ಮಾಕ್ ಡ್ರಿಲ್ ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ನಾಗರಿಕರ ರಕ್ಷಣೆ ಸಂಬಂಧ ನಾಳೆ ದೇಶಾದ್ಯಂತ ಮಾಕ್ ಡ್ರಿಲ್ ಅಂದ್ರೆ ಅಣಕು ಪ್ರದರ್ಶನ ಮಾಡಿಸಲು ಸೂಚಿಸಿದೆ.
ಇದನ್ನೂ ಓದಿ: ಮೇ 7ಕ್ಕೆ ಮಾಕ್ ಡ್ರಿಲ್.. 54 ವರ್ಷದ ಬಳಿಕ ಕೇಂದ್ರ ಗೃಹ ಇಲಾಖೆ ಸೂಚನೆ; ಏನಿದರ ವಿಶೇಷ?
ನಾಳೆ ಏನೆಲ್ಲ ನಡೆಯುತ್ತದೆ..?
- ಯುದ್ಧ ನೋಡದ ಇಂದಿನ ಪೀಳಿಗೆಗೆ ಶತ್ರುಗಳಿಂದ ಸ್ವಯಂ ರಕ್ಷಣೆ ಸಂಬಂಧ ಕಾರ್ಯಕ್ರಮ
- ವಾಯುದಾಳಿ ಎಚ್ಚರಿಕೆ: ಸುಕ್ಷ್ಮ ಪ್ರದೇಶಗಳಲ್ಲಿ ಶತ್ರುಗಳಿಂದ ವಾಯು ದಾಳಿ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಯುದಾಳಿಯ ಸೈರನ್ ಮೊಳಗಿಸಿ ಮಾಹಿತಿ ನೀಡುವುದು.
- ರಕ್ಷಣೆ ಕುರಿತು ತರಬೇತಿ: ಪ್ರತಿಕೂಲ ದಾಳಿ ವೇಳೆ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ತರಬೇತಿ ನೀಡಲಾಗುತ್ತದೆ. ಪ್ರಸ್ತುತ ಇರುವ ಪೀಳಿಗೆ ಯುದ್ಧವನ್ನು ನೋಡಿಲ್ಲ. ಹೀಗಾಗಿ ಇದು ತುಂಬಾನೇ ಮುಖ್ಯವಾಗಿದೆ.
- ವಿದ್ಯುತ್ ದೀಪ್ ಬಂದ್: ವಾಯುದಾಳಿ ಸಂದರ್ಭದಲ್ಲಿ ನಗರ ಮತ್ತು ಹಳ್ಳಿಗಳಲ್ಲಿ ವಿದ್ಯುತ್ ದೀಪ್ ಸಂಪೂರ್ಣ ಬಂದ್ ಆಗಿರಲಿದೆ. ರಾತ್ರಿ ವಾಹನ ಸಂಚಾರ ಸ್ಥಗಿತವಾಗಿರಲಿದೆ. ವೈರಿಗಳಿಗೆ ಜನಸಂಖ್ಯೆ ವಾಸಿಸುವ ಗುರುತು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತದೆ. ಅಂತೆಯೇ 244 ಜಿಲ್ಲೆಗಳಲ್ಲಿ ವಿದ್ಯುತ್ ದೀಪ್ ಬಂದ್ ಆಗಲಿದೆ.
- ಪ್ರಮುಖ ಸ್ಥಾವರಗಳ ಮರೆಮಾಚುವಿಕೆ: ದೇಶದ ಆಸ್ತಿ ಆಗಿರುವ ಪ್ರಮುಖ ಸ್ಥಾವರಗಳನ್ನು ಶತ್ರುಗಳಿಂದ ಬಚ್ಚಿಟ್ಟುಕೊಳ್ಳುವುದು ಮುಖ್ಯವಾಗಿದೆ. ಅವುಗಳ ಮೇಲೆ ದಾಳಿ ಆಗದಂತೆ ಮರೆಮಾಚಿಕೊಳ್ಳಬೇಕಾದ ಅಗತ್ಯ ಇರುತ್ತದೆ. ಹೀಗಾಗಿ ಈ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ
- ರೆಸ್ಕ್ಯೂ ಆಪರೇಷನ್ ಬಗ್ಗೆ ತರಬೇತಿ: ದುರ್ಗಮ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದವರನ್ನು ಹೇಗೆ ರಕ್ಷಣೆ ಮಾಡಬೇಕು ಅನ್ನೋದ್ರ ಬಗ್ಗೆ ಅಣಕು ಕಾರ್ಯಾಚರಣೆ ನಡೆಸಲಾಗುತ್ತದೆ
ಇದನ್ನೂ ಓದಿ: ದೇಶದ 244 ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್.. ಈ ಯುದ್ಧ ಕವಾಯತ್ನ ಉದ್ದೇಶ ಏನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ