/newsfirstlive-kannada/media/post_attachments/wp-content/uploads/2025/07/PRAJWAL_REVANNA-1.jpg)
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಆಘಾತವಾಗಿದೆ. ಜಾಮೀನಿಗಾಗಿ ಜನಪ್ರತಿನಿಧಿಗಳ ನ್ಯಾಯಾಯದಲ್ಲಿ 2ನೇ ಬಾರಿ ಸಲ್ಲಿಸಿದ್ದ ಅರ್ಜಿಯೂ ವಜಾಗೊಂಡಿದೆ. ಈಗಾಗಲೇ 14 ತಿಂಗಳಿಂದ ಜೈಲಿನಲ್ಲಿರುವ ಪ್ರಜ್ವಲ್ಗೆ ಮತ್ತಷ್ಟು ದಿನ ಜೈಲೇ ಗತಿ ಆಗಿದೆ.
ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ಶಾಕ್
ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ. ಜನ ಸೇವೆ ಮೂಲಕ ಜೆಡಿಎಸ್ ಪಕ್ಷವನ್ನು ಕಟ್ಟ ಬೇಕಿದ್ದ ನಾಯಕ. ಮಾಡಬಾರದ ಕೆಲಸ ಮಾಡಿ, ಜೈಲು ಕಂಬಿ ಹಿಂದೆ ಲಾಕ್ ಆಗಿದ್ದಾರೆ. ಕಳೆದ 14 ತಿಂಗಳಿನಿಂದ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ನ್ಯಾಯಾಲಯದ ಮತ್ತೊಮ್ಮೆ ಶಾಕ್ ನೀಡಿದ್ದು, ಮತ್ತಷ್ಟು ದಿನ ಜೈಲೇ ಗತಿಯಾಗಿದೆ.
ಹೊಳೆನರಸೀಪುರ ಕೇಸ್ನಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ವಜಾಗೊಳಿಸಿ ಆದೇಶ ಹೊರಡಿಸಿದೆ.
ಪ್ರಜ್ವಲ್ಗೆ ಮತ್ತಷ್ಟು ದಿನ ಜೈಲೇ ಗತಿ
- ಹೊಳೆನರಸೀಪುರ ಕೇಸ್ನಲ್ಲಿ ಈ ಹಿಂದೆಯೂ ಬೇಲ್ ಅರ್ಜಿ ಸಲ್ಲಿದ್ರು
- ಮೊದಲ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ
- ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಎಲ್ಲ ಕಡೆ ವಜಾಗೊಂಡಿತ್ತು
- ಮತ್ತೆ ಜಾಮೀನು ಕೋರಿ ಕಳೆದ ಜೂನ್ನಲ್ಲಿ ಹೈಕೋರ್ಟ್ಗೆ ಅರ್ಜಿ
- ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚನೆ
- ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ಆದೇಶ ನೀಡುವಂತೆ ಸೂಚಿಸಿತ್ತು
- ಅದರಂತೆ ಜನಪ್ರತಿನಿಧಿಗಳ ಕೋರ್ಟ್ಗೆ 2ನೇ ಬಾರಿ ಪ್ರಜ್ವಲ್ ಅರ್ಜಿ
- ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿ 14 ತಿಂಗಳು ಕಳೆದಿದೆ
- ಇದೇ ಕೇಸ್ನಲ್ಲಿ HD.ರೇವಣ್ಣ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
- ಹೀಗಾಗಿ ಪ್ರಜ್ವಲ್ಗೂ ಜಾಮೀನು ನೀಡುವಂತೆ ಕೋರಿದ್ದ ವಕೀಲರು
- ವಾದ- ಪತ್ರಿವಾದ ಆಲಿಸಿದ್ದ ಕೋರ್ಟ್ ಇವತ್ತಿಗೆ ತೀರ್ಪು ಕಾಯ್ದಿಸಿತ್ತು
- ಇದೀಗ ತೀರ್ಪು ಪ್ರಕಟಿಸಿದ್ದು, ಪ್ರಜ್ವಲ್ ಸಲ್ಲಿಸಿದ್ದ ಬೇಲ್ ಅರ್ಜಿ ತಿರಸ್ಕಾರ
ಹಾಗಾದ್ರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಪ್ರಜ್ವಲ್ ರೇವಣ್ಣ ಬೇಲ್ ಅರ್ಜಿ ವಜಾಗೊಳಿಸಲು ನೀಡಿರುವ ಕಾರಣವೇನು?.
ಇದನ್ನೂ ಓದಿ:ಪ್ರಜ್ವಲ್ ರೇವಣ್ಣಗೆ ಮತ್ತೆ ಬಿಗ್ ಶಾಕ್.. ಜಾಮೀನು ಅರ್ಜಿ ವಜಾ ಮಾಡಿದ ನ್ಯಾಯಾಲಯ
ಜಾಮೀನು ನೀಡದಿರಲು ಕಾರಣಗಳೇನು?
- ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳಿವೆ
- ಇತರೆ ಮೂರು ಕೇಸ್ಗಳಲ್ಲಿ ಇನ್ನೂ ಸಾಕ್ಷಿದಾರರ ವಿಚಾರಣೆ ಆಗಿಲ್ಲ
- ಪ್ರಜ್ವಲ್ ರೇವಣ್ಣ ಮಾಜಿ ಸಂಸದರಾಗಿದ್ದು ಪ್ರಭಾವಿಗಳಾಗಿದ್ದಾರೆ
- ಒಂದ್ವೇಳೆ ಬೇಲ್ ಕೊಟ್ರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು
- ಹೀಗಾಗಿ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಸಾಧ್ಯವಿಲ್ಲ
ಹೊಳೆನರಸೀಪುರ ಕೇಸ್ನಲ್ಲಿ ಈ ಬಾರಿಯಾದರೂ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಮತ್ತೆ ನಿರಾಸೆ ಆಗಿದೆ. ಜುಲೈ 30ರಂದು ಹೊಳೆನರಸೀಪುರದ ಅತ್ಯಾಚಾರ ಕೇಸ್ನ ತೀರ್ಪು ಪ್ರಕಟವಾಗಲಿದ್ದು, ಜುಲೈ 30 ಪ್ರಜ್ವಲ್ ರೇವಣ್ಣ ಪಾಲಿಗೆ ಬಿಗ್ ಡೇ ಆಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ