/newsfirstlive-kannada/media/post_attachments/wp-content/uploads/2025/05/India-strikes-4.jpg)
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತೀಯ ಸೇನೆ ಹಾಗೂ ಭಾರತೀಯ ವಾಯುಪಡೆ ಜಂಟಿಯಾಗಿ ಆಪರೇಷನ್ ಸಿಂಧೂರ್ ಆರಂಭಿಸಿವೆ. ಮುರೀದ್ಕೆ, ಮುಜಾಫರ್ಬಾದ್, ಬಹಾವಲ್ಪುರ್, ಕೋಟ್ಲಿ, ಚಾಕ್ಅಮ್ರು, ಗುಲ್ಪುರ್, ಭಿಂಬರ್ ಪ್ರದೇಶಗಳಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿಯಾಗಿದೆ.
ಇನ್ನು ಭಾರತೀಯ ವಾಯುಪಡೆಯು ರಫೇಲ್ ಜೆಟ್ ಯುದ್ಧ ವಿಮಾನ ಬಳಿಕ ಸ್ಕಲ್ಪ್ ಕ್ಷಿಪಣಿಯನ್ನು ಉಡಾಯಿಸಿದೆ. ವಿಶೇಷ ಅಂದರೆ ಹಫೀಜ್ ಸಯೀದ್ ಅಡಗುತಾಣದ ಮೇಲೆ ಅಟ್ಯಾಕ್ ಮಾಡಲಾಗಿದೆ. ಪಾಕಿಸ್ತಾನಕ್ಕೆ ಚೀನಾ ನೀಡಿದ್ದ ಜೆಫ್-17 ಯುದ್ಧ ವಿಮಾನವನ್ನೂ ಹೊಡೆದುರುಳಿಸಲಾಗಿದೆ.
ಭಾರತ ಯಾವೆಲ್ಲ ಅಸ್ತ್ರ ಬಳಸಿದೆ..?
- ಭಾರತೀಯ ವಾಯುಪಡೆಯು ರಫೇಲ್ನ ಸ್ಕಾಲ್ಪ್ ಮಿಸೈಲ್ ಬಳಸಿ ದಾಳಿ
- ಜೊತೆಗೆ ಬ್ರಹ್ಮೋಸ್ ಮಿಸೈಲ್ ಮೂಲಕವೂ ಉಗ್ರರ ನೆಲೆಗಳ ಮೇಲೆ ಅಟ್ಯಾಕ್
- ಪಾಕ್ ಟೆರರ್ ಕಂಟ್ರೋಲ್ ರೂಮುಗಳನ್ನೇ ಧ್ವಂಸ ಮಾಡಿದ ಭಾರತ
- ಪಾಕ್ ಐಎಸ್ಐ-ಟೆರರ್ ಕಂಟ್ರೋಲ್ ರೂಮ್ ಕೂಡ ಧ್ವಂಸಗೊಂಡಿದೆ
- ಹ್ಯಾಮರ್ ಬಾಂಬ್ ಬಳಸಿ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ