ಪೀಣ್ಯ ಮೇಲ್ಸೇತುವೆ ಮೇಲೆ 2 ವರ್ಷಗಳಿಂದ ಬಸ್ಗೆ ಅವಕಾಶವಿಲ್ಲ
ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ಗೆ ಈಗ ಬ್ರೇಕ್!
ಬಸ್, ಲಾರಿ, ಟ್ರಕ್ ಸಂಚಾರಕ್ಕೆ ಅವಕಾಶ ಆದರೆ ಷರತ್ತು ಅನ್ವಯ
ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಗುಡ್ನ್ಯೂಸ್ ಸಿಕ್ಕಿದೆ. ಶೀಘ್ರದಲ್ಲೇ ಪೀಣ್ಯ ಮೇಲ್ಸೇತುವೆ ಮೇಲೆ ಎಲ್ಲ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಸಿಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಟ್ರಾಫಿಕ್ ಪೊಲೀಸರು ಈ ಬಗ್ಗೆ ಮಹತ್ವದ ಮಾಹಿತಿ ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಪೀಣ್ಯ ಫ್ಲೈಓವರ್ ಬಂದ್.. ವಾಹನ ಸವಾರರ ಪರದಾಟ.. ಫುಲ್ ಟ್ರಾಫಿಕ್ ಜಾಮ್
ನಗರದ ಪೀಣ್ಯ ಮೇಲ್ಸೇತುವೆಯಲ್ಲಿ ಸದ್ಯ ಲಘು ವಾಹನಗಳು ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಇದೇ ಜುಲೈ 29ರಿಂದ ಬಸ್, ಲಾರಿ, ಟ್ರಕ್ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ಇದನ್ನೂ ಓದಿ: ಒಬ್ಬಂಟಿಯಾಗಿ ಓಡಾಡೋ ಹೆಣ್ಮಕ್ಕಳೇ ಹುಷಾರ್.. ಬೆಂಗಳೂರಲ್ಲಿ ಓರ್ವ ಯುವತಿಗೆ ಏನಾಯ್ತು ಅಂದರೆ..
ಪೀಣ್ಯ ಮೇಲ್ಸೇತುವೆ ಮೇಲೆ ಕಳೆದ 2 ವರ್ಷಗಳಿಂದ ಬಸ್ ಸಂಚಾರಕ್ಕೆ ನಿರ್ಬಂಧ ಇತ್ತು. ಇದರಿಂದ ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಉತ್ತರ ಕರ್ನಾಟಕ ಭಾಗಕ್ಕೆ ಸಂಚರಿಸುವ ಸಾಕಷ್ಟು ಬಸ್ಗಳು ಟ್ರಾಫಿಕ್ ಜಾಮ್ನಲ್ಲಿ ಸಿಲುಕುತ್ತಿದ್ದವು.
ಹೊಸ ಗೈಡ್ಲೈನ್ಸ್ ಏನು?
ಇದೇ ಜುಲೈ 29ರಿಂದ ಪೀಣ್ಯ ಮೇಲ್ಸೇತುವೆ ಮೇಲೆ ಬೆಳಗ್ಗೆ, ರಾತ್ರಿ ವೇಳೆ ನಗರ ಪ್ರವೇಶಿಸುವ, ನಗರದಿಂದ ನಿರ್ಗಮಿಸುವ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಭಾರಿ ವಾಹನಗಳು ಮೇಲ್ಸೇತುವೆಯಲ್ಲಿ ಎಡಭಾಗದಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಸಂಚಾರ ಮಾಡಬೇಕು. ಪೀಣ್ಯ ಎಲಿವೇಟೆಡ್ ಕಾರಿಡಾರ್ನಲ್ಲಿ ಎಲ್ಲಾ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ.
ಶುಕ್ರವಾರ ಮಾತ್ರ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರಲಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪೀಣ್ಯ ಮೇಲ್ಸೇತುವೆ ಮೇಲೆ 2 ವರ್ಷಗಳಿಂದ ಬಸ್ಗೆ ಅವಕಾಶವಿಲ್ಲ
ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ಗೆ ಈಗ ಬ್ರೇಕ್!
ಬಸ್, ಲಾರಿ, ಟ್ರಕ್ ಸಂಚಾರಕ್ಕೆ ಅವಕಾಶ ಆದರೆ ಷರತ್ತು ಅನ್ವಯ
ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಗುಡ್ನ್ಯೂಸ್ ಸಿಕ್ಕಿದೆ. ಶೀಘ್ರದಲ್ಲೇ ಪೀಣ್ಯ ಮೇಲ್ಸೇತುವೆ ಮೇಲೆ ಎಲ್ಲ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಸಿಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಟ್ರಾಫಿಕ್ ಪೊಲೀಸರು ಈ ಬಗ್ಗೆ ಮಹತ್ವದ ಮಾಹಿತಿ ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಪೀಣ್ಯ ಫ್ಲೈಓವರ್ ಬಂದ್.. ವಾಹನ ಸವಾರರ ಪರದಾಟ.. ಫುಲ್ ಟ್ರಾಫಿಕ್ ಜಾಮ್
ನಗರದ ಪೀಣ್ಯ ಮೇಲ್ಸೇತುವೆಯಲ್ಲಿ ಸದ್ಯ ಲಘು ವಾಹನಗಳು ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಇದೇ ಜುಲೈ 29ರಿಂದ ಬಸ್, ಲಾರಿ, ಟ್ರಕ್ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ಇದನ್ನೂ ಓದಿ: ಒಬ್ಬಂಟಿಯಾಗಿ ಓಡಾಡೋ ಹೆಣ್ಮಕ್ಕಳೇ ಹುಷಾರ್.. ಬೆಂಗಳೂರಲ್ಲಿ ಓರ್ವ ಯುವತಿಗೆ ಏನಾಯ್ತು ಅಂದರೆ..
ಪೀಣ್ಯ ಮೇಲ್ಸೇತುವೆ ಮೇಲೆ ಕಳೆದ 2 ವರ್ಷಗಳಿಂದ ಬಸ್ ಸಂಚಾರಕ್ಕೆ ನಿರ್ಬಂಧ ಇತ್ತು. ಇದರಿಂದ ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಉತ್ತರ ಕರ್ನಾಟಕ ಭಾಗಕ್ಕೆ ಸಂಚರಿಸುವ ಸಾಕಷ್ಟು ಬಸ್ಗಳು ಟ್ರಾಫಿಕ್ ಜಾಮ್ನಲ್ಲಿ ಸಿಲುಕುತ್ತಿದ್ದವು.
ಹೊಸ ಗೈಡ್ಲೈನ್ಸ್ ಏನು?
ಇದೇ ಜುಲೈ 29ರಿಂದ ಪೀಣ್ಯ ಮೇಲ್ಸೇತುವೆ ಮೇಲೆ ಬೆಳಗ್ಗೆ, ರಾತ್ರಿ ವೇಳೆ ನಗರ ಪ್ರವೇಶಿಸುವ, ನಗರದಿಂದ ನಿರ್ಗಮಿಸುವ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಭಾರಿ ವಾಹನಗಳು ಮೇಲ್ಸೇತುವೆಯಲ್ಲಿ ಎಡಭಾಗದಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಸಂಚಾರ ಮಾಡಬೇಕು. ಪೀಣ್ಯ ಎಲಿವೇಟೆಡ್ ಕಾರಿಡಾರ್ನಲ್ಲಿ ಎಲ್ಲಾ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ.
ಶುಕ್ರವಾರ ಮಾತ್ರ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರಲಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ